RSS ಬಗ್ಗೆ ಸಿಎಂಗೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ

Date:

ಜನರ ನಡುವೆ ಮನುವಾದ, ದ್ವೇಷವನ್ನು ಬಿತ್ತುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌) ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಯಾವುದೇ ಬಗೆಯ ಚಟುವಟಿಗಳಿಗೆ ನಿಷೇಧ ಹೇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ.

“ಸರ್ಕಾರಿ ಮತ್ತು ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆತುತ್ತಾ, ಪೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು” ಎಂದು ಪ್ರಿಯಾಂಕ್ ಖರ್ಗೆ ಇತ್ತೀಚೆಗ ಸಿಎಂಗೆ ಪತ್ರ ಬರೆದಿದ್ದಾರೆ.

ಇದನ್ನು ಓದಿದ್ದೀರಾ? ಸರ್ಕಾರಿ ಸ್ಥಳಗಳಲ್ಲಿ RSS ನಡೆಸುವ ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಬೇಕು: ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬೆನ್ನಲ್ಲೇ ಸಂಘಪರಿವಾರದ ನಾಯಕರುಗಳು ಪ್ರಿಯಾಂಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಿಯಾಂಕ್ ಮತ್ತು ಅವರ ಕುಟುಂಬಕ್ಕೆ ಕಳೆದ ಎರಡು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ.

ಈ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, “ಕಳೆದ ಎರಡು ದಿನಗಳಿಂದ ನಿರಂತರವಾಗಿ ನನಗೆ ಕರೆಗಳು ಬರುತ್ತಿವೆ. ನಾನು ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ, ಎಚ್ಚರಿಕೆ ಮತ್ತು ಅಸಭ್ಯ ನಿಂದನೆಗಳನ್ನು ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ, ಕಾಲೇಜುಗಳಲ್ಲಿ ಮತ್ತು ಇತರೆ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಡೆಸುವುದನ್ನು ಪ್ರಶ್ನಿಸಿದ ಕಾರಣಕ್ಕೆ ನನಗೆ ಬೆದರಿಕೆ ಹಾಕಲಾಗುತ್ತಿದೆ” ಎಂದು ಹೇಳಿದ್ದಾರೆ.

“ಆದರೆ ನಾನು ಭಯಪಟ್ಟಿಲ್ಲ ಮತ್ತು ಆಶ್ಚರ್ಯವೂ ಆಗಿಲ್ಲ. ಆರ್‌ಎಸ್‌ಎಸ್‌ ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಟ್ಟಿಲ್ಲ. ನನ್ನನ್ನೇಕೆ ಬಿಡುತ್ತಾರೆ? ಬೆದರಿಕೆ ಮತ್ತು ವೈಯಕ್ತಿಕ ನಿಂದನೆಯಿಂದ ನನ್ನನ್ನು ಮೌನವಾಗಿಸಬಹುದು ಎಂದು ಅವರಂದುಕೊಂಡಿದ್ದರೆ, ಅದು ಅವರ ತಪ್ಪು ಕಲ್ಪನೆ. ಇದು ಆರಂಭ ಮಾತ್ರ” ಎಂಬ ಎಚ್ಚರಿಕೆಯ್ನನೂ ಪ್ರಿಯಾಂಕ್ ನೀಡಿದ್ದಾರೆ.

“ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬರ ಮೂಲತತ್ವವನ್ನು ಹೊಂದಿರುವ, ಸಮಾನತೆ, ಉದ್ದೇಶ ಮತ್ತು ದಯೆ ಹೊಂದಿರುವ ಸಮಾಜವನ್ನು ಕಟ್ಟುವ ಸಮಯ ಇದಾಗಿದೆ. ಹಾಗೆಯೇ ಈ ದೇಶದಿಂದ ಅತಿ ಕೆಟ್ಟ ವೈರಸ್‌ ಅನ್ನು ಹೊರದಬ್ಬುವ ಸಮಯವಿದು” ಎಂದು ಎಕ್ಸ್‌ನಲ್ಲಿ ಸಚಿವರು ಬರೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...