ಎಲ್ಲ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸೈಬರ್ ಅಪರಾಧಗಳ ಕುರಿತು ತರಬೇತಿ: ಸಚಿವ ಪರಮೇಶ್ವರ್

Date:

ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸಿಐಡಿ ಹಾಗೂ ಸೈಬರ್ ಕ್ರೈಮ್ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ವತಿಯಿಂದ ‌ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ “CIDECODE” ಸೈಬರ್ ಅಪರಾಧ ಶೃಂಗಸಭೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಸೈಬರ್ ಅಪರಾಧಗಳಿಗೆ ಯಾವುದೇ ರೀತಿಯ ಇತಿಮಿತಿಗಳಿಲ್ಲ. ಪ್ರಪಂಚದಲ್ಲಿ ಆಗುತ್ತಿರುವ ಸೈಬರ್ ಅಪರಾಧಗಳ ಕುರಿತು ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಈವರೆಗೆ 46 ಸಾವಿರಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2023ರಲ್ಲಿ 22 ಸಾವಿರ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಬ್ಯಾಂಕ್ ಅಕೌಂಟ್, ಡೇಟಾ ಹ್ಯಾಕ್, ಸರ್ಕಾರಿ ಖಾತೆಗಳು ಹ್ಯಾಕ್‌ ಆಗುವುದು ಸೇರಿದಂತೆ ನಾನಾ ರೀತಿಯ ಸೈಬರ್ ಅಪರಾಧಗಳು ಆಗುತ್ತಿವೆ. ಇದನ್ನು ತಡೆಗಟ್ಟದೆ ಹೋದರೆ ಮುಂದಿನ ದಿನಗಳಲ್ಲಿ ತೊಂದರೆಗಳಾಗುತ್ತವೆ. ಸಾಮಾನ್ಯ ಅಪರಾಧಗಳಿಗಿಂತ ಸೈಬರ್ ಕ್ರೈಂ ಹೆಚ್ಚಾಗುತ್ತಿವೆ” ಎಂದು ಹೇಳಿದರು.

“ಬೆಂಗಳೂರು ನಗರದಲ್ಲಿ ದಸಖಲಾಗುತ್ತಿರುವ ಸಾಮಾನ್ಯ ಅಪರಾಧಗಳಲ್ಲಿ ಶೇ. 30ರಷ್ಟು ಸೈಬರ್ ಅಪರಾಧಗಳು ದಾಖಲಾಗುತ್ತಿವೆ. ವೈಟ್‌ಫೀಲ್ಡ್ ವಿಭಾಗದ ವ್ಯಾಪ್ತಿಯಲ್ಲಿ ಶೇ.40ರಷ್ಟು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ. ಇದು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಆರಂಭಿಕ ಹಂತದಲ್ಲೆ ಹೆಚ್ಚು ಫೋಕಸ್ ಮಾಡಿ ತಡೆಗಟ್ಟಲು ಅಗತ್ಯ ಕ್ರಮ ವಹಿಸಲಾಗುವುದು” ಎಂದರು.

“ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ತಂತ್ರಜ್ಞಾನ ಮತ್ತು ತರಬೇತಿಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಜಾಗತಿಕವಾಗಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ತಾಂತ್ರಿಕ ಬಲವರ್ಧನೆಯನ್ನು ಹೆಚ್ಚಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಿಐಡಿ ಡಿಕೋಡ್ ಶೃಂಗಸಭೆಯು ಸಹಕಾರಿಯಾಗಲಿದೆ. ಹ್ಯಾಕಥಾನ್ ಮತ್ತು ಸೈಬರ್ ಲಾ ಐಡಿಯಾಥಾನ್‌ನಂತಹ ಕಾರ್ಯಕ್ರಮಗಳು ಸುರಕ್ಷಿತ ಡಿಜಿಟಲ್ ಕರ್ನಾಟಕ ಮತ್ತು ಸುರಕ್ಷಿತ ಭಾರತವನ್ನು ನಿರ್ಮಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಅಭಿಪ್ರಾಯಪಟ್ಟರು.

ಕೇಂದ್ರ ತನಿಖಾ ವಿಭಾಗವು (ಸಿಐಡಿ) ಆಯೋಜಿಸಿದ್ದ ಹ್ಯಾಕಥಾನ್ ಮತ್ತು ಸೈಬರ್ ಲಾ ಐಡಿಯಾಥಾನ್‌ಗಳಲ್ಲಿ ಭಾಗವಹಿಸಿ, ಡೀಪ್ ಫೇಕ್ ಪತ್ತೆ, ಬ್ಲಾಕ್ ಚೈನ್ ತಂತ್ರಜ್ಞಾನ ಬಳಕೆ ಸೇರಿದಂತೆ ಇನ್ನಿತರ ಸೈಬರ್ ಅಪರಾಧಗಳಿಗೆ ಸಮಸ್ಯೆಗಳನ್ನು ಬಗೆಹರಿಸಲು ತಂತ್ರಾಂಶಗಳನ್ನು ಅಭಿವೃದ್ಧಿಪಡಿಸುವ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಬಹುಮಾನ ನೀಡಿ ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...