ಬೇರೆ ಪಕ್ಷಕ್ಕೆ ಆಹ್ವಾನವಿದೆ, ಕುಟುಂಬದ ಜತೆ ಚರ್ಚಿಸಿ ನಾಳೆ ನಿರ್ಧಾರ: ಡಿ ವಿ ಸದಾನಂದಗೌಡ

Date:

“ಇವತ್ತು ನನ್ನ ಜನ್ಮದಿನ, ಇಡೀ ದಿನ ಕುಟುಂಬದ ಸದಸ್ಯರ ಜತೆ ಕಳೆಯುವೆ. ಮುಂದಿನ ರಾಜಕೀಯ ಹೆಜ್ಜೆಗಳ ಬಗ್ಗೆ ಕುಟುಂಬ ಸದಸ್ಯರ ಜತೆ ಚರ್ಚಿಸಿ, ನನ್ನ ನಿರ್ಣಯವನ್ನು ನಾಳೆ ಸುದ್ದಿಗೋಷ್ಠಿ ಮಾಡಿ ತಿಳಿಸುವೆ” ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಹೇಳಿದರು.

ಬೆಂಗಳೂರು ಉತ್ತರ ಕ್ಷೇತ್ರದಿಂದ ಸದಾನಂದಗೌಡರಿಗೆ ಬಿಜೆಪಿ ಟಿಕೆಟ್ ತಪ್ಪಿದೆ. ಪಕ್ಷದ ಈ ನಿರ್ಧಾರದಿಂದ ಅವರು ಬೇಸರಗೊಂಡಿದ್ದಾರೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ಕಾಂಗ್ರೆಸ್​ ಮುಖಂಡರು ನಿಮ್ಮನ್ನು ಸಂಪರ್ಕಿಸುತ್ತಿರುವುದು ನಿಜವೇ ಎಂದು ಪ್ರಶ್ನಿಸಿದಾಗ, “ವಿವಿಧ ರಾಜಕೀಯ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕ ಮಾಡುತ್ತಿದ್ದಾರೆ. ಬೇರೆ ಬೇರೆ ಸಂಗತಿಗಳು ನಡೀತಿವೆ” ಎಂದಷ್ಟೇ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಪಕ್ಷದ ಪ್ರಮುಖ ನಾಯಕರೊಬ್ಬರು ಬಂದು ಸಾಂತ್ವನ ಮಾಡಿರುವುದು ನಿಜ. ದೆಹಲಿಯಲ್ಲಿ, ರಾಜ್ಯದಲ್ಲಿ ಒಂದಷ್ಟು ವಿದ್ಯಮಾನ ನಡೆದಿವೆ. ನಿಮಗೆ ಟಿಕೆಟ್ ಅಂದರು, ಕೊನೆ ಕ್ಷಣದಲ್ಲಿ ರಕ್ಷಣೆಗೆ ಬರಲಿಲ್ಲ. ಕೆಲವೊಂದು ಮನದಾಳದ ವಿಚಾರವನ್ನ ಹೇಳಿಕೊಳ್ಳಬೇಕಿದೆ” ಎಂದರು.

ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಈಶ್ವರಪ್ಪ ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯಿಸಿ, “ಈಶ್ವರಪ್ಪ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಪಕ್ಷದಲ್ಲಿ ಯಾರಿಗೆಲ್ಲಾ ಮನಸ್ಸಿಗೆ ನೋವಾಗಿದೆಯೋ, ಒಟ್ಟಿಗೆ ಹೋಗಿ ವರಿಷ್ಠರ ಭೇಟಿಯಾಗಿ ತೀರ್ಮಾನಿಸೋಣ ಅಂದಿದ್ದೆ. ಆದರೆ ಈಶ್ವರಪ್ಪ ತಮ್ಮದೇ ಆದ ನಿರ್ಣಯ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...