ಈ ದಿನ ಸಮೀಕ್ಷೆ | ಮೋದಿ ಆಡಳಿತದಲ್ಲಿ ಜನರನ್ನು ಬಾಧಿಸಿದೆ ಬೆಲೆ ಏರಿಕೆ!

Date:

ಈ ದಿನ.ಕಾಮ್‌ ನಡೆಸಿದ ಸಮೀಕ್ಷೆಗೆ ಒಳಪಟ್ಟ ಶೇ 85.30% ಮತದಾರರು ಬೆಲೆಯೇರಿಕೆ ಆಗಿದೆ ಎಂದರೆ ಕೇವಲ 9.16% ಮಂದಿ ಮಾತ್ರ ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ!


ಭಾರತದ
21 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದೆ. ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಇನ್ನು ನಾಲ್ಕು ದಿನಗಳಷ್ಟೇ ಬಾಕಿ ಇವೆ. ರಾಜ್ಯದಲ್ಲಿ ಮತದಾರರ ಒಲವು ಕಾಂಗ್ರೆಸ್‌ ಪರವಾಗಿದೆ ಎಂಬುದು ಈದಿನ.ಕಾಮ್‌ ಸಮೀಕ್ಷೆಯಲ್ಲಿ ಕಂಡುಬಂದಿದೆ. ಇದೇ ಟ್ರೆಂಡ್‌ ಮುಂದುವರೆದರೆ, ಕೈ ಪಡೆ ಸುಮಾರು 20 ಸ್ಥಾನಗಳನ್ನು ಗೆಲ್ಲುವ ಎಲ್ಲ ಸಾಧ್ಯತೆಗಳೂ ಇವೆ.

ಇನ್ನು, ಮೋದಿಯವರ ಹತ್ತು ವರ್ಷಗಳ ಆಡಳಿತದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ, ಭ್ರಷ್ಟಾಚಾರ ಹೆಚ್ಚಳವಾಗಿದೆ ಎಂದು ಮತದಾರರು ಹೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮೀಕ್ಷೆಗೆ ಒಳಪಟ್ಟವರಲ್ಲಿ 85.30% ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಅದರಿಂದ ಭಾರೀ ಪರಿಣಾಮ ಎದುರಿಸುವಂತಾಗಿದೆ ಎಂದು ಹೇಳುತ್ತಿದ್ದಾರೆ. ಕೇವಲ 9.16% ಮಂದಿ ಮಾತ್ರ ಬೆಲೆ ಏರಿಕೆ ಆಗಿಲ್ಲ ಎಂದು ಹೇಳಿದ್ದಾರೆ. ಉಳಿದಂತೆ 5.54% ಜನರು ಗೊತ್ತಿಲ್ಲ ಎಂದಿದ್ದಾರೆ.

ಸಮೀಕ್ಷೆ ಒಟ್ಟು

ಅದರಲ್ಲೂ, ಹೆಚ್ಚಿನ ಮಹಿಳೆಯರು ಬೆಲೆ ಏರಿಕೆ ವಿಪರೀತ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಮಹಿಳೆಯರಲ್ಲಿ 85.89% ಮಂದಿ ಬೆಲೆ ಏರಿಕೆಯಾಗಿದೆ ಎಂದಿದ್ದರೆ, 8.05% ಮಂದಿ ಆಗಿಲ್ಲ ಎಂದಿದ್ದಾರೆ. 6.06% ಮಹಿಳೆಯರು ಮಾತ್ರ ಗೊತ್ತಿಲ್ಲ ಎಂದಿದ್ದಾರೆ.

ಪುರುಷರಲ್ಲಿ, 84.81% ಮಂದಿ ಬೆಲೆ ಏರಿಕೆ ಹೆಚ್ಚಾಗಿದೆ ಎಂದಿದ್ದಾರೆ. 10.09% ಮಂದಿ ಪುರುಷರು ಆಗಿಲ್ಲ ಎಂದು ಹೇಳಿದರೆ, 5.10% ಮಂದಿ ಗೊತ್ತಿಲ್ಲ ಎಂದಿದ್ದಾರೆ.

