ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ: ಛಲವಾದಿ ನಾರಾಯಣಸ್ವಾಮಿ

Date:

ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ ಮಾಡಲಾಗದು. ಅವರು ಮನೆಗೆ ಹೋಗುವ ಕಾಲ ಬಂದಿದೆ ಎಂದು ವಿಧಾನ ಪರಿಷತ್ತಿನ ನೂತನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಹೊಸ ಹುದ್ದೆಗೆ ನೇಮಕಗೊಂಡ ಬಳಿಕ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಮಂಗಳವಾರ ಭೇಟಿ ನೀಡಿದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.

“ಕಳ್ಳ ಮನೆಗೆ ನುಗ್ಗಿದ ಮೇಲೆ ಎಷ್ಟು ಕದ್ದ ಎಂಬುದು ಪ್ರಶ್ನೆಯಲ್ಲ. ಹಿಂದಿನ ಬಾಗಿಲಿಂದ ಬಂದನೇ? ಮುಂದಿನ ಬಾಗಿಲಿಂದ ನುಗ್ಗಿದನೇ ಎಂಬ ಪ್ರಶ್ನೆಯಿಲ್ಲ. ಕದ್ದಿದ್ದು ನಿಜ. ಲೂಟಿ ಆಗಿರುವುದು ನಿಜ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಜಾನೆ ಲೂಟಿ ಮಾಡುವುದು, ಪರಿಶಿಷ್ಟರ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಹಣವನ್ನು ಖಾಸಗಿ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಹಣ ಪಡೆದು ಬಳಸಿಕೊಳ್ಳುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಗೊತ್ತಿದೆ. ಈಗ ಸಿಕ್ಕಿಬಿದ್ದಿದ್ದಾರೆ. ನಾವು ನೂರು ಹೋರಾಟ ಮಾಡಿದರೆ, ಅವರು ಹುಡುಕಿ ಒಂದಾದರೂ ಹೋರಾಟ ಮಾಡಬೇಕಲ್ಲವೇ? ಅದಕ್ಕಾಗಿಯೇ ಇವತ್ತು ಇ.ಡಿ. ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅದರಲ್ಲಿ ಹುರುಳಿಲ್ಲ” ಎಂದು ಹೇಳಿದರು.

“ಇ.ಡಿ, ಸಿಬಿಐ ತಂದದ್ದು ಕಾಂಗ್ರೆಸ್ ಸರಕಾರ ಅಲ್ಲವೇ? ತಂದ ಮೇಲೆ ನೀವು ಕೆಲಸ ಮಾಡಬೇಡಿ ಎನ್ನುವುದಾದರೆ, ಆ ಮಾತನಾಡಲು ಅವರಿಗೆ ಏನು ಯೋಗ್ಯತೆ ಇದೆ? ಸಿದ್ದರಾಮಯ್ಯನವರು ಮನೆಗೆ ಹೋಗುವ ಕಾಲ ಬಂದಿದೆ. ಅದಕ್ಕಾಗಿ ಅಧಿಕಾರ ಉಳಿಸಿಕೊಳ್ಳಲು ಇಷ್ಟೆಲ್ಲ ನಾಟಕ ಆಡುತ್ತಿದ್ದಾರೆ” ಎಂದು ಹೇಳಿದರು.

“ಬಿಜೆಪಿಯಲ್ಲಿ ಯೋಗ ನಡೆಯುವುದಿಲ್ಲ; ಯೋಗ್ಯತೆಗೆ ಅವಕಾಶ ಕೊಡುತ್ತಾರೆ. ಇಂಥ ಸ್ಥಾನಕ್ಕೆ ಬರಲು ಕಾಂಗ್ರೆಸ್ಸಿನಲ್ಲಿ ಯೋಗ ಮತ್ತು ಕೆಲವೊಂದು ವಿದ್ಯೆಗಳೂ ಬೇಕು. ಪಕ್ಷ ನಿಷ್ಠೆ, ಬದ್ಧತೆಯನ್ನು ಗುರುತಿಸಿ ನನಗೆ ಈ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ತಳ ಸಮುದಾಯಗಳನ್ನು ಸಂಘಟಿಸಿ ಪಕ್ಷ ಸಂಘಟನೆಗೆ ಶ್ರಮಿಸುವೆ” ಎಂದು ತಿಳಿಸಿದರು.

“ಸರಕಾರ ಮಾಡುವ ತೊಂದರೆ, ನ್ಯೂನತೆಗಳನ್ನು ಸಮಾಜಕ್ಕೆ ತಿಳಿಸುವೆ. ಪರಿಶಿಷ್ಟ ಜಾತಿ, ಪಂಗಡಗಳಿಗೆ ಮಾಡಿದ ಅನ್ಯಾಯದ ವಿರುದ್ಧ ಹೋರಾಟ ಮಾಡಲಿದ್ದೇವೆ. ಈ ಜವಾಬ್ದಾರಿ ಕೊಟ್ಟ ಪಕ್ಷದ ಮುಖಂಡರಿಗೆ, ಇದಕ್ಕೆ ಕಾರಣಕರ್ತರಾದ ಪರಿಶಿಷ್ಟ ಸಮುದಾಯದ ಎಲ್ಲರಿಗೂ ಧನ್ಯವಾದ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...