ತೊಗರಿಬೆಳೆ ಹಾನಿ | ಪರಿಹಾರ ಇತ್ಯರ್ಥ ಪ್ರಕ್ರಿಯೆ ಚುರುಕು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Date:

ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ ರೈತರಿಗೆ 91.93 ಕೋಟಿ ರೂ. ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಬುಧವಾರ ವಿರೋಧಪಕ್ಷದ ನಾಯಕ ಛಲವಾದಿ ನಾರಯಾಯಣಸ್ವಾಮಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್ ಮತ್ತು ಸದಸ್ಯರಾದ ಶಶಿಲ್ ಜಿ.ನಮೋಶಿ, ಡಾ. ತಳವಾರ್ ಸಾಬಣ್ಣ, ವೈ.ಎಂ.ಸತೀಶ್, ಹೇಮಲತಾ ನಾಯಕ್ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

“ಕಲಬುರ್ಗಿ, ವಿಜಯಪುರ, ಬೆಳಗಾವಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ತೊಗರಿ ಮುಖ್ಯ ಬೆಳೆಯಾಗಿದ್ದು, ಸೆಪ್ಟೆಂಬರ್ ನಿಂದ ನವೆಂಬರ್ ವರೆಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿ ತೇವಾಂಶ ಕುಸಿತದಿಂದ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಇದಕ್ಕೆ ಕಳಪೆ ಬಿತ್ತನೆ ಬೀಜ ಕಾರಣವಲ್ಲ ಎಂಬುದನ್ನು ಪ್ರಯೋಗಾಲಯದ ಮೂಲಕ ಗುಣಮಟ್ಟ ಖಾತರಿ ಮೂಲಕ ಖಚಿತಪಡಿಸಿಕೊಳ್ಳಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಾದ್ಯಂತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 4.09 ಲಕ್ಷ ರೈತರು ತೊಗರಿ ಬೆಳೆಗೆ ವಿಮೆ ಮಾಡಿಸಿದ್ದಾರೆ. ಈ ಪೈಕಿ, ಕಲಬುರಗಿ ಜಿಲ್ಲೆಯಲ್ಲಿ 1.70 ಲಕ್ಷ ರೈತರು, ವಿಜಯಪುರ ಜಿಲ್ಲೆಯಲ್ಲಿ 1.08 ಲಕ್ಷ ರೈತರು, ಬೆಳಗಾವಿ ಜಿಲ್ಲೆಯಲ್ಲಿ 1,213 ರೈತರು ಬೀದರ್ ಜಿಲ್ಲೆಯಲ್ಲಿ 82,384 ರೈತರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6,390 ರೈತರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿದ್ದಾರೆ. ಸ್ಥಳೀಯ ವಿಕೋಪದಡಿ ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ ರೈತರಿಗೆ 91.93 ಕೋಟಿ ರೂ. ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ” ಎಂದು ಸಚಿವರು ವಿವರಿಸಿದರು.

“ಕಲಬುರಗಿ ಜಿಲ್ಲೆಯ 1.69ಲಕ್ಷ ರೈತರಿಗೆ 70.47 ಕೋಟಿ ರೂ. ವಿಮಾ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ಕೊಯ್ಲೋತ್ತರ ಬೆಳೆ ನಷ್ಟಕ್ಕಾಗಿ 2.74 ಕೋಟಿ ವಿಮೆ ಪರಿಹಾರ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಪೈಕಿ, ಕಲಬುರಗಿ ಜಿಲ್ಲೆಯ 2.54 ಕೋಟಿ ರೂ. ಒಳಗೊಂಡಿರುತ್ತದೆ” ಎಂದು ಸದನಕ್ಕೆ ಉತ್ತರ ನೀಡಿದರು.

ತೊಗರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಬೆಂಬಲ ಬೆಲೆ

ಮಾರುಕಟ್ಟೆ ದರಕ್ಕಿಂತ ತೊಗರಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಕಡಿಮೆ ಇರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 450 ರೂ. ಹೆಚ್ಚುವರಿ ಬೆಂಬಲ ಬೆಲೆ ಒದಗಿಸಿ ರೈತರ ನೆರವಿಗೆ ಧಾವಿಸಿದೆ.

2024-25ನೇ ಸಾಲಿನಲ್ಲಿ ಪ್ರತಿ ಕ್ವಿಂಟಾಲ್ ತೊಗರಿಗೆ 7,550 ರೂ. ರಂತೆ ಕೇಂದ್ರ ಸರ್ಕಾರವು ಬೆಂಬಲ ಬೆಲೆಯನ್ನು ಘೋಷಿಸಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ಧಾರಣೆಯಲ್ಲಿ ಮಾರಾಟವಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಶಿಫಾರಸ್ಸಿನ ಅನ್ವಯ, ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಗರಿಷ್ಠ 3,06,150 ಮೆಟ್ರಿಕ್ ಟನ್ ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಕೋಲಾರ ಜಿಲ್ಲೆಗಳ ರೈತರಿಂದ ಬೆಂಬಲ ಬೆಲೆ ರೂ.7,550/-ರ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ರೂ.450/- ಗಳ ಪ್ರೋತ್ಸಾಹಧನ ಪ್ರತಿ ಕ್ವಿಂಟಾಲ್ಗೆ ರೂ.8,000/- ರಂತೆ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂಟಾಲ್ ಖರೀದಿ ಪ್ರಮಾಣವನ್ನು ನಿಗದಿಪಡಿಸಿದೆ.

ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ PACS/TAPCMS/ FPO ಗಳ ಮೂಲಕ ಒಟ್ಟು 516 ಖರೀದಿ ಕೇಂದ್ರಗಳನ್ನು ತೆರೆದು ದಿ:05.03.2025 ರ ಅಂತ್ಯಕ್ಕೆ 79,409 ನೋಂದಾಯಿತ ರೈತರ ಪೈಕಿ, 19,323 ರೈತರಿಂದ 25,401 ಮೆಟ್ರಿಕ್ ಟನ್ ಪ್ರಮಾಣದ ತೊಗರಿಯನ್ನು ಖರೀದಿಸಲಾಗಿರುತ್ತದೆ. ಖರೀದಿ ಪ್ರಕ್ರಿಯೆಯು 02.04.2025 ರವರೆಗೂ ಚಾಲ್ತಿಯಲ್ಲಿರುತ್ತದೆ.

ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...