ಮೋದಿ ಆಡಳಿತದಲ್ಲಿ ‘ಎರಡು ಭಾರತ’ಗಳಿವೆ: ರಾಹುಲ್‌ ಗಾಂಧಿ ವಾಗ್ದಾಳಿ

Date:

ಛತ್‌ ಪೂಜೆಗಾಗಿ ದೆಹಲಿ ಬಳಿಯ ಯಮುನಾ ನದಿ ಸಮೀಪ ಸ್ನಾನಕ್ಕಾಗಿ ಕೆಲವರಿಗೆ ಪ್ರತ್ಯೇಕ ಕೊಳವನ್ನು ನಿರ್ಮಿಸಿದ್ದಕ್ಕಾಗಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ಆಡಳಿತದಲ್ಲಿ ‘ಎರಡು ಭಾರತ’ಗಳಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ರಾಹುಲ್‌ ಗಾಂಧಿ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಛತ್ ಪೂಜೆಯ ಸಮಯದಲ್ಲಿ, ಪ್ರಧಾನಿ ಮೋದಿ ಯಮುನಾ ನದಿಯಲ್ಲಿ ಸ್ನಾನ ಮಾಡಲು ನಿರ್ಧರಿಸಿದರು. ಅದಕ್ಕಾಗಿ ಪ್ರತ್ಯೇಕ ಕೊಳವನ್ನು ನಿರ್ಮಿಸಿದರು. ದೆಹಲಿಯ ಜನರಿಗೆ ಶುದ್ಧ ನೀರು ಸಿಗುವುದಿಲ್ಲ. ಆದರೆ, ಪ್ರಧಾನಿ ಮೋದಿ ಸ್ನಾನ ಮಾಡಲು ಯಮುನಾ ನದಿಗೆ ಪೈಪ್‌ಗಳ ಮೂಲಕ ಶುದ್ಧ ನೀರನ್ನು ತರಲಾಯಿತು” ಎಂದು ವಿವರಿಸಿದ್ದಾರೆ.

“ಒಂದು ಕಡೆ, ಕಲುಷಿತಗೊಂಡ ಯಮುನಾ ನದಿ ಭಾರತ ಮತ್ತು ಬಿಹಾರದ ವಾಸ್ತವವನ್ನು ಹೊಂದಿತ್ತು. ಇದು ಒಂದು ಭಾರತ. ಮತ್ತೊಂದೆಡೆ, ಮೋದಿ ತಮಗಾಗಿ ಶುದ್ಧ ನೀರಿನ ಸಣ್ಣ ಕೊಳ ನಿರ್ಮಿಸಿಕೊಂಡಿದ್ದರು. ಅದನ್ನು ಪೈಪ್‌ಗಳ ಮೂಲಕ ಶುದ್ಧ ನೀರು ತಂದು ತುಂಬಿಸಲಾಗಿತ್ತು. ಇದು, ಮೋದಿ ಮತ್ತು ಅವರಂತಹ ಜನರು ಹಾಗೂ ಅದಾನಿ ಮತ್ತು ಅಂಬಾನಿಗೆ ಸೇರಿದ್ದು. ಇದು ಮತ್ತೊಂದು ಭಾರತ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
chath yamuna

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್, “ಬಿಹಾರದಲ್ಲಿ ಕೈಗಾರಿಕೆಗಳಿಗೆ ಭೂಮಿ ಇಲ್ಲವೆಂದು ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಅದಾನಿಗೆ 1 ರೂ.ಗೆ ಭೂಮಿ ನೀಡಲಾಗಿದೆ. ಕೆಲವು ರೈತರಿಂದ ಭೂಮಿಯನ್ನು ಕಿತ್ತುಕೊಂಡು ಕೋಟ್ಯಾಧಿಪತಿಗಳಿಗೆ ಉಚಿತವಾಗಿ ನೀಡಿದೆ. ಲಕ್ಷಾಂತರ, ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ತೆಗೆದುಕೊಂಡು ಅದಾನಿಗೆ ಉಚಿತವಾಗಿ ಕೊಟ್ಟಿದೆ” ಎಂದು ದೂರಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಮಹಾಘಟಬಂಧನ್ ಭರಪೂರ ಭರವಸೆ; ಕಾರ್ಯಸಾಧುವೇ?

“2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ‘ಮತ ಕಳ್ಳತನ’ದ ಮೂಲಕ ಗೆದ್ದಿದೆ. ಎನ್‌ಡಿಎ ಮತ್ತು ಪ್ರಧಾನಿ ಮೋದಿ ಅವರು ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ನಾಶಮಾಡುವ ಹಠಕ್ಕೆ ಬಿದ್ದಿದ್ದಾರೆ” ಎಂದು ಆರೋಪಿಸಿದ್ದಾರೆ.

“ಬಿಹಾರದಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ರೈತರು, ಕಾರ್ಮಿಕರು ಹಾಗೂ ದಲಿತರು ಸರ್ಕಾರವನ್ನು ರಚಿಸುತ್ತಾರೆ. ಎಲ್ಲ ಸಮುದಾಯಗಳ ಪ್ರಾತಿನಿಧ್ಯವನ್ನು ಹೊಂದಿರುತ್ತಾರೆ” ಎಂದು ರಾಹುಲ್‌ ಗಾಂಧಿ ಪ್ರತಿಪಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...