‘ಇಂಡಿಯಾ’ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗುವ ಪರಿಸ್ಥಿತಿ ಇಲ್ಲ: ಎಚ್‌ಡಿ ಕುಮಾರಸ್ವಾಮಿ

Date:

“ವಿಪಕ್ಷಗಳು ಮಾಡಿಕೊಂಡಿರುವ ಇಂಡಿಯಾ ಮೈತ್ರಿಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆದರೆ ಸಂತೋಷ. ಆದರೆ ಆ ಪರಿಸ್ಥಿತಿ ಅಲ್ಲಿ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದಲಿತ ಸಮಾಜ ಖರ್ಗೆಯವರನ್ನು ನೋಡಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದೆ” ಎಂದರು.

“ಇಂಡಿಯಾ ಒಕ್ಕೂಟದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ಆಗಲಿ ಎಂದು ಹೇಳಿದ್ದಾರೆ. ಅವರು ದಲಿತ ಎಂದಲ್ಲ, ಓರ್ವ ಕನ್ನಡಿಗ ಎಂದು ಈ ಘೋಷಣೆ ಮಾಡಿದ್ದಾರೆ. ಬೇರೆ ರಾಜ್ಯದವರು ಈ ರೀತಿ ಹೇಳಿದರೆ, ಅಹಿಂದ ನಾಯಕ ಎಂದು ಹೇಳುತ್ತಿರುವ ಸಿದ್ದರಾಮಯ್ಯ ಮಾತ್ರ ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಾ. ಜಿ. ಪರಮೇಶ್ವರ್ 2013ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದಾಗ ಅವರನ್ನು ಮುಗಿಸಲು ಸಿದ್ದರಾಮಯ್ಯ ಪ್ರಯತ್ನ ಪಟ್ಟಿದ್ದರು. ಆದರೆ ಈಗ ಇಬ್ಬರೂ ಚೆನ್ನಾಗಿದ್ದಾರೆ. ಅದಕ್ಕೆ ಕಾರಣ ಏನು ಎನ್ನುವುದು ಗೊತ್ತಿಲ್ಲ. ಸಿದ್ದರಾಮಯ್ಯ ಅವರು ದಲಿತ ಸಮಾಜ, ಅಹಿಂದ ಹೆಸರು ಹೇಳುತ್ತಾರೆ. ಅಧಿಕಾರ ಹಿಡಿಯುವವರೆಗೆ ಅವರಿಗೆ ಅಹಿಂದ, ನಂತರ ‘ಅಹಿಂದ ಹಿಂದೆ, ನಾನು ಮುಂದೆ’ ಇದು ಸಿದ್ದರಾಮಯ್ಯ ನೀತಿ” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

“ನಾನು ಮಲ್ಲಿಕಾರ್ಜುನ ಖರ್ಗೆ ಪರವಾಗಿ ಬ್ಯಾಟಿಂಗ್ ಮಾಡುತ್ತಿಲ್ಲ. ಆದರೆ ಕರ್ನಾಟದವರು ಪ್ರಧಾನಿ ಆದರೆ ನಮಗೆ ಸಂತೋಷ. ನಾನು ಎನ್‌ಡಿಎ ಒಕ್ಕೂಟದಲ್ಲಿ ಇರಬಹುದು. ಹಾಗಿದ್ದರೂ, ದೇಶದ ರಾಜಕಾರಣ ನನಗೆ ಗೊತ್ತು. ಖರ್ಗೆ ಪ್ರಧಾನಿ ಆಗುತ್ತಾರೋ, ಬಿಡುತ್ತಾರೋ ಬೇರೆ ಮಾತು. ಅವರು ಈ ದೇಶದ ಪ್ರಧಾನಿ ಆದರೆ ಸಂತೋಷ. ಆದರೆ, ಈಗಿನ ಪರಿಸ್ಥಿತಿ ನೋಡಿದರೆ ಅವರು ಆಗುವ ಸಾಧ್ಯತೆ ಇಲ್ಲ” ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.

“ನಿನ್ನೆ ರಾಹುಲ್‌ ಗಾಂಧಿ ಪ್ರಧಾನಿ ಆಗಬೇಕು ಎಂದು ಹೇಳಿ ಸಿದ್ದರಾಮಯ್ಯ ಅವರು ಸಂಕುಚಿತ ಮನೋಭಾವ ತೋರಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ದುಡಿಮೆಗೆ ತಕ್ಕ ಸ್ಥಾನಮಾನ ಸಿಗದೆ ಇದ್ದರೂ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಅವರು ಅಸ್ಥಿರ ಮಾಡಲಿಲ್ಲ,” ಎಂದು ಸಿದ್ದರಾಮಯ್ಯ ಕಾಲೆಳೆದರು.

ವಿಧಾನಸೌಧವನ್ನು ರಾಜಕೀಯ ಗಂಜಿ ಕೇಂದ್ರಗಳನ್ನಾಗಿಸುತ್ತಿದ್ದಾರೆ
ಸಚಿವ ಸ್ಥಾನ ಸಿಗದಿದ್ದ ಮೂವರು ಶಾಸಕರಿಗೆ ವಿಶೇಷ ಹುದ್ದೆ ನೀಡಿ, ಸಂಪುಟ ದರ್ಜೆ ಸ್ಥಾನಮಾನ ನೀಡಿರುವುದನ್ನು ಪ್ರಸ್ತಾಪಿಸಿದ ಕುಮಾರಸ್ವಾಮಿ, “ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ವಿಧಾನಸೌಧವನ್ನು ರಾಜಕೀಯ ಗಂಜಿ ಕೇಂದ್ರಗಳನ್ನಾಗಿ ಸೃಷ್ಟಿ ಮಾಡುತ್ತಿದ್ದಾರೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.

“ಈ ಸರಕಾರ ರೈತರನ್ನು ಬಹಳ ಕೇವಲವಾಗಿ ನಡೆಸಿಕೊಳ್ಳುತ್ತಿದೆ. ಆದರೆ, ಅಧಿಕಾರವನ್ನು ಭರ್ಜರಿಯಾಗಿ ಅನುಭವಿಸುತ್ತಿದೆ. 14 ಬಜೆಟ್‌ಗಳನ್ನು ಮಂಡಿಸಿ, ದಾಖಲೆ ಮಾಡಿದವರು ತಮಗೆ ಆರ್ಥಿಕ ಸಲಹೆಗಾರರನ್ನು ನೇಮಕ ಮಾಡಿಕೊಂಡಿದ್ದಾರೆ. ನೇಮಕ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯನವರಿಗೆ ಹ್ಯಾಟ್ಸಾಫ್” ಎಂದು ವ್ಯಂಗ್ಯವಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...