ಈ ಸರ್ಕಾರ ಸರ್ವಾಧಿಕಾರಿ, ನಮ್ಮ ಮಾತು ಕೇಳುತ್ತಿಲ್ಲ: ಲೋಕಸಭೆಯ ದಾಳಿ ಬಳಿಕ ಯುವತಿ ನೀಲಂ ಹೇಳಿಕೆ

Date:

“ಈ ಸರ್ಕಾರ ಸರ್ವಾಧಿಕಾರಿಯಾಗಿದ್ದು ನಮ್ಮ ಮಾತು ಕೇಳುತ್ತಿಲ್ಲ. ನಿರುದ್ಯೋಗಿಗಳಾಗಿದ್ದೇವೆ. ಅದಕ್ಕಾಗಿಯೇ ನಾವು ಈ ಮಾರ್ಗವನ್ನು ಆರಿಸಿಕೊಂಡಿದ್ದೇವೆ” ಹೀಗಂತ ಹೇಳಿದ್ದು ಲೋಕಸಭೆಯಲ್ಲಿಂದು ದಾಳಿಯ ಗುಂಪಿನಲ್ಲಿದ್ದ ಯುವತಿ ನೀಲಂ.

ಲೋಕಸಭೆಯಲ್ಲಿ ಇಂದು ಬುಧವಾರ ಭಾರೀ ಭದ್ರತಾ ಲೋಪದ ಘಟನೆಯ ಬಳಿಕ ಸಂಸತ್‌ನ ಹೊರಗಡೆ ‘ಕೆಮಿಕಲ್ ಬಾಂಬ್’ ಸಿಡಿಸಿದ ಬಳಿಕ ಪೊಲೀಸರ ವಶಕ್ಕೆ ಪಡೆಯುತ್ತಿದ್ದಾಗ ಯುವತಿ ನೀಲಂ ಈ ರೀತಿ ಹೇಳಿಕೆ ನೀಡಿದ್ದಾರೆ.

“ನನ್ನ ಹೆಸರು ನೀಲಂ, ನಾನು ನಿರುದ್ಯೋಗಿ. ಈ ಸರ್ಕಾರ ಸರ್ವಾಧಿಕಾರಿಯಾಗಿದ್ದು ನಮ್ಮ ಮಾತು ಕೇಳುತ್ತಿಲ್ಲ. ನಮ್ಮ ಹಕ್ಕುಗಳನ್ನು ಕೇಳಿದರೆ ಲಾಠಿ ಚಾರ್ಜ್‌ ನಡೆಸಿ ಬಂಧಿಸಲಾಗುತ್ತಿದೆ. ರಸ್ತೆಯಲ್ಲೇ ದೊಣ್ಣೆಯಿಂದ ಹೊಡೆಯುತ್ತಾರೆ. ನಮಗೆ ಬೇರೆ ದಾರಿ ಕಾಣಲಿಲ್ಲ. ಅದಕ್ಕಾಗಿಯೇ ನಾವು ಈ ಮಾರ್ಗವನ್ನು ಆರಿಸಿಕೊಂಡೆವು” ಎಂದು ತಿಳಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿಲ್ಲ. ನಾವು ವಿದ್ಯಾರ್ಥಿಗಳು, ಸಾಮಾನ್ಯ ಜನರು. ನಿರುದ್ಯೋಗಿಗಳಾಗಿದ್ದೇವೆ. ಕೇಂದ್ರ ಸರ್ಕಾರವು ರೈತರು, ಬಡವರು ಸೇರಿದಂತೆ ಯಾರ ಮಾತನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ನಮ್ಮ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತಿದ್ದರೂ ಕೇಂದ್ರ ಸರ್ಕಾರ ಏನೂ ಮಾಡುತ್ತಿಲ್ಲ. ದೇಶದಲ್ಲಿ ಸರ್ವಾಧಿಕಾರ ನಡೆಯಲು ನಾವು ಬಿಡಲ್ಲ. ಸರ್ವಾಧಿಕಾರಿ ಆಡಳಿತ ನಿಲ್ಲಿಸಿ. ಭಾರತ್ ಮಾತಾ ಕೀ ಜೈ,” ಎಂದು ನೀಲಂ ತಿಳಿಸಿದ್ದಾರೆ.

lokksabha

ಹಳದಿ ಹಾಗೂ ಕೆಂಪು ಹೊಗೆಯನ್ನು ಹೊರಸೂಸುವ ಕ್ಯಾನ್‌ಗಳನ್ನು ಬಳಸಿ ಸಂಸತ್ತಿನ ಕಟ್ಟಡದ ಹೊರಗೆ ಪ್ರತಿಭಟನೆ ನಡೆಸಿದ್ದಕ್ಕಾಗಿ ನೀಲಂ ಸಹಿತ ಇಬ್ಬರನ್ನು ವಶಕ್ಕೆ ಪಡಯಲಾಗಿದೆ. ಈವರೆಗೆ ಒಟ್ಟು ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಸಂಸತ್ತಿನ ಹೊರಗಡೆ ನೀಲಂ (42) ಹರಿಯಾಣ ಹಿಸ್ಸಾರ್ ಮೂಲದವರೆಂದು ತಿಳಿದುಬಂದಿದೆ. ಮತ್ತೋರ್ವ ಅಮೋಲ್ ಶಿಂಧೆ (25) ಮಹಾರಾಷ್ಟ್ರ ಮೂಲದವರೆಂದು ಗುರುತಿಸಲಾಗಿದೆ. ಮತ್ತಿಬ್ಬರ ಪೈಕಿ ಓರ್ವ ಮೈಸೂರು ಮೂಲದ ಮನೋರಂಜನ್, ಇನ್ನೋರ್ವ ಸಾಗರ್ ಶರ್ಮಾ ಎಂದು ತಿಳಿದುಬಂದಿದೆ.

ಒಳಗಡೆ ದಾಳಿ ನಡೆಸಿದವರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಪಡೆದಿದ್ದರು ಎಂದು ಉತ್ತರ ಪ್ರದೇಶದ ಅಮ್ರೋಹ ಶಾಸಕ ಡ್ಯಾನಿಶ್ ಅಲಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...