ಶೆಟ್ಟರ್ ನಡೆಯಿಂದ ಬೆಳಗಾವಿಯಲ್ಲಿ ಅಂಗಡಿ ಕುಟುಂಬದ ಟಿಕೆಟ್‌ ಭದ್ರ? 

Date:

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಅವರ ಈ ನಡೆ ಲೋಕಸಭೆ ಚುನಾವಣೆಗೆ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪರವಾದ ಪರಿಣಾಮ ಬೀರಬಹುದು. ಅಂತೆಯೇ, ಬೆಳಗಾವಿಯಲ್ಲಿ ಹಾಲಿ ಬಿಜೆಪಿ ಸಂಸದೆ ಮಂಗಳಾ ಅಂಗಡಿ ಅಥವಾ ಅವರ ಪುತ್ರಿ ಶ್ರದ್ಧಾ ಶೆಟ್ಟರ್‌ಗೂ ನೆರವಾಗುವ ಸಾಧ್ಯತೆಗಳಿವೆ ಎಂಬ ಮಾತುಗಳೂ ಇವೆ.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಂಗಳಾ ಅಂಗಡಿ ಅವರ ಮಗಳು ಶ್ರದ್ಧಾ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ದೊರೆಯುವ ಸಾಧ್ಯತೆಗಳಿವೆ. ಶ್ರದ್ಧಾ ಅವರು ಜಗದೀಶ್‌ ಶೆಟ್ಟರ್ ಅವರ ಸೊಸೆಯೂ ಆಗಿದ್ದಾರೆ. ಹೀಗಾಗಿ, ಶೆಟ್ಟರ್ ಕಾಂಗ್ರೆಸ್‌ನಲ್ಲಿದ್ದಿದ್ದರೆ, ಶ್ರದ್ಧಾ ಅವರಿಗೆ ಬಿಜೆಪಿ ಟಿಕೆಟ್‌ ದೊರೆಯುತ್ತಿರಲಿಲ್ಲ. ಈಗ, ಶೆಟ್ಟರ್ ಬಿಜೆಪಿಗೆ ಸೇರಿರುವುದು, ಶ್ರದ್ಧಾ ಅಥವಾ ಮಂಗಳಾ ಅವರಿಗೆ ಟಿಕೆಟ್‌ ಭಾಗಶಃ ಖಚಿತವಾದಂತಾಗಿದೆ.

ಸದ್ಯಕ್ಕೆ, ಈ ಇಬ್ಬರನ್ನು ಬಿಟ್ಟರೆ ಬೆಳಗಾವಿಗೆ ಇಂತವರೇ ಬಿಜೆಪಿ ಅಭ್ಯರ್ಥಿಯಾಗಬಹುದು ಎಂದು ಹೇಳಿಕೊಳ್ಳಲು ಯಾವುದೇ ಪ್ರಬಲ ಮುಖಗಳು ಇರಲಿಲ್ಲ. ಹೀಗಾಗಿ, ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಹುಡುಕುವ ಕಸರತ್ತಿನಲ್ಲಿತ್ತು. ಇದೀಗ, ಶೆಟ್ಟರ್ ಮರಳುವಿಕೆಯಿಂದ ಅಭ್ಯರ್ಥಿಗಳ ಹುಡುಕಾಟಕ್ಕೆ ಬ್ರೇಕ್‌ ಬಿದ್ದಂತಾಗಿದ್ದು, ಮಂಗಳಾ ಅಥವಾ ಶ್ರದ್ಧಾ ಅವರು ಬಿಜೆಪಿಯಿಂದ ಕಣಕ್ಕಿಳಿಯಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲಗಳ ಪ್ರಕಾರ, 2020ರಲ್ಲಿ ಸುರೇಶ್‌ ಅಂಗಡಿಯವರು ನಿಧನರಾದರು. ಅವರು ಸಾವಿಗೂ ಮುನ್ನ ಬೆಳಗಾವಿಯಿಂದ ಸತತ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಕ್ಷೇತ್ರದಲ್ಲಿ ಜನಪ್ರಿಯತೆಯನ್ನೂ ಗಳಿಸಿದ್ದರು. ಅದೇ ಜನಪ್ರಿಯತೆ 2021ರಲ್ಲಿ ನಡೆದ ಉಪಚುನಾವಣೆಯಲ್ಲಿ ಮಂಗಳಾ ಅಂಗಡಿ ಗೆಲುವಿಗೆ ನೆರವಾಯಿತು. ಇದೀಗ, ಅದೇ ಜನಪ್ರಿಯತೆಯನ್ನೇ ಗಾಳವಾಗಿಸಿಕೊಳ್ಳಲು ಅವರ ಮಗಳು ಶ್ರದ್ಧಾ ಅವರಿಗೆ ಟಿಕೆಟ್‌ ನೀಡಲು ಬಿಜೆಪಿ ಉತ್ಸುಕವಾಗಿದೆ.

