ಬಜೆಟ್​ನಲ್ಲಿ ಏನಿಲ್ಲ… ಏನಿಲ್ಲ… ಎಂದ ಬಿಜೆಪಿಗರ ತಲೆಯಲ್ಲಿ ಏನೂ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

Date:

ಕೇಂದ್ರ ಸರ್ಕಾರ ಇಲ್ಲಿವರೆಗೂ 1 ರೂಪಾಯಿ ಕೊಟ್ಟಿಲ್ಲ. ನಾವು ಸುಳ್ಳು ಹೇಳಿದ್ದರೆ ರಾಜ್ಯಪಾಲರು ಓದುತ್ತಿದ್ದರಾ? ಬಜೆಟ್​ ಕೇಳುವುದಕ್ಕೆ ಆಗದೇ ವಿಲವಿಲ ಒದ್ದಾಡಿ ಬಿಜೆಪಿ ನಾಯಕರು ಎದ್ದು ಹೋದರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2024-25ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿ ಕರೆದು ಮಾತನಾಡಿ, “ಕಳೆದ ಬಜೆಟ್​​ಗಿಂತ 46,630 ಕೋಟಿ ರೂ. ಬಜೆಟ್​ ಗಾತ್ರ ಹೆಚ್ಚಳವಾಗಿದೆ” ಎಂದರು.

“ಬರ ಹಿನ್ನೆಲೆ ಕೇಂದ್ರದ ಬಳಿ 18,171 ಕೋಟಿ ರೂ. ಕೇಳಿದ್ದೇವೆ. ಇದುವರೆಗೂ ಕೇಂದ್ರದಿಂದ ಒಂದು ರೂಪಾಯಿ ಸಹ ಬಂದಿಲ್ಲ. ಇದುವರೆಗೂ ಒಂದು ಮೀಟಿಂಗ್​ ಕೂಡ ಮಾಡಿಲ್ಲ, ರಾಜ್ಯದಲ್ಲಿ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ಯಾರಂಟಿಗಳಿಂದ ಆರ್ಥಿಕ ದಿವಾಳಿಯಾಗಿದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಟ್ಟಿ ಗ್ಯಾರಂಟಿ ಕೊಟ್ಟಿದ್ದರಿಂದ ಆರ್ಥಿಕ ದಿವಾಳಿ ಅಂತಿದ್ದಾರೆ. ಬಜೆಟ್‌ ಅನ್ನು ಪೂರ್ಣ ಓದದೇ ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಿಗೂ ನಾವು ಅನುದಾನವನ್ನು ಕೊಟ್ಟಿದ್ದೇವೆ” ಎಂದರು.

“ಮೋದಿ ಮುಂದೆ ಬಿಜೆಪಿ ನಾಯಕರು ಕೋಲೆ ಬಸವನ ತರ ಅಲ್ಲಾಡಿಸುತ್ತಾರೆ. ಅಲ್ಲಿ ಹಣಕೇಳಲ್ಲ. ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಕೇಂದ್ರಕ್ಕೆ ಕೇಳಲ್ಲ. ಪಾರ್ಲಿಮೆಂಟ್​ನಲ್ಲಿ ಯಾವತ್ತಾದರೂ ಮಾತನಾಡಿದ್ದಾರಾ? ಇವರು ಎಂಪಿಗಳಾವುದಕ್ಕೇ ನಾಲಾಯಕ್” ಎಂದು ಕರ್ನಾಟಕ ಬಿಜೆಪಿ ಸಂಸದರನ್ನು ತರಾಟೆಗೆ ತಗೆದುಕೊಂಡರು.

ಬಜೆಟ್​ ಕೇಳಲೇಬಾರದೆಂದು ಪ್ಲ್ಯಾನ್​

“ಬಜೆಟ್​ನಲ್ಲಿ ಏನಿಲ್ಲ.. ಏನಿಲ್ಲ.. ಎಂದು ಬಿಜೆಪಿಗರು ಹೇಳುತ್ತಾರೆ. ಅವರ ತಲೆಯಲ್ಲಿ ಏನಿಲ್ಲ…. ಅವರ ತಲೆಯಲ್ಲಿ ಮಂಜು ತುಂಬಿದೆ. ಕಾಮಾಲೆ ರೋಗದವರಿಗೆ ಕಾಣುವುದೆಲ್ಲ ಹಳದಿ ಅಂತೆ. ರಾಜಕೀಯ ಮಾಡಲಿ ಬೇಡ ಅನ್ನಲ್ಲ. ಟೀಕೆ, ಆರೋಪಗಳು ಆರೋಗ್ಯಕರವಾಗಿರಬೇಕು. ಬಿಜೆಪಿ ನಾಯಕರು ಏನಿಲ್ಲ.. ಏನಿಲ್ಲ.. ಎಂದು ಶುರುಮಾಡಿದರು. ಅವರ ನಡವಳಿಕೆ ನೋಡಿದರೆ ಬಜೆಟ್​ ಕೇಳಬಾರದೆಂದು ಮೊದಲೇ ಪ್ಲ್ಯಾನ್​ ಮಾಡಿಕೊಂಡು ಬಂದಿದ್ದರು” ಎಂದು ಸಿದ್ದರಾಮಯ್ಯ ಟೀಕಿಸಿದರು.

“ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ನಾವು ಅಧಿಕಾರಕ್ಕೆ ಬಂದು ಇನ್ನೂ 9 ತಿಂಗಳು ಕೂಡ ಆಗಿಲ್ಲ. ನಾವು ಜನರಿಗೆ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಕೃಷಿ, ಗ್ರಾಮೀಣಾಭಿವೃದ್ಧಿ, ಇಂಧನ ಕ್ಷೇತ್ರಕ್ಕೆ ಹಣ ಒದಗಿಸಿದ್ದೇವೆ. ಬಜೆಟ್​​ನಲ್ಲಿ ಎಲ್ಲಾ ಸಮುದಾಯಗಳಿಗೂ ಶಕ್ತಿ ತುಂಬಲಾಗಿದೆ” ಎಂದರು.

“ವಸ್ತುಸ್ಥಿತಿ ಹೇಳಿದರೆ ಬಿಜೆಪಿಯವರಿಗೆ ನುಂಗಲಾರದ ತುತ್ತು. ಇದ್ದಿದ್ದು ಇದ್ದಂಗೆ ಹೇಳಿದ್ರೆ ಎದ್ದು ಬಂದು ಎದೆಗೆ ಹೊದ್ದರು ಅಂತ ನಮ್ಮ ಹಳ್ಳಿಕಡೆ ಗಾದೆ ಹೇಳುತ್ತಾರೆ. ಸತ್ಯ ಹೇಳಿದರೆ ತಡೆದುಕೊಳ್ಳುವುದಕ್ಕೆ ಇವರಿಗೆ ಆಗುವುದಿಲ್ಲ. ಕರ್ನಾಟಕಕ್ಕೆ ಆದ ಅನ್ಯಾಯ ಹೇಳುವುದು ನನ್ನ ಜವಾಬ್ದಾರಿ, ಕರ್ತವ್ಯ. ಹೇಳಿದ್ದೇನೆ” ಎಂದು ಹೇಳಿದರು.

“ಭದ್ರಾ ಮೇಲ್ದಂಡೆ ಯೋಜನೆಗೆ ಏನು ಕೊಟ್ಟಿಲ್ಲ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ನಾನು ಹೇಳಿದ್ನಾ? 5,300 ಕೋಟಿ ಘೋಷಣೆ ಮಾಡಿದ್ದು ಯಾರು? ಅವರೇ ಹೇಳಿದ್ದರು. ಆದರೆ, ಇವತ್ತಿನವರೆಗೂ ಏನೂ ಕೊಟ್ಟಿಲ್ಲ. ಬೊಮ್ಮಾಯಿ ಬಜೆಟ್​​ ಭಾಷಣ ಬೇಕಾದರೆ ತೆಗೆದು ನೋಡಿ. ಬಿಜೆಪಿ ನಾಯಕರು ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.

ಮೋದಿ ನಮ್ಮ ಗ್ಯಾರಂಟಿ ಕದ್ದಿದ್ದಾರೆ

“ಬಡವರಿಗೆಲ್ಲ ಬಿಜೆಪಿ ಅವಮಾನ ಮಾಡುತ್ತಿದೆ. ಗ್ಯಾರಂಟಿ ಅನ್ನೋ ಪದವನ್ನೇ ಬಿಜೆಪಿ‌ ಕದ್ದಿದೆ. ಮೋದಿ ಗ್ಯಾರಂಟಿ ಮೋದಿ ಗ್ಯಾರಂಟಿ ಅಂತಾರೆ. ನಮ್ಮನ್ನು ನಕಲು ಮಾಡಿದ್ದಾರೆ. ಈಗ ನಮ್ಮನ್ನೇ ಬಿಟ್ಟಿ ಗ್ಯಾರಂಟಿ ಅಂತ ಕರೆಯುತ್ತಿದ್ದಾರೆ. ಇವರ ಮೋದಿ‌ ಗ್ಯಾರಂಟಿಗೆ ಏನು ಹೇಳಬೇಕು?” ಎಂದು ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...