ಕೇರಳ | ಮುಂದುವರಿದ ತಿಕ್ಕಾಟ: ರಾಜ್ಯಪಾಲ ಆರಿಫ್ ಖಾನ್ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಎಫ್‌ಐ ಕಾರ್ಯಕರ್ತರು

Date:

ಕೇರಳ ವಿಧಾನಸಭೆಯಲ್ಲಿ ಅಂಗೀಕಾರವಾದ ಬಿಲ್‌ಗಳನ್ನು ಅಂಕಿತ ಹಾಕದೆ ವಿಳಂಬ ಮಾಡುತ್ತಿರುವ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದೆ.

ಸೋಮವಾರ ತಡರಾತ್ರಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಆಡಳಿತಾರೂಢ ಸಿಪಿಐ (ಎಂ)ನ ವಿದ್ಯಾರ್ಥಿ ಘಟಕವಾಗಿರುವ ಎಸ್‌ಎಫ್‌ಐ ಸಂಘಟನೆಯ ಕಾರ್ಯಕರ್ತರು ಏಕಾಏಕಿ ಕಾರಿಗೆ ಮುತ್ತಿಗೆ ಹಾಕಿರುವ ಘಟನೆ ಕೇರಳ ವಿಶ್ವವಿದ್ಯಾನಿಲಯದ ಆವರಣದ ಮುಂಭಾಗದಲ್ಲಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸದಿಲ್ಲಿಗೆ ಪ್ರಯಾಣಿಸುವುದಕ್ಕಾಗಿ ತಿರುವನಂತಪುರ ವಿಮಾನ ನಿಲ್ದಾಣದತ್ತ ರಾಜ್ಯಪಾಲರು ತೆರಳುತ್ತಿದ್ದಾಗ ಎಸ್‌ಎಫ್‌ಐಯ ಕಾರ್ಯಕರ್ತರು ಕಪ್ಪು ಧ್ವಜ ಹಿಡಿದುಕೊಂಡು ಏಕಾಏಕಿ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ‘ಗೋ ಬ್ಯಾಕ್ ಗೋ ಬ್ಯಾಕ್, ಆರಿಫ್ ಖಾನ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ರಾಜ್ಯಪಾಲರು ಕಾರು ನಿಲ್ಲಿಸಿದ್ದಲ್ಲದೇ, ಕಾರಿನಿಂದ ಇಳಿದು ತೀವ್ರ ಆಕ್ರೋಶಭರಿತರಾಗಿ ಪೊಲೀಸ್ ಅಧಿಕಾರಿಗಳ ಹಾಗೂ ಸಿಎಂ ಪಿಣರಾಯಿ ವಿಜಯ್ ವಿರುದ್ ವಾಗ್ದಾಳಿ ನಡೆಸಿದ್ದಾರೆ.

ಬಳಿಕ ಸ್ಥಳದಲ್ಲಿದ್ದ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ಮೇಲೆ ಹಲ್ಲೆಯ ಸಂಚಿನ ಆರೋಪ ಮಾಡಿದ್ದಾರೆ.

