ತಿಪಟೂರು ಜಿಲ್ಲೆ ಕನಸು ಐದು ಗ್ಯಾರಂಟಿಗಳಿಂದಾಗಿ ಸದ್ಯ ನನಸಾಗಲ್ಲ ಎಂದ ಕಾಂಗ್ರೆಸ್ ಶಾಸಕ ಷಡಕ್ಷರಿ

Date:

ತಿಪಟೂರು ಜಿಲ್ಲೆ ಕನಸು ಐದು ಗ್ಯಾರಂಟಿಗಳಿಂದಾಗಿ ಸದ್ಯ ನನಸಾಗಲ್ಲ. ಈ ಐದು ಗ್ಯಾರಂಟಿಗಳು ನಮ್ಮನ್ನು ಮಲಗಿಸಿ ಬಿಟ್ಟಿವೆ ಎಂದು ಸ್ವತಃ ತಿಪಟೂರು ಕಾಂಗ್ರೆಸ್ ಶಾಸಕ ಕೆ ಷಡಕ್ಷರಿ ಹೇಳಿಕೆ ನೀಡಿದ್ದಾರೆ.

ತಿಪಟೂರಿನಲ್ಲಿ ಅ.2ರಂದು ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ತಿಪಟೂರು ಜಿಲ್ಲೆ ಮಾಡಬೇಕು ಎಂಬ ಹೋರಾಟ ನನ್ನದು. ಆದರೆ ಮುಂದಿನ ಬಜೆಟ್‌ವರೆಗೆ ಸರ್ಕಾರದ ಬಳಿ ಹಣ ಇಲ್ಲ. ಈ ಐದು ಗ್ಯಾರಂಟಿಗಳು ನಮ್ಮನ್ನು ಮಲಗಿಸಿ ಬಿಟ್ಟಿವೆ. ಸದ್ಯದ ಪರಿಸ್ಥಿತಿಯಲ್ಲಿ ತಿಪಟೂರು ಜಿಲ್ಲೆ ಕನಸು ನನಸಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

“ಜಿಲ್ಲೆ ಮಾಡಬೇಕು ಅಂದರೆ ಮೊದಲು ಬೆಳಗಾವಿಯನ್ನು ಮಾಡಬೇಕು. 18 ವಿಧಾನಸಭಾ ಕ್ಷೇತ್ರಗಳಿವೆ. ಅಲ್ಲಿ ಎರಡು ಜಿಲ್ಲೆ ಮಾಡಿದ ನಂತರ ನಮ್ಮ ತಿಪಟೂರು ಕೂಡ ಒಂದು ಜಿಲ್ಲೆ ಮಾಡಬೇಕು. ಮುಂದಿನ ಬಜೆಟ್‌ವರೆಗೂ ಸರ್ಕಾರದ ಬಳಿ ದುಡ್ಡಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಮುಖ್ಯಮಂತ್ರಿಗಳ ಬಳಿ ತಿಪಟೂರು ಜಿಲ್ಲೆ ಮಾಡುವ ಬೇಡಿಕೆ ಇಟ್ಟಿದ್ದೆ ಆದರೆ ಮುಖ್ಯಮಂತ್ರಿಗಳು ಅದನ್ನು ಒಪ್ಪಿಕೊಂಡಿಲ್ಲ. ಹೊಸದಾಗಿ ಮಾಡಿದ ಜಿಲ್ಲೆಗಳಿಗೆ ಕುರ್ಚಿ, ಮೇಜು ಕೊಡೋದಕ್ಕೆನೇ ದುಡ್ಡಿಲ್ಲ, ಇನ್ನು ಹೊಸ ಜಿಲ್ಲೆ ಮಾಡೋಕಾಗುತ್ತಾ? ಎಂದು ನನ್ನನ್ನು ಸುಮ್ಮನಿರಿಸಿದ್ದಾರೆ. ಆದರೂ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ನನಗೂ ಆಗಲ್ಲ, ಅವರಿಗೂ ಆಗಲ್ಲ” ಎಂದು ಶಾಸಕ ಷಡಕ್ಷರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...