ಕೆಎಸ್ಆರ್‌ಟಿಸಿ ಟಿಕೆಟ್ ದರಗಳನ್ನು ಹೆಚ್ಚಿಸುವ ಪ್ರಸ್ತಾವನೆ ನಮ್ಮ ಮುಂದಿಲ್ಲ: ಸಿಎಂ ಸಿದ್ದರಾಮಯ್ಯ

Date:

“ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷಕ್ಕೆ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಇಂದು ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರು ಗ್ಯಾರಂಟಿಗಳನ್ನು ರದ್ದು ಮಾಡಲು ಹೇಳಲಿ. ಹೇಳುತ್ತಾರೆಯೇ? ಎಂದು ಪ್ರಶ್ನಿಸಿದ ಅವರು, “ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವುದರಿಂದ ವಿರೋಧ ಪಕ್ಷದವರು ಸಾರಿಗೆ ದರಗಳನ್ನು ಹೆಚ್ಚಿಸಲಾಗುತ್ತದೆ” ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಕೆಎಸ್ಆರ್‌ಟಿಸಿ ಟಿಕೆಟ್ ದರಗಳನ್ನು ಹೆಚ್ಚಿಸುವ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

“ನರೇಂದ್ರ ಮೋದಿಯವರು ಕೇಂದ್ರ ಅಬಕಾರಿ ತೆರಿಗೆ 9.48 ರೂ. ಇದ್ದುದ್ದನ್ನು 32.98 ರೂ.ಗಳಿಗೆ ಏರಿಸಿದರು. ನಾವು ಮಾಡಿದೆವೋ ಅವರು ಹೆಚ್ಚು ಮಾಡಿದರು. ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಒಂದು ಬ್ಯಾರೆಲ್‍ಗೆ ಕಚ್ಛಾತೈಲಕ್ಕೆ 113 ಡಾಲರ್ ಇತ್ತು, ಈಗ ಎಷ್ಟಾಗಿದೆ ಎಂದು ತಿಳಿದುಕೊಳ್ಳಿ. 2015 ರಲ್ಲಿ 50 ಡಾಲರ್‌ಗೆ ಇಳಿದಾಗ ಬೆಲೆಯನ್ನು ಕಡಿಮೆ ಮಾಡಿದರೇ? ಒಮ್ಮೆ 27 ಡಾಲರ್‌ಗೆ ಕಚ್ಛಾತೈಲ ಬೆಲೆ ಇಳಿದಿತ್ತು. ಆಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆ ಮಾಡಿದರೆ? ಬಿಜೆಪಿ ಹೆಚ್ಚಿಸಿದರೆ ಮಾಧ್ಯಮದವರು ಸುಮ್ಮನಿರುತ್ತಾರೆ. ತಿಳಿದುಕೊಳ್ಳುವ ಪ್ರಯತ್ನ ಮಾಡುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಗಳನ್ನು ವಸ್ತುಸ್ಥಿತಿಯ ಮೇಲೆ ಮಾಡಬೇಕು” ಎಂದ ಸಿಎಂ, “ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ ಒಂದು ಲೀಟರ್ ಪೆಟ್ರೋಲ್ ಬೆಲೆ 72 ರೂ.ಗಳಾಗಿತ್ತು. ಇಂದು 102 ರೂ.ಗಳಾಗಲು ಯಾರು ಕಾರಣ. ಒಂದು ಕಡೆ ಕಚ್ಛಾತೈಲದ ಬೆಲೆ ಕಡಿಮೆಯಾಗಿದ್ದರೆ, ಮತ್ತೊಂದೆಡೆ ಪೆಟ್ರೋಲ್ ಬೆಲೆ ಹೆಚ್ಚು ಮಾಡಲಾಗಿದೆ. ಮನ್‌ಮೋಹನ್ ಸಿಂಗ್ ಅವರು ಇದ್ದಾಗ 103 ಕಚ್ಛಾತೈಲದ ಬೆಲೆ ಡಾಲರ್ ಬೆಲೆ ಇದ್ದಾಗ ಸಹಾಯಧನವನ್ನೂ ನೀಡಿ ಪೆಟ್ರೋಲ್ ಬೆಲೆಯನ್ನೂ ಇಳಿಸಿದ್ದರು. ನರೇಂದ್ರ ಮೋದಿಯವರ ಕಾಲದಲ್ಲಿ ಹೆಚ್ಚಾಗಿದೆ” ಎಂದರು.

ಗಣಿಗಾರಿಕೆಗೆ ಅನುಮತಿ ನೀಡಿರುವ ಬಗ್ಗೆ ಪರಿಶೀಲಿಸಲಾಗುವುದು

ಸಂಡೂರಿನಲ್ಲಿ ಗಣಿಗಾರಿಕೆ ಮಾಡಲು ಪರಿಸರಪ್ರೇಮಿಗಳು ವಿರೋಧ ಮಾಡುತ್ತಿರುವ ಬಗ್ಗೆ ಮಾತನಾಡಿ, “ಕೇಂದ್ರ ಸಚಿವ ಹೆಚ್.ಡಿ .ಕುಮಾರಸ್ವಾಮಿಯವರನ್ನು ಕೇಳಿ. ಒಂದು ಕಾಲದಲ್ಲಿ ಅವರೇ ವಿರೋಧಿಸಿ ಈಗ ಅವರೇ ಗಣಿಗಾರಿಕೆ ಮಾಡಿ ಎನ್ನುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...