ನಂಬಿಕೆ ನಕ್ಷೆ, ಹೊಸ ಆಸ್ತಿ ತೆರಿಗೆ, ಖಾತಾ ವ್ಯವಸ್ಥೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ ‘ನಂಬಿಕೆ ನಕ್ಷೆ'(ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆ, ‘ಹೊಸ ಆಸ್ತಿ ತೆರಿಗೆ ವ್ಯವಸ್ಥೆ’ ಹಾಗೂ ‘ಖಾತಾ ವ್ಯವಸ್ಥೆ'(ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ ಆಸ್ತಿ ತೆರಿಗೆ ಸಂಖ್ಯೆ ನಿಯೋಜನೆ ಮತ್ತು ‘ಬಿಬಿಎಂಪಿ ಖಾತಾ ವಿತರಣೆ ಯೋಜನೆ)ಗೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಈ ವೇಳೆ ವಸತಿ ಸಚಿವರಾದ ಬಿ‌.ಝಡ್ ಜಮೀರ್ ಅಹ್ಮದ್ ಖಾನ್, ಬಿಡಿಎ ಅಧ್ಯಕ್ಷರಾದ ಎನ್.ಎ ಹ್ಯಾರೀಸ್, ಶಾಸಕರಾದ ರಿಜ್ವಾನ್ ಹರ್ಷದ್, ಮಾಜಿ ಶಾಸಕರಾದ ಮಂಜುನಾಥ್, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ ಆಸ್ತಿ ತೆರಿಗೆ ಸಂಖ್ಯೆ ನಿಯೋಜನೆ ಮತ್ತು “ಬಿಬಿಎಂಪಿ ಖಾತಾ” ವಿತರಣೆ ಯೋಜನೆಯ ಮಾಹಿತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಮಬದ್ಧವಲ್ಲದ ಮತ್ತು ಅನಧಿಕೃತ ಸ್ವತ್ತುಗಳಿಗೆ ಆಸ್ತಿತೆರಿಗೆ ಸಂಗ್ರಹಿಸಲು ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 ಉಪ ಪ್ರಕರಣ 6 ಅವಕಾಶ ಕಲ್ಪಿಸುತ್ತದೆ. ಆದರೆ ಸ್ವತ್ತುಗಳು ಸರ್ಕಾರದ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಸೇರಿದ ಜಮೀನುಗಳಲ್ಲಿ ಇರಬಾರದು.

ಬಿಬಿಎಂಪಿಯ ಸುರಕ್ಷಿತ ಅನೈನ್ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದ್ದು, ಇದರಲ್ಲಿ ನಾಗರೀಕರು ಬಿಬಿಎಂಪಿಯ ಆಸ್ತಿ ತೆರಿಗೆ ನೋಂದಣಿ” ಯಲ್ಲಿ ತಮ್ಮ ಆಸ್ತಿಗಳನ್ನು ನಮೂದಿಸಲು ಆನೈನ್ನಲ್ಲಿ ಅರ್ಜಿ ಸಲ್ಲಿಸುತ್ತಾರೆ. ತದನಂತರ ನಾಗರೀಕರು ತಮ್ಮ ಆಸ್ತಿ ತೆರಿಗೆಯನ್ನು ತಕ್ಷಣವೇ ಪಾವತಿಸಲು ಮತ್ತು ತಾತ್ಕಾಲಿಕ ಆಸ್ತಿತೆರಿಗೆ ಸಂಖ್ಯೆಯನ್ನು ಪಡೆಯಬಹುದಾಗಿರುತ್ತದೆ.

ಲಕ್ಷಗಟ್ಟಲೆ ಆಸ್ತಿ ಮಾಲೀಕರಿಗೆ ಇದು ವಿಶೇಷ ಅವಕಾಶವಾಗಿದ್ದು, 31/7/2024 ರವರೆಗೆ ನೀಡಲಾಗುತ್ತಿರುವ ಒಂದು ಬಾರಿ ಪರಿಹಾರ (OTS) ಯೋಜನೆ ಅಡಿಯಲ್ಲಿ ಬಡ್ಡಿ ಮತ್ತು ಇತರೆ ವಿನಾಯಿತಿಗಳ ಸಂಪೂರ್ಣ ಪ್ರಯೋಜನವನ್ನು ಪಡೆಯಲು ನಾಗರೀಕರಿಗೆ ಅನುವು ಮಾಡಿಕೊಡುತ್ತದೆ.

