ತುಮಕೂರು | ಎಚ್‌ಡಿಕೆ ಮತ್ತೊಮ್ಮೆ ಸಿಎಂ ಆಗಬೇಕು; ಮಲೆಮಹದೇಶ್ವರಕ್ಕೆ ಜೆಡಿಎಸ್ ಕಾರ್ಯಕರ್ತರ ಪಾದಯಾತ್ರೆ

Date:

ಎಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂದು ಬಯಸಿರುವ ಮಧುಗಿರಿ ತಾಲೂಕಿನ ಮೂವರು ಜೆಡಿಎಸ್‌ ಕಾರ್ಯಕರ್ತರು ಮಲೈಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ತಾಲ್ಲೂಕಿನ ಶ್ರಾವಂಡನಹಳ್ಳಿ ಎಸ್.ಎ ಅಶೋಕ್, ಜಗದೀಶ್ ಹಾಗೂ ಮೂರ್ತಿ ಶ್ರಾವಂಡನಹಳ್ಳಿಯಿಂದ ಮಲೈಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿರುವ ಕಾರ್ಯಕರ್ತರು. ಎಚ್‌.ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಬೇಕು. ಮಧುಗಿರಿ ಶಾಸಕ ವೀರಭದ್ರಯ್ಯ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಬೇಕು. ಗೌರಿಬಿದನೂರಿನ ಜೆಡಿಎಸ್ ಅಭ್ಯರ್ಥಿ ನರಸಿಂಹಮೂರ್ತಿ ಗೆಲುವು ಸಾಧಿಸಬೇಕೆಂದು ಹರಕೆ ಹೊತ್ತಿರುವ ಮೂವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಮಾರ್ಚ್‌ 23ರಿಂದ ಪಾದಯಾತ್ರೆ ಹೊರಟಿರುವ ಮೂವರು ಮಂಡ್ಯ ಜಿಲ್ಲೆಯ ಭಾರತೀನಗರ ತಲುಪಿಸಿದ್ದಾರೆ. ಅವರನ್ನು ಅಲ್ಲಿನ ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ಸ್ವಾಗತಿಸಿ ಅಭಿನಂದಿಸಿ ಬೀಳ್ಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುಗಾದಿ ಹಬ್ಬದ ಮಾರನೆಯ ದಿನದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ದಾರಿಯುದ್ದಕ್ಕೂ ನಮ್ಮ ಪಾದಯಾತ್ರೆಗೆ ಹಲವರು ಶುಭ ಹಾರೈಸುತ್ತಿದ್ದಾರೆ. ಎಲ್ಲರ ಬೆಂಬಲ ಸಂತಸ ತಂದಿದೆ” ಎಂದು ಪಾದಯಾತ್ರೆಗಳು ಹರ್ಷ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಆಡಳಿತ ಪಕ್ಷಕ್ಕೆ ಮತ್ತೊಂದು ಶಾಕ್‌: ಕೂಡ್ಲಿಗಿ ಬಿಜೆಪಿ ಶಾಸಕ ಎನ್‌ ವೈ ಗೋಪಾಲಕೃಷ್ಣ ಕಾಂಗ್ರೆಸ್‌ ಕಡೆ ಮುಖ

“ಎಚ್.ಡಿ.ಕುಮಾರಸ್ವಾಮಿ ತಮ್ಮ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಇದುವರೆವಿಗೂ ಅಂತಹ ಆಡಳಿತವನ್ನು ಯಾವ ಮುಖ್ಯಮಂತ್ರಿಗಳು ನೀಡಿಲ್ಲ. ಲಾಟರಿ, ಸಾರಾಯಿ ನಿಷೇಧ, ಬಡವರಿಗೆ, ನಿರ್ಗತಿಕರಿಗೆ ಸಹಾಯ ಮಾಡುತ್ತ ಉತ್ತಮ ಆಡಳಿತ ನೀಡಿ ಜನರ ಮನಸ್ಸನ್ನು ಗೆದ್ದಿದ್ದಾರೆ. ಇವರು ಆಯ್ಕೆಗೊಂಡರೆ ರಾಜ್ಯ ಅಭಿವೃದ್ದಿಗೊಳ್ಳುತ್ತದೆ ಎಂಬ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ” ಎಂದು ಎಸ್.ಎ ಅಶೋಕ್ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...