“ಕೇರಳದಲ್ಲಿ ಸಾಂವಿಧಾನಿಕ ಯಂತ್ರ ಕುಸಿದಂತೆ ಕಾಣಿಸುತ್ತಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತನ್ನ ಮೇಲೆ ದೈಹಿಕ ಹಲ್ಲೆ ಎಸಗಲು ತಮ್ಮ ಪಕ್ಷದ ವಿದ್ಯಾರ್ಥಿಯ ಗೂಂಡಾಗಳನ್ನು ಕಳುಹಿಸುವ ಮೂಲಕ ಸಂಚು ಹೂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಇಂದು ತಿರುವನಂತಪುರದ ರಸ್ತೆಗಳಲ್ಲಿ ಗೂಂಡಾಗಳು ಆಳ್ವಿಕೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಎಸ್‌ಎಫ್‌ಐನವರು ಬಂದಾಗ ನಾನು ನನ್ನ ಕಾರನ್ನು ನಿಲ್ಲಿಸಿ, ಕಾರಿನಿಂದ ಇಳಿದೆ. ಇವರೆಲ್ಲ ಬ್ಲಡಿ ಫೂಲ್ಸ್, ಕ್ರಿಮಿನಲ್ಸ್. ನಾನು ಬಂದಾಗ ಅವರೇಕೆ ಓಡಿಹೋದರು? ಯಾಕೆಂದರೆ ಅವರ ತಂತ್ರಗಳಿಗೆ, ಅವರ ಒತ್ತಡಕ್ಕೆ ಒಳಗಾಗಿಲ್ಲ ಎಂದೇ? ಅವರು ನನಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ನನ್ನ ಕಾರಿಗೆ ಎರಡೂ ಕಡೆಯಿಂದ ದಾಳಿ ಮಾಡಿದ್ದಾರೆ. ಇದು ಸಿಎಂ ನಿರ್ದೇಶನದ ಮೇಲೆ ನಡೆದ ದಾಳಿ. ಸಿಎಂ ಅವರೇ ನಿರ್ದೇಶನ ನೀಡುತ್ತಿರುವಾಗ ಪೊಲೀಸರಿಂದ ಏನು ತಾನೇ ಮಾಡಲು ಸಾಧ್ಯ. ಒಂದು ವೇಳೆ ಇದೇ ರೀತಿ ದಾರಿಯಲ್ಲಿ ಸಿಎಂ ಬಂದಾಗ ಈ ರೀತಿಯಾಗಿ ನಡೆದುಕೊಳ್ಳಲು ಸಾಧ್ಯವೇ? ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತನ್ನ ಮೇಲೆ ದೈಹಿಕ ಹಲ್ಲೆ ಎಸಗಲು ಷಡ್ಯಂತ್ರ ರೂಪಿಸಿದ್ದಾರೆ” ಎಂದು ಸರ್ಕಾರ ಹಾಗೂ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಘಟನೆಯ ಬಳಿಕ ಕೇರಳ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಹೊಸ ತಿಕ್ಕಾಟವೊಂದು ಆರಂಭಗೊಂಡಂತಾಗಿದೆ.

19 ಎಸ್‌ಎಫ್‌ಐ ಕಾರ್ಯಕರ್ತರ ಬಂಧನ

ರಾಜ್ಯಪಾಲರ ಕಾರನ್ನು ತಡೆದು, ಪ್ರತಿಭಟನೆ ನಡೆಸಿದ 19 ಎಸ್‌ಎಫ್‌ಐ ಕಾರ್ಯಕರ್ತರನ್ನು ತಿರುವನಂತಪುರಂ ಪೊಲೀಸರು ಬಂಧಿಸಿದ್ದು, ಇಂದು(ಮಂಗಳವಾರ) ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಪೈಕಿ 7 ಮಂದಿ ವಿರುದ್ಧ ಜಾಮೀನು ರಹಿತ ಆರೋಪ ಹೊರಿಸಲಾಗಿದೆ. ಡಿಜಿಪಿ ಮತ್ತು ಕಾನೂನು ಸುವ್ಯವಸ್ಥೆ ಉಸ್ತುವಾರಿ ಎಡಿಜಿಪಿ ತಿರುವನಂತಪುರಂ ನಗರ ಪೊಲೀಸ್‌ ಆಯುಕ್ತರಿಗೆ ಘಟನೆಯ ಕುರಿತು ವರದಿ ಕೇಳಿದ್ದಾರೆ.

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಉನ್ನತ ಶಿಕ್ಷಣ ಕ್ಷೇತ್ರವನ್ನು ಕೇಸರಿಮಯಗೊಳಿಸಿದ್ದಾರೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ರಾಜ್ಯಪಾಲರನ್ನು ಸಾರ್ವಜನಿಕವಾಗಿ ತಡೆಯುವ ರೂಪದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಸ್‌ಎಫ್‌ಐ ಈ ಹಿಂದೆ ಘೋಷಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...