ಆದರೆ, ಶೆಟ್ಟರ್ ಅವರು ಬಿಜೆಪಿಗೆ ವಾಪಸಾಗುವುದು ಶ್ರದ್ಧಾ ಅವರಿಗೆ ಟಿಕೆಟ್‌ ನೀಡಲು ಬೇಷರತ್ತಾಗಿತ್ತೇ ಅಥವಾ ಅವರು ನವದೆಹಲಿಯಲ್ಲಿ ಬಿಜೆಪಿ ನಾಯಕತ್ವದ ಮುಂದೆ ಷರತ್ತುಗಳನ್ನು ಹಾಕಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಮೂಲಗಳು ಹೇಳುವಂತೆ, ಶೆಟ್ಟರ್‌ ಅವರ ಹುಟ್ಟೂರು ಧಾರವಾಡ ಕ್ಷೇತ್ರದಲ್ಲಿ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ನೆಲೆ ಕಂಡುಕೊಂಡಿದ್ದಾರೆ. ಹೀಗಾಗಿ, ಅವರು ಧಾರವಾಡ ಕ್ಷೇತ್ರ ಕೇಳಲು ಸಾಧ್ಯವಾಗುವುದಿಲ್ಲ. ಬದಲಾಗಿ, ಅವರು ಹಾವೇರಿ ಲೋಕಸಭಾ ಕ್ಷೇತ್ರ ಮತ್ತು ಅವರ ಸೊಸೆ ಶ್ರದ್ಧಾ ಬೆಳಗಾವಿ ಕ್ಷೇತ್ರದಲ್ಲಿ ಕಣಕ್ಕಿಳಿಯಬಹುದು.

ಇದೆಲ್ಲದರ ನಡುವೆ, ಶೆಟ್ಟರ್ ಅವರು ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಹುಬ್ಬಳ್ಳಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದಾರೆ. ಹೀಗಾಗಿ, ಅವರು ಕಾಂಗ್ರೆಸ್‌ನಲ್ಲಿಯೇ ಉಳಿದಿದ್ದರೂ ಅವರಿಗೆ ಲೋಕಸಭೆ ಚುನಾವಣೆಗೆ ಪಕ್ಷದ ಟಿಕೆಟ್ ಸಿಗುತ್ತಿರಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಶೆಟ್ಟರ್ ಕಾಂಗ್ರೆಸ್‌ ತೊರೆಯಲು ಅಲ್ಲಿ ಟಿಕೆಟ್‌ ಸಿಗುತ್ತಿರಲಿಲ್ಲ ಎಂಬುದೊಂದೇ ಕಾರಣವೇನೂ ಇಲ್ಲ. ಚುನಾವಣೆಯಲ್ಲಿ ಸೋತರೂ, ಅವರನ್ನು ವಿಧಾನ ಪರಿಷತ್‌ಗೆ ಕಾಂಗ್ರೆಸ್‌ ನಾಮನಿರ್ದೇಶನ ಮಾಡಿತ್ತು. ಶೆಟ್ಟರ್ ಹಾಲಿ ಎಂಎಲ್‌ಸಿಯಾಗಿದ್ದರು. ಆದರೆ, ಶೆಟ್ಟರ್‌ ಅವರ ವಿಚಾರಗಳು, ಸಿದ್ಧಾಂತಗಳು ಬಿಜೆಪಿ ಅಂಟಿಕೊಂಡಿದ್ದವು. ಹೀಗಾಗಿ, ಕಾಂಗ್ರೆಸ್‌ ಅವರನ್ನು ಉಪ್ಪರಿಕೆಯ ಮೇಲೆ ಕೂರಿಸಿದ್ದರೂ, ಅವರ ಜೀವಾಳ ಬಿಜೆಪಿಯೊಂದಿಗೆ ತಳುಕುಹಾಕಿಕೊಂಡೇ ಇರುತ್ತಿದ್ದದ್ದು ಸತ್ಯ. ಇದರ ಜೊತೆಗೆ, ಬಿಜೆಪಿಯಿಂದ ಐಟಿ-ಇಡಿ ದಾಳಿಯ ಭೀತಿಯೂ ಅವರಲ್ಲಿ ಇದ್ದಿರಬಹುದು. ಹೀಗಾಗಿ, ಅವರು ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ನಂತರ ಅವರ ಮಾತುಗಳಲ್ಲಿ ಈ ಎಲ್ಲ ಅಂಶಗಳು ಪ್ರತಿಧ್ವನಿಸುವಂತಿವೆ.

ಇದೇನೇ ಇದ್ದರೂ, ಶೆಟ್ಟರ್ ಪಕ್ಷ ಬಿಟ್ಟಿದ್ದನ್ನು ಕಾಂಗ್ರೆಸ್‌ ನಾಯಕರು ಗಂಭೀರವಾಗಿ ಪರಿಗಣಿಸಿಲ್ಲ. ಶೆಟ್ಟರ್ ನಡೆಯಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲವೆಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ.

ಇನ್ನು ಶೆಟ್ಟರ್‌ ಬಳಿಕ ಅಥಣಿ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿಗೆ ಹೋಗಬಹುದು ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ, ‘ನಾನು ಯಾವತ್ತಿಗೂ ಮತ್ತೆ ಬಿಜೆಪಿಗೆ ಹೋಗುವುದಿಲ್ಲ’ ಎಂದು ಸವದಿ ಸ್ಪಷ್ಟ ನಿಲುವು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...