ಗಡಿಯಲ್ಲಿರುವ ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಮಧು ಬಂಗಾರಪ್ಪ

Date:

ಹಿಂದಿನ ಬಿಜೆಪಿ ಸರ್ಕಾರದವರು ಸುಮಾರು ನಾಲ್ಕು ಸಾವಿರ ಶಾಲೆಗಳನ್ನು ಮುಚ್ಚಿದ್ದಾರೆ. ಆದರೆ ಆ ಬಗ್ಗೆ ನಾವು ಚರ್ಚೆ ಮಾಡುವುದಕ್ಕೆ ಹೋಗುವುದಿಲ್ಲ. ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಗಡಿಯಲ್ಲಿರುವ ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ಸುದ್ದಿ ಬರುತ್ತಿದೆ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಬೆಳಗಾವಿಯಲ್ಲಿ ಉತ್ತರಿಸಿದ ಅವರು, “ಕೆಲವೊಂದು ಬಾರಿ ನಿಮಗೆ ಹಾಗೆ ಕಾಣಿಸುತ್ತದೆ. ಆದರೆ ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ನಮ್ಮ ಮುಂದಿಲ್ಲ. ಹಿಂದಿನ ಸರ್ಕಾರದವರು ನಾಲ್ಕು ಸಾವಿರ ಶಾಲೆಗಳನ್ನು ಮುಚ್ಚಿದ್ದಾರೆ. ಬೇಕಾದರೆ ಲೆಕ್ಕ ಕೊಡುತ್ತೇನೆ. ಆ ಬಗ್ಗೆ ನಾವು ಚರ್ಚಿಸಲ್ಲ. ನಮ್ಮ ಸರ್ಕಾರವು ಗುಣಮಟ್ಟದ ಶಿಕ್ಷಣ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಶಿಕ್ಷಕರ ನೇಮಕ ಚೆನ್ನಾಗಿ ಆಗಬೇಕು. ಆ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ” ಎಂದು ತಿಳಿಸಿದರು.

ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ಮರು ತಿದ್ದುಪಡಿ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ, “ಹೌದು, ಈ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಅದನ್ನು ನೋಡಿಕೊಂಡು ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದೇವೆ. ಹಿಂದಿನ ಸರ್ಕಾರದವರು ಮಾಡಿದ ತಪ್ಪುಗಳನ್ನು ಅರ್ಧಕ್ಕರ್ದ ತಿದ್ದುವುದೇ ಕೆಲಸವಾಗಿ ಬಿಟ್ಟಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

horatti 2

“ಬೆಳಗಾವಿಯಲ್ಲಿ ಅಧಿವೇಶನದ ನಡುವೆ ಸಿಗುವ ಎರಡು ಗಂಟೆಗಳ ಬಿಡುವಿನ ವೇಳೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲಿಸುತ್ತಿದ್ದೇನೆ. ಸಿಕ್ಕ ಸಮಯವನ್ನು ಹಾಳು ಮಾಡದೆ ಸಮಯ ಮೀಸಲಿಟ್ಟಿದ್ದೇನೆ. ಈಗಾಗಲೇ ಎರಡು ಮೂರು ಶಾಲೆಗಳನ್ನು ವಿಧಾನ ಪರಿಷತ್ ಸಭಾಪತಿ ಅವರೊಂದಿಗೆ ಸೇರಿ ಭೇಟಿ ನೀಡಿದ್ದೇನೆ. ಯಾಕೆಂದರೆ ಶಾಲೆಗಳು ಯಾವ ರೀತಿ ಕಾರ್ಯ ನಿರ್ವಹಿಸುತ್ತಿದೆ. ಅಲ್ಲಿನ ಸಮಸ್ಯೆಗಳು ಏನೆಲ್ಲ ಇದೆ ಎಂಬುದು ಕೂಡ ನನಗೂ ಅರ್ಥವಾಗಬೇಕಿದೆ. ಈಗಾಗಲೇ ಆರು ತಿಂಗಳಲ್ಲಿ ಸಾಕಷ್ಟು ಬದಲಾವಣೆ ತಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬದಲಾವಣೆಗೆ ಪ್ರಯತ್ನಿಸುತ್ತಿದ್ದೇವೆ” ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬಿಸಿಯೂಟದಲ್ಲಿ ಭ್ರಷ್ಟಾಚಾರ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ, “ಕೇವಲ ಆರೋಪ ಮಾಡಿದರೆ ಸಾಲದು. ಸೂಕ್ತ ವಿವರಗಳು ನನಗೆ ನೀಡಿದರೆ ನಾನು ಕ್ರಮ ಕೈಗೊಳುತ್ತೇನೆ. ಅದು ನನ್ನ ಕೆಲಸ. ಸುಮ್ಮನೆ ಯಾರೋ ಆರೋಪ ಮಾಡಿದರೆ ಆಗಲ್ಲ. ನಮ್ಮ ಇಲಾಖೆ ಬಹಳ ದೊಡ್ಡದು. ಇಂತಹ ದೂರುಗಳು ಬಂದರೆ ಸಂಬಂಧಪಟ್ಟವರ ಮೇಲೆ ಕೂಡಲೇ ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದರು.

“ಬಿಜೆಪಿಯವರು ಉತ್ತರ ಕರ್ನಾಟಕದ ಬಗ್ಗೆ ಮಾತನಾಡಿ ಎಂದರೆ ಸುಮ್ಮನೆ ಧರಣಿ ನಡೆಸುತ್ತಿದ್ದಾರೆ. ಕೇವಲ ರಾಜಕೀಯ ಲಾಭಕ್ಕಾಗಿ ಅಧಿವೇಶನದ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇದು ಖಂಡನೀಯ” ಎಂದು ಸಚಿವ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...