ತುಂಗಭದ್ರಾ ಜಲಾಶಯ | ಡ್ಯಾಂನ ಎಲ್ಲ ಕ್ರೆಸ್ಟ್​​ಗೇಟ್ ಬದಲಾವಣೆಗೆ ತಜ್ಞರ ಸಲಹೆ: ಶಿವರಾಜ್ ತಂಗಡಗಿ

Date:

ತುಂಗಭದ್ರಾ ಜಲಾಶಯದ ಇತರ ಕ್ರೆಸ್ಟ್​​ಗೇಟ್​ಗಳ ಬಗ್ಗೆ ತಜ್ಞರು ಆಘಾತಕಾರಿ ಮಾಹಿತಿ ನೀಡಿದ್ದು, ಸದ್ಯದ ಪರಿಸ್ಥಿತಿಯಲ್ಲಿ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್​ಗಳನ್ನೂ ಬದಲಾವಣೆ ಮಾಡಬೇಕು ಎಂಬ ಸಲಹೆಯನ್ನು ನೀಡಿದ್ದಾರೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಇತ್ತೀಚೆಗೆ ಕ್ರೆಸ್ಟ್​​ಗೇಟ್ ಕೊಚ್ಚಿಕೊಂಡು ಹೋಗಿ ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಒಂದು ವಾರದ ನಿರಂತರ ಪ್ರಯತ್ನದ ಫಲವಾಗಿ ತಾತ್ಕಾಲಿಕ ಗೇಟ್ ಅಳವಡಿಕೆ ಮಾಡಲಾಗಿತ್ತು.

ತುಂಗಭದ್ರಾ ಜಲಾಶಯದ ತಾಂತ್ರಿಕ ತಜ್ಞರ ತಂಡ ಈಗಾಗಲೇ ಎರಡು ಬಾರಿ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದೆ. ಕೇಂದ್ರ ಜಲಶಕ್ತಿ ಆಯೋಗದ ಅಧಿಕಾರಿಗಳ ತಂಡ ಕಳೆದ ವಾರ ಜಲಾಶಯಕ್ಕೆ ಭೇಟಿ ನೀಡಿ ಸ್ಥಿತಿಗತಿ ಅಧ್ಯಯನ ಮಾಡಿರುವ ಈ ಬಗ್ಗೆ ತುಂಗಭದ್ರಾ ಜಲಾಶಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಜಲಾಶಯದ ಕ್ರೆಸ್ಟ್​​ಗೇಟ್​ಗಳು, ಚೈನ್ ಲಿಂಕ್‌ಗಳನ್ನು ಪ್ರತಿ 50 ವರ್ಷಕ್ಕೊಮ್ಮೆ ಬದಲಾಯಿಸಬೇಕು. ಆದರೆ ತುಂಗಭದ್ರಾ ಜಲಾಶಯಕ್ಕೆ 70 ವರ್ಷಗಳ ಹಿಂದೆಯೇ ಕ್ರೆಸ್ಟ್​​ಗೇಟ್, ಚೈನ್ ಲಿಂಕ್​ಗಳನ್ನು ಅಳವಡಿಸಲಾಗಿದೆ. ಆ ನಂತರ ಈವರೆಗೆ ಒಮ್ಮೆಯೂ ಬದಲಾಯಿಸಿಲ್ಲ. ಹೀಗಾಗಿ ಎಲ್ಲ 33 ಕ್ರೆಸ್ಟ್​​ಗೇಟ್​​​ಗಳನ್ನು ಬದಲಿಸಬೇಕು ಎಂದು ಚರ್ಚೆಯಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಜಲಾಶಯ ನಿರ್ವಹಣೆ ಮಾಡುವುದು ಹೈದರಾಬಾದ್​ನಲ್ಲಿರುವ ತುಂಗಭದ್ರಾ ಜಲಾಶಯ ಮಂಡಳಿ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರವಿಲ್ಲ. ಮಂಡಳಿ ಗೇಟ್ ಬದಲಾವಣೆ ಮಾಡುವುದಾದರೆ ನಮ್ಮ ಪಾಲಿನ ಹಣವನ್ನು ನೀಡಲು ಸಿದ್ಧ” ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

“ಬೇಸಿಗೆ ಸಮಯದಲ್ಲಿ ಹೊಸ ಗೇಟ್‌ಗಳ ಅಳವಡಿಕೆ ಕಾರ್ಯ ಆರಂಭಿಸಲು ಬೇಕಾದ ಸಿದ್ದತೆಯನ್ನು ಈಗಿನಿಂದಲೇ ಆರಂಭಿಸಬೇಕಿದೆ. 33 ಗೇಟ್‌ಗಳ ಅಳವಡಿಕೆಗೆ ಸಾಕಷ್ಟು ಸಮಯ ಬೇಕಾಗಿರುವುದರಿಂದ ಈಗಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು”ಎಂದಿದ್ದಾರೆ.

ತುಂಗಭದ್ರಾ ಜಲಾಶಯ ಕರ್ನಾಟಕದ 4 ಜಿಲ್ಲೆಗಳು, ನೆರೆಯ ತೆಲೆಂಗಾಣ, ಆಂಧ್ರಪ್ರದೇಶ ಲಕ್ಷಾಂತರ ಜನರ ಬದುಕಿಗೆ ಆಶ್ರಯವಾಗಿದೆ. ಕಳೆದ ವರ್ಷ ಬರಗಾಲದಿಂದಾಗಿ ಜಲಾಶಯ ಪೂರ್ಣ ಪ್ರಮಾಣದಲ್ಲಿ ತುಂಬಿರಲಿಲ್ಲ. ಆದರೆ ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಆಗಸ್ಟ್ ಮೊದಲ ವಾರದಲ್ಲಿಯೇ ಭರ್ತಿಯಾಗಿತ್ತು. ಆದರೆ 2024ರ ಆಗಸ್ಟ್ 10ರಂದು ರಾತ್ರಿ ಸಮಯದಲ್ಲಿ ಡ್ಯಾಂನ 19 ನೇ ಕ್ರೆಸ್ಟಗೇಟ್ ಕೊಚ್ಚಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿತ್ತು. ನಂತರ ತಾತ್ಕಾಲಿಕ ಗೇಟ್ ಅಳವಡಿಕೆಯಿಂದ ಡ್ಯಾಂ ಮತ್ತೆ ಭರ್ತಿಯಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...