ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

Date:

  • ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ
  • ರಾಜ್ಯದ ಜನ ಬಿಜೆಪಿಯ ಸುಳ್ಳಿನ ಸಂಸ್ಕಾರ ಸೋಲಿಸಿ ಸತ್ಯದ ಘನತೆ ಗೆಲ್ಲಿಸಿದ್ದಾರೆ

ಇದು ನನ್ನ ಕೊನೆ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಬೃಹತ್ ಕೃತಜ್ಞತಾ ಸಮರ್ಪಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಜನರಿಗೆ ಧನ್ಯವಾದ ಸಲ್ಲಿಸಿದರು.

2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ ಎಂದವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ನಾನು ಮಾದರಿಯನ್ನಾಗಿ ಇಟ್ಟುಕೊಂಡು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದೆ ಎಂದರು.ಸಿದ್ದರಾಮಯ್ಯ

ಮುಖ್ಯಮಂತ್ರಿ ಕುರ್ಚಿ ಸುಖದ ಸುಪ್ಪತ್ತಿಗೆ ಅಲ್ಲ. ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ. ಪ್ರಧಾನಿ ನರೇಂದ್ರ ಮೋದಿಯವರು, ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ, ರಾಜ್ಯ ದಿವಾಳಿ ಆಗ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ.

ಕಾಂಗ್ರೆಸ್ ಘೋಷಿಸಿದ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ. ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಬಿತ್ತುತ್ತ ಗೊಂದಲ ಸೃಷ್ಟಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವುದು ಅವರಿಗೆ ಬೇಕಾಗಿಲ್ಲ, ಬಿಜೆಪಿ ತನ್ನ ಜಾಯಮಾನದಲ್ಲೇ ಮಾಡದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.ಸಿದ್ದರಾಮಯ್ಯ

2024 ರಲ್ಲೂ ಗೆಲ್ತೀವಿ-ಬೆಲೆ ಇಳಿಸ್ತೀವಿ

“ಗಗನಕ್ಕೆ ಏರಿರುವ ರಸಗೊಬ್ಬರ ಬೆಲೆಯನ್ನು ಕಡಿಮೆ ಮಾಡಿ” ಎಂದು ಸಭೆಯಲ್ಲಿದ್ದ ರೈತರು ಕೂಗಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, “ರಸಗೊಬ್ಬರ ಬೆಲೆ ಏರಿಸಿರುವುದು ಪ್ರಧಾನಿ ಮೋದಿ ಸರ್ಕಾರ. ಬೆಲೆ ಇಳಿಸಬೇಕಾಗಿರುವುದೂ ಮೋದಿ ಸರ್ಕಾರವೇ, ಆದರೆ ಅವರು ಬೆಲೆ ಇಳಿಸಲ್ಲ. ನಾವು 2024 ರ ಲೋಕಸಭಾ ಚುನಾವಣೆಯಲ್ಲೂ ಗೆಲ್ತೀವಿ. ಕೇಂದ್ರದಲ್ಲೂ ಅಧಿಕಾರಕ್ಕೆ ಬರ್ತೀವಿ. ಆಗ ಪೆಟ್ರೋಲ್, ಡೀಸೆಲ್, ಅಡಿಗೆ ಅನಿಲ್, ರಸಗೊಬ್ಬರ ಬೆಲೆಗಳನ್ನು ಇಳಿಸುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ?:ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ

ಪ್ರಧಾನಿಯಾಗಿ ಎಂದ ಜನ

ಕೃತಜ್ಞತಾ ಸಮಾವೇಶಸಲ್ಲಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡುವ ವೇಳೆ, ಮೋದಿ ಸರ್ಕಾರ ಏರಿಸಿರುವ ಬೆಲೆ ಏರಿಕೆಯನ್ನು ನಾವು ಅಧಿಕಾರಕ್ಕೆ ಬಂದು ಇಳಿಸುತ್ತೇವೆ. ಇಲ್ಲಿನಂತೆಯೇ ಜನರಿಗೆ ಉಪಯೋಗವಾಗುವ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಈ ವೇಳೆ ಜನಸ್ತೋಮದ ನಡುವಿದ್ದ ಹಲವರು “ನೀವು ಪ್ರಧಾನಿ ಆಗಬೇಕು” ಎಂದು ಮುಗಿಲು ಮುಟ್ಟುವಂತೆ ಕೂಗಿದರು.ಸಿದ್ದರಾಮಯ್ಯ

ಚಾನಲ್ ಗಳ ಚರ್ಚೆಗೆ ತಲೆ ಕೆಡಿಸಿಕೊಳ್ಳಬೇಡಿ

ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ಗ್ಯಾರಂಟಿ ಗೊಂದಲದ ವಿಚಾರವಾಗಿ ಸಭೆಗೆ ತಿಳಿಸಿದ ಸಿದ್ದರಾಮಯ್ಯ ಚಾನಲ್ ನವರು ಬಡವರ-ಮಧ್ಯಮವರ್ಗದವರ ಸಂಕಷ್ಟ ಕಡಿಮೆ ಮಾಡಲು ನಾವು ಜಾರಿಗೆ ತಂದ ಯೋಜನೆಗಳನ್ನು, “ಅವರಿಗಾ-ಇವರಿಗಾ” ಎನ್ನುವ ಗೊಂದಲ ಸೃಷ್ಟಿಸುತ್ತಾರೆ. ನೀವು ಗೊಂದಲಕ್ಕೆ ಒಳಗಾಗಬೇಡಿ. ಅರ್ಜಿ ಹಾಕಿ ಯೋಜನೆಗಳ ಅನುಕೂಲ ಪಡೆಯಿರಿ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...