ನಾಗರೀಕರು ತಮ್ಮ ಮೊಬೈಲ್ ಮತ್ತು ಔಖಿಕ ಬಳಸಿ ಲಾಗಿನ್ ಮಾಡಬೇಕು ಮತ್ತು ಆಧಾರ್ ಮೂಲಕ ಅವರ ಗುರುತನ್ನು ದೃಢೀಕರಿಸಬೇಕು ಮತ್ತು ಅಸ್ತಿಯ ಮಾಲಿಕರ & ಅಸ್ತಿಯ ಛಾಯಾಚಿತ್ರ ಮತ್ತು GPS ಅನ್ನು ಅಪ್ಲೋಡ್ ಮಾಡಬೇಕು. ನಾಗರೀಕರು ಮಾಲೀಕರ ಮತ್ತು ಆಸ್ತಿ ವಿವರಗಳನ್ನು ನಮೂದಿಸುತ್ತಾರೆ. ನೋಂದಾಯಿತ ಪತ್ರ ಮತ್ತು ಇತರ ದಾಖಲೆಗಳನ್ನು ಸಹ ಅಪ್ಲೋಡ್ ಮಾಡಬೇಕು. ಇದನ್ನು ಬಿಬಿಎಂಪಿ “ಖಾತಾ” ಗಾಗಿ ಸಲ್ಲಿಸುವ ಅರ್ಜಿ ಎಂದು ಪರಿಗಣಿಸಲಾಗುತ್ತದೆ.

ಬಿಬಿಎಂಪಿಯು ಸ್ವಯಂಚಾಲಿತವಾಗಿ ತಾತ್ಕಾಲಿಕ ಆಸ್ತಿತೆರಿಗೆ ಸಂಖ್ಯೆಯನ್ನು ನೀಡುತ್ತದೆ ಮತ್ತು ನಾಗರೀಕರು ನೀಡಿದ ಸ್ವತ್ತಿನ ಉಪಯೋಗದ ವಿವರಗಳ ಪ್ರಕಾರ ಆಸ್ತಿತೆರಿಗೆಯನ್ನು ತಕ್ಷಣವೇ ಪಾವತಿಸಲು ಅನುವು ಮಾಡಿಕೊಡುತ್ತದೆ. ಬಿಬಿಎಂಪಿಯು ಖಾತೆಗಾಗಿ ಸಲ್ಲಿಸಿರುವ ಅರ್ಜಿಗೆ ತಾತ್ಕಾಲಿಕ ಆಸ್ತಿತೆರಿಗೆ ಸಂಖ್ಯೆಯೊಂದಿಗೆ ಸರಿಯಾದ ಸ್ವೀಕೃತಿಯನ್ನು ನೀಡಲಾಗುವುದು.

ಬಿಬಿಎಂಪಿಯು ಸ್ವೀಕರಿಸಿದ ಅರ್ಜಿಯನ್ನು ಕಾಲಮಿತಿಯಲ್ಲಿ ಪ್ರಕ್ರಿಯೆಗೊಳಿಸುತ್ತದೆ ಹಾಗೂ ಕಾನೂನು ಮತ್ತು ನಿಯಮಗಳ ಪ್ರಕಾರ ಬಿಬಿಎಂಪಿಯ ಸೂಕ್ತ ಆಸ್ತಿತೆರಿಗೆ ವಹಿಯಲ್ಲಿ ಆಸ್ತಿಯನ್ನು ನಮೂದಿಸುತ್ತದೆ. ಬಿಬಿಎಂಪಿಯು ಸ್ವತ್ತನ್ನು ಆಸ್ತಿತೆರಿಗೆ ವಹಿಯಲ್ಲಿ ನಮೂದಿಸಿದ ತಕ್ಷಣವೇ, “ಖಾತಾ” ಮತ್ತು ಅಂತಿಮ ಹಾಗೂ ಶಾಶ್ವತ ಆಸ್ತಿತೆರಿಗೆ ಸಂಖ್ಯೆಯನ್ನು ನೀಡಲಾಗುವುದು.

ಯೋಜನೆಯ ಆನೈನ್ ಅರ್ಜಿಗಳನ್ನು 20ನೇ ಮಾರ್ಚ್ 2024ರ ನಂತರ https://bbmptax.karnataka.gov.inಗೆ ಸಂಪರ್ಕಿಸಬಹುದು.

ನಾಗರಿಕರು ತಮ್ಮ ಸ್ಥಳೀಯ ಸಹಾಯಕ ಕಂದಾಯ ಅಧಿಕಾರಿಯವರನ್ನು ಸಂಪರ್ಕಿಸಬಹುದು ಅವರು ಅನೈನ್ ವ್ಯವಸ್ಥೆಯಲ್ಲಿ ಅರ್ಜಿಯನ್ನು ನಮೂದಿಸುತ್ತಾರೆ ಹಾಗೂ ತಾತ್ಕಾಲಿಕ ಆಸ್ತಿತೆರಿಗೆ ಸಂಖ್ಯೆಯನ್ನು ಮತ್ತು ಸ್ವೀಕೃತಿಯನ್ನು ರಚಿಸುತ್ತಾರೆ. ಹಾಗೂ ನಾಗರಿಕರು ತಮ್ಮ ಆಸ್ತಿತೆರಿಗೆಯನ್ನು ಪಾವತಿಸಲು ಮತ್ತು ” ಬಿಬಿಎಂಪಿ ಖಾತಾ’ಗಾಗಿ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತಾರೆ. ಈ ಸೌಲಭ್ಯವು ಶೀಘ್ರದಲ್ಲೇ ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ಲಭ್ಯವಾಗಲಿದೆ.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...