ವಿಧಾನಸಭೆಯಲ್ಲಿ ಎರಡು ದಿನ ‘ಗದ್ದಲ’; 18 ಬಿಜೆಪಿ ಶಾಸಕರ ಅಮಾನತು

Date:

ಜಾರ್ಖಂಡ್ ವಿಧಾನಸಭೆಯಲ್ಲಿ ಎರಡು ದಿನಗಳ ಕಲಾಪಕ್ಕೆ ಅಡ್ಡಿಪಿಸಿದ ಅಲ್ಲಿನ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ. ಬುಧವಾರದಿಂದ ಬಿಜೆಪಿ ಶಾಸಕರು ಸದನದ ಆವರಣದಲ್ಲಿ ಮಲಗಿದ್ದರು. ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿದಂತೆ ತಮ್ಮ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಉತ್ತರಿಸಬೇಕೆಂದು ಅವರು ಪಟ್ಟುಹಿಡಿದಿದ್ದರು.

ವಿಧಾನಸಭೆಯ ಇತಿಹಾಸದಲ್ಲಿ ಈ ಎರಡು ದಿನಗಳು ‘ಕಪ್ಪು ಅಧ್ಯಾಯ’ವಾಗಿವೆ ಎಂದು ವಿಧಾನಸಭೆ ಸ್ಪೀಕರ್ ರವೀಂದ್ರ ನಾಥ್ ಮಹತೋ ಹೇಳಿದ್ದಾರೆ. ‘ಹುದ್ದಂಗಿ’ (ಗದ್ದಲ) ಸೃಷ್ಟಿಸಿದ ಕಾರಣಕ್ಕಾಗಿ 18 ಬಿಜೆಪಿ ಶಾಸಕರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಮತ್ತೊಂದೆಡೆ, ಈ ಅಮಾನತು ಆದೇಶವನ್ನು ಬಿಜೆಪಿ ‘ಪ್ರಜಾಪ್ರಭುತ್ವದ ಕೊಲೆ’ ಎಂದು ಕರೆದಿದೆ.

ಬುಧವಾರ, ತಮ್ಮ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸೋರೆನ್ ಉತ್ತರಿಸಬೇಕೆಂದು ಬಿಜೆಪಿ ಶಾಸಕರು ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗಿದ್ದರಿಂದಾಗಿ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಯಾಯಿತು. ಹೇಮಂತ್ ಸೊರೇನ್ ಅವರು ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವುದಾಗಿ ಹೇಳಿದರೂ, ಶಾಸಕರು ಸುಮ್ಮನಾಗಲಿಲ್ಲ. ಅವರು ರಾತ್ರಿಯಿಡೀ ವಿಧಾನಸಭೆಯಲ್ಲಿ ಇದ್ದರು. ಮರುದಿನ ಅವರು ಮತ್ತೆ ಪ್ರತಿಭಟನೆ ಆರಂಭಿಸಿದರು. ಗದ್ದಲದಿಂದಾಗಿ ಕಲಾಪವನ್ನು ಅಲ್ಪಾವಧಿಗೆ ಮುಂದೂಡಲಾಯಿತು. ವಿರಾಮದ ನಂತರ, ಅವರು ಸದನಕ್ಕೆ ಬ್ಯಾನರ್‌ ತೆಗೆದುಕೊಂಡು ಬಂದರು. ಅವರನ್ನು ಸದನದಿಂದ ಹೊರಗೆ ಕಳಿಸಲು ಮಾರ್ಷಲ್‌ಗಳನ್ನು ಕರೆಸಬೇಕಾಯಿತು” ಎಂದು ಸ್ಪೀಕರ್ ಮಹತೋ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಸಕರು ವಿಧಾನಸಭೆಯನ್ನು ಅಪಹಾಸ್ಯ ಮಾಡಲು ಸಾಮಾಜಿಕ ಮಾಧ್ಯಮವನ್ನು ಬಳಸಿದ್ದಾರೆ. ಇದು ಜಾರ್ಖಂಡ್ ವಿಧಾನಸಭೆಯ ಇತಿಹಾಸದಲ್ಲಿ ಒಂದು ಕಪ್ಪು ಅಧ್ಯಾಯವಾಗಿದೆ. ನಾವು ಈ ವಿಷಯಗಳ ಬಗ್ಗೆ ಮೌನವಾಗಿರಲು ಸಾಧ್ಯವಿಲ್ಲ. ಯಾಕೆಂದರೆ, ಮೌನವಾಗಿದ್ದರೆ, ಈ ಮನಸ್ಥಿತಿ ಶಾಶ್ವತವಾಗಿ ಬೇರೂರುತ್ತದೆ” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ವಯನಾಡ್ ಭೂಕುಸಿತ | ತಂದೆ ಹತ್ಯೆಯಾದಾಗ ಅನುಭವಿಸಿದ್ದ ನೋವಿಗಿಂತ ಈಗ ಹೆಚ್ಚು ನೋವಾಗಿದೆ: ರಾಹುಲ್

“ಜಾರ್ಖಂಡ್‌ನ ಜನರ ಧ್ವನಿಯಾಗಿರುವ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಸ್ಪೀಕರ್ ತಮ್ಮ ಅಧಿಕಾರವನ್ನು ಬಳಸುತ್ತಿದ್ದಾರೆ. ಸಭಾಧ್ಯಕ್ಷರು ಸರ್ಕಾರಿ ನೌಕರರಂತೆ ವರ್ತಿಸುತ್ತಿದ್ದಾರೆ. ಯಾವ ನಿಯಮಗಳ ಅಡಿಯಲ್ಲಿ ಶಾಸಕರನ್ನು ಅಮಾನತುಗೊಳಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಸಾರ್ವಜನಿಕರಿಗೆ ಇದೆ. ನಾವು ಯುವಕರ ಭವಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೆವು. ಹೇಮಂತ್ ಸೊರೇನ್ ಅವರ ಬಳಿ ಯಾವುದೇ ಉತ್ತರವಿಲ್ಲದ ಕಾರಣ, ಅವರು ನಮ್ಮನ್ನು ಹತ್ತಿಕ್ಕಲು ತಮ್ಮ ತಂತ್ರಗಳನ್ನು ಬಳಸುತ್ತಿದ್ದಾರೆ” ಎಂದು ವಿರೋಧ ಪಕ್ಷದ ನಾಯಕ ಅಮರ್ ಕುಮಾರ್ ಬೌರಿ ಹೇಳಿದರು.

“ಬುಧವಾರ ರಾತ್ರಿ ವಿಧಾನಸಭೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರನ್ನು ಶೌಚಾಲಯಕ್ಕೆ ಹೋಗದಂತೆ ತಡೆಯಲಾಗಿತ್ತು. ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು” ಎಂದೂ ಅವರು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...