ಪ್ರತಿಭಟನೆಯಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಸಾವು; ಪೊಲೀಸರ ದೌರ್ಜನ್ಯ ಆರೋಪ

Date:

ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬುಧವಾರ ಪ್ರತಿಭಟನೆಯ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದು, ಪೊಲೀಸರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮೃತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮೃತರನ್ನು ಪ್ರಭಾತ್ ಪಾಂಡೆ ಮತ್ತು ಮೃದುಲ್ ಇಸ್ಲಾಂ ಎಂದು ಗುರುತಿಸಲಾಗಿದ್ದು, ವಿವಿಧ ಸಮಸ್ಯೆಗಳ ವಿರುದ್ಧ ನಡೆದ ಪ್ರತಿಭಟನೆ ನಡೆಸುತ್ತಿದ್ದಾಗ ಸಾವನ್ನಪ್ಪಿದ್ದಾರೆ. “ಪೊಲೀಸ್ ದೌರ್ಜನ್ಯದಿಂದಾಗಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಅಶ್ರುವಾಯುವಿನಿಂದ ಗಾಯಗೊಂಡಿದ್ದರು” ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನು ಓದಿದ್ದೀರಾ? ಅಕ್ರಮ ಗಣಿಗಾರಿಕೆ | ಲೂಟಿಕೋರರ ಪರ ನಿಂತಿರುವ ಕಾಂಗ್ರೆಸ್ ಸರ್ಕಾರ: ಎಎಪಿ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶ ವಿಧಾನಸಭೆ ಬಳಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತ ಪ್ರಭಾತ್ ಪಾಂಡೆ ‘ಪೊಲೀಸ್ ದೌರ್ಜನ್ಯದಿಂದ’ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ದೂರಿದ್ದಾರೆ.

ಗೋರಖ್‌ಪುರ ಮೂಲದ 28 ವರ್ಷದ ಪ್ರಭಾತ್ ಪಾಂಡೆ ಅವರು ಪ್ರತಿಭಟನೆ ಬಳಿಕ ತೀವ್ರ ಆಯಾಸಗೊಂಡು ಕಾಂಗ್ರೆಸ್ ಕಚೇರಿಯಲ್ಲಿದ್ದು. ಅಲ್ಲಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆಯಲ್ಲಿ ಪ್ರಭಾತ್ ಸಾವನ್ನಪ್ಪಿರುವುದಾಗಿ ಪೊಲೀಸರು ದೃಢಪಡಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಮೃತರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಆರ್ಥಿಕ ನೆರವು ನೀಡಬೇಕು ಮತ್ತು ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅಜಯ್ ರೈ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಮೋದಿ ಸರ್ಕಾರದ ನೂತನ ಸಂಹಿತೆ ಕಾಂಗ್ರೆಸ್ ಜಾರಿ ಮಾಡಿದರೆ ವಿಧಾನಸೌಧಕ್ಕೆ ಲಗ್ಗೆ – ಸಿಐಟಿಯು

“ವೈದ್ಯರ ಪ್ರಕಾರ ದೇಹದಲ್ಲಿ ಯಾವುದೇ ಗಾಯದ ಗುರುತು ಇರಲಿಲ್ಲ. ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಸೆಂಟ್ರಲ್ ಲಕ್ನೋ ಡಿಸಿಪಿ ರವೀನಾ ತ್ಯಾಗಿ ಹೇಳಿದ್ದಾರೆ.

ಅಸ್ಸಾಂನಲ್ಲೂ ಕಾಂಗ್ರೆಸ್ ಕಾರ್ಯಕರ್ತ ಸಾವು

ಪ್ರತಿಭಟನೆಯ ವೇಳೆ ಅಶ್ರುವಾಯು ಹೊಗೆಯಿಂದ ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಲೀಗಲ್ ಸೆಲ್ ಸದಸ್ಯ ಮೃದುಲ್ ಇಸ್ಲಾಂ ಅವರ ಬಳಿ ಅಶ್ರುವಾಯು ಬಿದ್ದಿದೆ. ಇದರಿಂದಾಗಿ ಅವರು ಉಸಿರುಗಟ್ಟಿ ಸಾವನ್ನಪ್ಪಿದರು ಎಂದು ಕಾಂಗ್ರೆಸ್ ವಕ್ತಾರ ಬೇಡಬ್ರತ್ ಬೋರಾ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಎರಡು ಘಟನೆಗಳ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಿಜೆಪಿ ಆಡಳಿತವಿರುವ ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಮತ್ತೆ ಕೊಲೆ ಮಾಡಲಾಗಿದೆ. ದೇಶಾದ್ಯಂತ ಬಾಬಾಸಾಹೇಬ್ ಮತ್ತು ಸಂವಿಧಾನವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಸತ್ಯಾಗ್ರಹ ನಡೆಸುತ್ತಿದೆ. ಈ ಸಮಯದಲ್ಲಿ, ಗುವಾಹಟಿಯಲ್ಲಿ ಮೃದುಲ್ ಇಸ್ಲಾಂ ಮತ್ತು ಲಕ್ನೋದಲ್ಲಿ ಪ್ರಭಾತ್ ಪಾಂಡೆ ಎಂಬ ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಬಲದಿಂದಾಗಿ ಸಾವಿಗೀಡಾಗಿರುವುದು ತುಂಬಾ ದುಃಖಕರ ಮತ್ತು ಖಂಡನೀಯ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...