ಹುಲಿ ಉಗುರು ಪ್ರಕರಣ | ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರ ಎಂದು ಹೈಕೋರ್ಟ್ ಮೊರೆ ಹೋದ ಜಗ್ಗೇಶ್!

Date:

ಬಿಗ್‌ಬಾಸ್‌ನ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನದ ಬಳಿಕ ಹುಲಿ ಉಗುರು, ಹಲ್ಲು, ಚರ್ಮ ಬಳಕೆ ಮಾಡುತ್ತಿರುವವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ತೊಡಗಿದ್ದಾರೆ.

ಇದರ ಭಾಗವಾಗಿಯೇ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿ ಆಧರಿಸಿ ರಾಜ್ಯದ ವಿವಿಧೆಡೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು.

ಅಲ್ಲದೇ, ಬುಧವಾರ ನಟ, ಬಿಜೆಪಿ ಸಂಸದ ಜಗ್ಗೇಶ್ ಅವರ ಮನೆಯಲ್ಲಿ ಶೋಧ ನಡೆಸಿದ ವೇಳೆ ಹುಲಿ ಉಗುರು ಇದ್ದ ಲಾಕೆಟ್ ಅನ್ನು ಅರಣ್ಯಾಧಿಕಾರಿಗಳ ವಶಕ್ಕೆ ಒಪ್ಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ’ ಎಂದಿದ್ದ ಜಗ್ಗೇಶ್

ಆ ಬಳಿಕ ಟ್ವೀಟ್ ಮಾಡಿದ್ದ ಜಗ್ಗೇಶ್, ‘ಕಾನೂನು ದೊಡ್ಡದು. ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಇದು ಎಂದು ತಿಳಿಸಿದ್ದೇನೆ. ಎಷ್ಟೋ ದೋಚುವ ಮನುಷ್ಯರು, ದೇಶದ್ರೋಹಿಗಳು, ಕೊಲೆ ಪಾತಕರು, ಸಮಾಜ ಘಾತಕರಿಗಿಂತ ನನ್ನ ತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆ ತಗ್ಗಿಸುವ ಯಾವ ಕೆಲಸವೂ ಮಾಡಿಲ್ಲ, ಮಾಡೋದೂ ಇಲ್ಲ’ ಎಂದಿದ್ದರು.

‘ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ. ಒಂದು ವಿಷಯ ನೆನಪಿಟ್ಟುಕೊಳ್ಳಿ. ಒಳ್ಳೆಯ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರ ಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ. ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕು ಬಯಸಿ ಬಾಳಿದರೆ ನಾಶ’ ಎಂದು ಅವರು ಬರೆದಿದ್ದಾರೆ.

ಮನೆಯಲ್ಲಿ ಶೋಧ ನಡೆಸಿದ ವೇಳೆ ಅರಣ್ಯಾಧಿಕಾರಿಗಳಿಗೆ ಲಾಕೆಟ್ ತಾವಾಗಿಯೇ ಒಪ್ಪಿಸಿದ ಬಳಿಕ, ಅಧಿಕಾರಿಗಳ ವಿರುದ್ಧವೇ ಹೈಕೋರ್ಟಿಗೆ ಜಗ್ಗೇಶ್ ಅರ್ಜಿ ಸಲ್ಲಿಸಿದ್ದು, ಅಧಿಕಾರಿಗಳು ನೋಟಿಸ್ ನೀಡದೆ ಮನೆ ಶೋಧ ಮಾಡಿದ್ದಾರೆ ಎಂದು ದೂರಿದ್ದಾರೆ.

‘ಪೂರ್ತಿ ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು’ ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.

‘ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದು ಪಡಿಸಬೇಕು. ನೋಟಿಸ್​​ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಮನೆಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರ ಎಂದು ಘೋಷಿಸಬೇಕು’ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

‘ಹುಲಿಯಂತೆ ಇರಬೇಕು’ ಎಂದು ಅಮ್ಮ ಕೊಟ್ಟಿದ್ದ ಹುಲಿ ಉಗುರು!
ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್​ನ ಗಿಫ್ಟ್ ಆಗಿ ನೀಡಿದ್ದರು. ನನ್ನ ಮಗ ಹುಲಿಯಂತೆ ಇರಬೇಕು ಎಂದು ಅಮ್ಮ ಕೊಟ್ಟಿರುವುದಾಗಿ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುವ ವೇಳೆ, ಜಗ್ಗೇಶ್ ತನ್ನ ಕೊರಳಲ್ಲಿದ್ದ ಲಾಕೆಟ್ ಅನ್ನು ತೋರಿಸಿದ್ದರು. ಬಹಿರಂಗವಾಗಿ ಹುಲಿ ಉಗುರು ತನ್ನಲ್ಲಿರುವುದಾಗಿ ಘೋಷಿಸಿಕೊಂಡಿದ್ದರು.

ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಸುದ್ದಿ ಹೊರ ಬೀಳುತ್ತಿದ್ದಂತೆಯೇ, ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...