ದೇಶ ಸೇವೆ ಮಾಡಲು ಸ್ವಾಮೀಜಿಗಳು ರಾಜಕೀಯಕ್ಕೆ ಬಂದರೆ ತಪ್ಪೇನಿಲ್ಲ: ಕೆ ಎಸ್‌ ಈಶ್ವರಪ್ಪ

Date:

ಮಾದರ ಚೆನ್ನಯ್ಯ ಸ್ವಾಮೀಜಿಗಳು ರಾಜಕೀಯಕ್ಕೆ ಬರಲೇಬಾರದಾ? ಸ್ವಾಮೀಜಿಗಳು ರಾಜಕೀಯಕ್ಕೆ ಬರಬೇಕು. ದೇಶ ಸೇವೆ ಮಾಡಲು ಸ್ವಾಮೀಜಿಗಳು ರಾಜಕೀಯಕ್ಕೆ ಬಂದರೆ ತಪ್ಪೇನಿಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದರು.

ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಬಿಜೆಪಿ ಟಿಕೆಟ್ ಕೊಟ್ಟರೆ ನಾನಂತೂ ಖುಷಿ ಪಡುತ್ತೇನೆ. ಚರ್ಚೆ ಆಗಿದ್ದರೆ ಇದರಲ್ಲಿ ತಪ್ಪಿಲ್ಲ” ಎಂದರು.

“ರಾಜಕೀಯ ಪಕ್ಷಗಳು ಎಂದ ಮೇಲೆ ಒಂಚೂರು ಗಲಾಟೆ ಇದ್ದಿದ್ದೇ. ಸಾಮಾನ್ಯ ಅಲ್ಲಲ್ಲಿ ಮಾತ್ರ ಬಡಿದಾಟ ಇದೆ. ನಮ್ಮ ಪಕ್ಷದ ಅಸಮಾಧಾನಿತರನ್ನು ಕರೆದು ರಿಪೇರಿ ಮಾಡುತ್ತೇವೆ” ಎಂದು ಈಶ್ವರಪ್ಪ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮಮಂದಿರದಲ್ಲಿ ಪರಿಶಿಷ್ಟ ಜಾತಿಯವರಿಗೆ ಆಹ್ವಾನ ಇರಲಿಲ್ಲ ಎಂದು ರಾಹುಲ್‌ ಹೇಳಿದ್ದಾರೆ. ದೇಶವನ್ನು ವಿಭಜಿಸುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ. ಧರ್ಮದ ಬಗ್ಗೆ ಸಹ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಇಡೀ ದೇಶವನ್ನು ಒಂದುಗೂಡಿಸುವ ರಾಮಮಂದಿರ ಕಾರ್ಯಕ್ರಮವಾಗಿತ್ತು. ರಾಹುಲ್ ಗಾಂಧಿ ಹೇಳಿಕೆಯಿಂದ ಬೇಸರ ಆಗಿದೆ. ರಾಹುಲ್ ಗಾಂಧಿ ಅವರು ಈ ದೇಶದ ಜನತೆಯ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

“ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಸಹ ಭಾಗಿಯಾಗಿದ್ದರು. ಅದೇ ರೀತಿ ಕಾಗಿನೆಲೆ ಸ್ವಾಮೀಜಿ ಸಹ ರಾಮಮಂದಿರ ಉದ್ಘಾಟನೆಗೆ ಹೋಗಿದ್ದರು. ಅಲ್ಲದೆ ಇಂತಹ ಅನೇಕ ಸಾಧು ಸಂತರು ಸಹ ರಾಮಮಂದಿರ ಲೋಕಾರ್ಪಣೆಗೆ ಬಂದಿದ್ದರು. ಹಿಂದೂ ಸಮಾಜವನ್ನು ಜೋಡಿಸುವ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು” ಎಂದರು‌.

ಜ್ಞಾನ ದೇಗುಲ ವಿಚಾರಕ್ಕೆ ಪ್ರತಿಕ್ರಿಯಿಸಿ, “ಯಾರಿಗೆ ಪ್ರಶ್ನೆ ಮಾಡಬೇಕು, ಎಲ್ಲೆಲ್ಲಿ ಎಷ್ಟು ಲೂಟಿ ಆಗುತ್ತೆ ಅಂತ ಪ್ರಶ್ನೆ ಮಾಡಬೇಕಾ? ಆ ಬೋರ್ಡ್ ಹಾಕಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರಕ್ಕೆ ಏನು ಆದೇಶ ಮಾಡ್ತಿವಿ ಅನ್ನೋದು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲದೆ ಆದೇಶ ಮಾಡುತ್ತಾರಾ?” ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...