ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು: ಮೋದಿಗೆ ಶರದ್ ಪವಾರ್ ತಿರುಗೇಟು

Date:

ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ ‘ಅಲೆದಾಡುವ ಆತ್ಮ’ ಹೇಳಿಕೆಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರು ತಿರುಗೇಟು ನೀಡಿದ್ದಾರೆ. ತನ್ನನ್ನು ತಾನು ‘ಅಲೆದಾಡುವ ಆತ್ಮ’ ಎಂದು ಕರೆದುಕೊಂಡಿರುವ ಶರದ್ ಪವಾರ್, “ಈ ‘ಅಲೆದಾಡುವ ಆತ್ಮ’ ನಿಮ್ಮನೆಂದಿಗೂ ಬಿಡದು” ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಅಹಮದ್‌ನಗರದಲ್ಲಿ (ಅಹಲ್ಯಾ ನಗರ) ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಸಿಪಿಯ ಮುಖ್ಯಸ್ಥ ಶರದ್ ಪವಾರ್ ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚಿಸುವ ಬಗ್ಗೆ ಪಿಎಂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

“ದೇಶದ ಜನರು ಅವರಿಗೆ (ಪಿಎಂ ಮೋದಿ) ಬಹುಮತ ನೀಡಲಿಲ್ಲ, ಅವರು ಸರ್ಕಾರ ರಚಿಸುವಾಗ, ಅವರು ಸಾಮಾನ್ಯ ಜನರ ಒಪ್ಪಿಗೆ ಪಡೆದಿದ್ದಾರೆಯೇ? ಅವರು ಬಿಹಾರದ ಮುಖ್ಯಮಂತ್ರಿ (ನಿತೀಶ್ ಕುಮಾರ್) ಅವರ ಸಹಾಯವನ್ನು ತೆಗೆದುಕೊಂಡಿದ್ದಾರೆ. ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ ಎಲ್ಲಿ ಹೋದರೂ ಕೂಡಾ ಭಾರತ ಅಥವಾ ಭಾರತ ಸರ್ಕಾರ ಎಂದು ಹೇಳಿಲ್ಲ. ಬರೀ ಮೋದಿ ಸರ್ಕಾರ, ಮೋದಿಯ ಗ್ಯಾರಂಟಿ ಎಂದು ಹೇಳಿಕೊಂಡು ಬಂದಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮಹಾರಾಷ್ಟ್ರ ಚುನಾವಣೆಗೆ ಸಿದ್ಧರಾಗಿರಿ: ಎನ್‌ಸಿಪಿ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ

“ಆದರೆ ಜನರು (ಚುನಾವಣೆಯಲ್ಲಿ) ತಾವು ಇಂಡಿಯಾ ಒಕ್ಕೂಟದೊಂದಿಗೆ ಇದ್ದೇವೆ ಎಂದು ಸಾಬೀತುಪಡಿಸಿದ್ದಾರೆ. ಪ್ರಧಾನಿ ಮೋದಿ ಇಲ್ಲಿಗೆ ಬಂದು ನಾನು ಅಲೆದಾಡುವ ಆತ್ಮ ಎಂದು ಹೇಳಿದರು. ಆದರೆ ಈ ಅಲೆದಾಡುವ ಆತ್ಮ ಉಳಿಯುತ್ತದೆ. ಅದು ನಿಮ್ಮನ್ನು ಎಂದಿಗೂ ಬಿಡುವುದಿಲ್ಲ” ಎಂದು ಹೇಳಿದರು.

ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಅವರು ಶರದ್ ಪವಾರ್ ಮೇಲೆ ವಾಗ್ದಾಳಿ ನಡೆಸಿದ್ದು ಶರದ್ ಪವಾರ್ ಅವರನ್ನು ‘ಅಲೆದಾಡುವ ಆತ್ಮ’ ಎಂದು ಕರೆದಿದ್ದರು. ಹಾಗೆಯೇ ಮಹಾರಾಷ್ಟ್ರದ ರಾಜಕೀಯ ಅಸ್ಥಿರತೆಯ ಬಗ್ಗೆ ದೂಷಿಸಿದ್ದರು. “ಮಹಾರಾಷ್ಟ್ರದಲ್ಲಿ ಅಲೆದಾಡುವ ಆತ್ಮ 45 ವರ್ಷಗಳ ಹಿಂದೆ ಅಸ್ಥಿರತೆಗೆ ಕಾರಣವಾಗಿದೆ. ಈಗ ಈ ವ್ಯಕ್ತಿ ದೇಶವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...