ಬೆಲೆ ಏರಿಕೆ ಬಗ್ಗೆ ಮಾತನಾಡಿದ ಉದ್ಯೋಗಿಗಳು
ಸಮೀಕ್ಷೆ ಉದ್ಯೋಗ

ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಪೈಕಿ ‘ಕೃಷಿ ಕೂಲಿ ಕಾರ್ಮಿಕ ಅಥವಾ ಇತರ ಕೂಲಿ ಕೆಲಸ’ ಮಾಡುತ್ತಿರುವ ಉದ್ಯೋಗಿಗಳು ಬೆಲೆ ಏರಿಕೆ ಹೆಚ್ಚು ಬಾಧಿಸಿದೆ ಎಂದು ಹೇಳಿದ್ದಾರೆ. ಅವರಲ್ಲಿ, 86.97% ಮಂದಿ ಬೆಲೆ ಏರಿಕೆ ಹೆಚ್ಚಾಗಿದೆ ಎಂದಿದ್ದಾರೆ. ಪ್ರತಿ ತಿಂಗಳು 1 ಲಕ್ಷಕ್ಕೂ ಹೆಚ್ಚು ನಿಗದಿತ ಸಂಬಳವಿರುವ ಉದ್ಯೋಗಿಗಳು (ಸರಕಾರಿ ಅಥವಾ ಖಾಸಗಿ) ಸುಮಾರು 16.83% ಮಂದಿ ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ. ಬೆಲೆ ಏರಿಕೆ ಆಗಿಲ್ಲ ಎಂದವರಲ್ಲಿ ಈ ಉದ್ಯೋಗಿಗಳೇ ಹೆಚ್ಚಿನವರಾಗಿದ್ದಾರೆ.

ಬೆಲೆ ಏರಿಕೆ ಬಗ್ಗೆ ಮಾತನಾಡಿದವರ ವಯಸ್ಸಿನ ಆಧಾರದ ಮೇಲೆ ವರ್ಗೀಕರಣ
ಸಮೀಕ್ಷೆ ವಯಸ್ಸು

ವಯಸ್ಸಿನ ಆಧಾರದಲ್ಲಿ ನೋಡಿದರೆ ಪ್ರತಿಕ್ರಿಯಿಸಿದ ಎಲ್ಲ ವಯೋಮಾನದವರು ಬೆಲೆ ಏರಿಕೆ ಆಗಿದೆ ಎಂದೇ ಹೇಳಿದ್ದಾರೆ. ಆದರೆ, ಈಗಷ್ಟೇ ಶಿಕ್ಷಣ ಮುಗಿಸಿ ಉದ್ಯೋಗದ ಕಡೆಗೆ ಮುಖ ಮಾಡುತ್ತಿರುವ 18ರಿಂದ 25 ವರ್ಷ ವಯಸ್ಸಿನವರಲ್ಲಿ 11.77% ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ. ಎಲ್ಲ ವಯೋಮಾನದವರಲ್ಲಿ ಬೆಲೆ ಏರಿಕೆ ಆಗಿಲ್ಲ ಎಂದವರಲ್ಲಿ ಈ ವಯೋಮಾನದವರೇ ಹೆಚ್ಚಿನವರಾಗಿದ್ದಾರೆ.

ಬೆಲೆ ಏರಿಕೆ ಬಗ್ಗೆ ಮಾತನಾಡಿದವರ ಶಿಕ್ಷಣದ ಆಧಾರದ ಮೇಲೆ ವರ್ಗೀಕರಣ
ಸಮೀಕ್ಷೆ ಶಿಕ್ಷಣ

ಪ್ರತಿಕ್ರಿಯಿಸಿದವರನ್ನು ಅವರು ಪಡೆದಿರುವ ಶಿಕ್ಷಣದ ಆಧಾರದ ಮೇಲೆ ವರ್ಗೀಕರಿಸಿದಾಗ, ಅನಕ್ಷರಸ್ಥರೂ ಅಥವಾ ಶಾಲೆಗೆ ಹೋಗದವರೂ ಕೂಡ ಬೆಲೆ ಏರಿಕೆ ಆಗಿರುವ ಬಗ್ಗೆ ಅರಿವು ಹೊಂದಿದ್ದಾರೆ. ಬೆಲೆ ಏರಿಕೆ ಹೆಚ್ಚಾಗಿದೆ ಎಂದವರಲ್ಲಿ 7ನೇ ತರಗತಿವರೆಗೆ ಓದಿದ್ದು, 2ನೇ ತರಗತಿ ಪಾಸಾಗದೇ ಇರುವವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿ, 86.59% ಮಂದಿ ಬೆಲೆ ಏರಿಕೆ ಬಾಧಿಸಿದೆ ಎಂದಿದ್ದಾರೆ. ಆದರೆ, ಬೆಲೆ ಏರಿಕೆ ಆಗಿಲ್ಲ ಎಂದವರಲ್ಲಿ ವೃತ್ತಿಪರ ಪದವಿ (ಬಿಟೆಕ್, ಎಂಬಿಬಿಎಸ್, ಬಿಎಎಂಎಸ್, ಎಲ್ಎಲ್ ಬಿ, ಪಿಎಚ್ಡಿ) ಪಡೆದವರೇ ಹೆಚ್ಚಿನವರಾಗಿದ್ದಾರೆ. ಅವರಲ್ಲಿ, 20% ಮಂದಿ ಬೆಲೆ ಏರಿಕೆ ಆಗಿಲ್ಲ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಬೆಲೆ ಏರಿಕೆ ಹೆಚ್ಚಾಗಿ ಜನರನ್ನು ಬಾಧಿಸಿದೆ ಎಂದು ಜನರು ಒಪ್ಪಿಕೊಂಡಿದ್ದಾರೆ. ಮೋದಿ ಸರ್ಕಾರವು ಹಣದುಬ್ಬರ – ಬೆಲೆ ಏರಿಕೆಯಲ್ಲಿ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...