`ಯಾವ ಮೋದಿನೂ ಇಲ್ಲ, ಪಾದಿನೂ ಇಲ್ಲ’ ಬಿಜೆಪಿ ಶಾಸಕನ ಆಡಿಯೋ ವೈರಲ್

Date:

  • 3 ನಿಮಿಷ 19 ಸೆಕೆಂಡ್‌ನ ಆಡಿಯೋ ವೈರಲ್
  • ನಾನೇ ದೇವರು ಎಂದ ಶಿವರಾಜ್ ಪಾಟೀಲ್

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಸಂದರ್ಭದಲ್ಲಿಯೇ ಬಿಜೆಪಿ ಶಾಸಕರೊಬ್ಬರ ಆಡಿಯೋ ವೈರಲ್ ಆಗಿದೆ. ಶಾಸಕ, ಆಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಉಡಾಫೆಯಿಂದ ಮಾತನಾಡಿದ್ದು, ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.

ರಾಯಚೂರು ನಗರ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್‌ ಅವರು ಮಾತನಾಡಿದ 3 ನಿಮಿಷ 19 ಸೆಕೆಂಡ್‌ಗಳಿರುವ ಫೋನ್‌ ಸಂಭಾಷಣೆ ಆಡಿಯೋ ವೈರಲ್ ಆಗಿದೆ.

ಶಿವರಾಜ್ ಪಾಟೀಲ್‌ ಅವರು ಪ್ರಧಾನಿ ಮೋದಿ, ಸಚಿವ ಶ್ರೀರಾಮುಲು ಹಾಗೂ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಮಾತನಾಡಿದ್ದಾರೆ. “ಯಾವ ಮೋದಿನೂ ಇಲ್ಲ ಪಾದಿನೂ ಇಲ್ಲ, ಮೋದಿ ಬಲಗೈಗೂ ನಾನು ಕೇಳಲ್ಲ, ನಾನೇ ಸಿಂಗಲ್ ಆರ್ಮಿ” ಎಂದು ಬಿಜೆಪಿ ಶಾಸಕ ತಮ್ಮ ಆಪ್ತರೊಬ್ಬರ ಜೊತೆಗೆ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಚುನಾವಣೆ ಹತ್ತಿರವಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ವೈರಲ್ ಆಡಿಯೋದಿಂದ ಮುಜುಗರಕ್ಕೆ ಈಡಾಗಿದ್ದಾರೆ. ಶಿವರಾಜ್ ಪಾಟೀಲ್ ಸ್ವತಃ ತಮ್ಮನ್ನು ತಾವು ಹೊಗಳಿಕೊಳ್ಳುವ ಭರದಲ್ಲಿ ಬಿಜೆಪಿ ವರಿಷ್ಠರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

ಆಡಿಯೋದಲ್ಲಿ ಏನಿದೆ?

“ಮೋದಿಯ ರೈಟ್ ಹ್ಯಾಂಡ್‌ಗೇ ನಾನು ಕೇಳಲ್ಲ. ನಾನೇ ಸಿಂಗಲ್ ಆರ್ಮಿ, ನನಗೆ ರೈಟ್ ಇಲ್ಲ ಲೆಫ್ಟ್ ಇಲ್ಲ ನನ್ನ ಕೈ ನನ್ನ ಕಾಲು, ನಾನೇ ಮೋದಿ, ನಾನೇ ಟ್ರಂಪ್ ಯಾವ ಬದನೆಕಾಯಿ ಮಾತು ಸಹ ನಾನು ಕೇಳಂಗಿಲ್ಲ” ಎಂದು ಶಿವರಾಜ್ ಪಾಟೀಲ್ ಮೋದಿ ಕುರಿತು ಉಡಾಫೆಯ ಮಾತನಾಡಿದ್ದಾರೆ.

“ಯಾವ ಮೋದಿಯೂ ಇಲ್ಲ. ಪಾದಿಯೂ ಇಲ್ಲ. ನಾನೇ ಶಿವರಾಜ್ ಪಾಟೀಲ್. ಶಿವರಾಜ್ ಪಾಟೀಲ್ ಅಂದ್ರೇ ದೇವರು, ನಾನು ಇದ್ರೇನೆ ಜಗತ್ತು” ಎಂದು ಆಡಿಯೋದಲ್ಲಿ ಹೇಳಿಕೊಂಡಿದ್ದಾರೆ.

“ಸೋಮಶೇಖರ್ ರೆಡ್ಡಿ, ಶ್ರೀರಾಮುಲುಗೂ ನಾನು ಕೇರ್ ಮಾಡಲ್ಲ. ನನ್ನ ಮುಂದೆ ಏನೂ ನಡೆಯಂಗಿಲ್ಲ. ಮೊದಲಿನಿಂದಲೂ ನನ್ನ ಕ್ಷೇತ್ರಕ್ಕೆ ಲೀಡರ್ ಗಳಿಗೆ ಬಾ ಅಂತೀನಾ…? ನನಗೆ ಯಾರೂ ಇಲ್ಲ.. ನಾನು ಸಿಂಗಲ್ ಆರ್ಮಿ” ಎಂದಿದ್ದಾರೆ.

“ಎಲೆಕ್ಷನ್‌ನಲ್ಲಿ ಸೋತರು ಚಿಂತೆಯಿಲ್ಲ ಗೆದ್ರು ಚಿಂತೆಯಿಲ್ಲ ಮಲಗಿದರೂ ಚಿಂತೆಯಿಲ್ಲ. ಜಗತ್ತಿನಲ್ಲಿ ಚಿಂತೆಯಿಲ್ಲದ ಪುರುಷ ಅಂದ್ರೆ ಅದು ಶಿವರಾಜ್ ಪಾಟೀಲ್. ನಾನು ದೇವರು ಇದ್ದಂಗೆ, ಅದಕ್ಕೆ ನಮ್ಮ ಹುಡುಗರಿಗೆ ಹೇಳೀನಿ. ದಿನಾಲೂ ನನ್ನ ಕಾಲಿಗೆ ನಮಸ್ಕಾರ ಮಾಡ್ರಿ ಅಂತ. ಶಿವರಾಜ್ ಪಾಟೀಲ್ ದೈವ ಬರೆಸಿಕೊಳ್ಳಲ್ಲ.. ನಾನೇ ದೈವ ಬರಿತೀನಿ” ಎಂದು ಶಿವರಾಜ್ ಪಾಟೀಲ್ ತಮ್ಮನ್ನು ತಾವು ಹೊಗಳಿಕೊಂಡು ಬಿಜೆಪಿ ವರಿಷ್ಠರನ್ನು ತೆಗಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...