ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ; ಹಟ್ಟಿ,‌ ತಾಂಡಾಗಳ 1 ಲಕ್ಷ ಜನರಿಗೆ‌ ಪಟ್ಟಾ ಖಾತೆ: ಡಿಸಿಎಂ ಡಿ.ಕೆ.ಶಿವಕುಮಾರ್

Date:

“ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ,‌‌ ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಮನಗರದಲ್ಲಿ ಭಾನುವಾರ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ‘ಯುವ ಪರ್ವ’ ಸಮಾವೇಶದಲ್ಲಿ ಮಾತನಾಡಿದರು.

“ಕಾಂಗ್ರೆಸ್ ‌ಸರ್ಕಾರ ಅಧಿಕಾರಕ್ಕೆ ಬಂದ ನಂತರ‌ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಯುವಕರಿಗೆ ಯುವನಿಧಿ ಮೂಲಕ ನೆರವಿಗೆ ನಿಂತಿದೆ. ಮಹಿಳೆಯರ ಪರವಾಗಿ ಐತಿಹಾಸಿಕ ಯೋಜನೆಗಳನ್ನು ತಂದು ಇತಿಹಾಸ ನಿರ್ಮಾಣ ಮಾಡಿರುವುದು ಕಾಂಗ್ರೆಸ್ ಪಕ್ಷ. ಉಚಿತ ಬಸ್, ಗೃಹಲಕ್ಷ್ಮೀ ಸೇರಿದಂತೆ ಅನೇಕ ಯೋಜನೆಗಳನ್ನು ದಳ, ಬಿಜೆಪಿಯವರು ನೀಡಿದ್ದಾರೆಯೇ” ಎಂದು ಪ್ರಶ್ನಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವ ಕಾಂಗ್ರೆಸ್ ಪಕ್ಷ ನಾಯಕತ್ವ ಬೆಳೆಸುವ ಪ್ರಯೋಗ ಶಾಲೆ. ನೀವು ನಾಯಕರಾಗಿ ಬೆಳೆಯಬೇಕು ಎಂದರೆ ತಳಮಟ್ಟದಿಂದ ಕೆಲಸ ಮಾಡಬೇಕು. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಬೇಕು. ಯುವಕರಿಗೆ ನಿಮ್ಮ ಶಕ್ತಿಯ ಅರಿವಿಲ್ಲ‌. ಯಾರೋ ಮಾಡುವ ಟೀಕೆಗಳಿಗೆ ಹೆದರಬಾರದು” ಎಂದರು.

” ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕರೆಯಲು ಮುಂದಾಗಿದ್ದೇವೆ. ಏಕೆಂದರೆ ಇಲ್ಲಿನ ಭೂಮಿ ಮೌಲ್ಯ ಹೆಚ್ಚಾಗಲಿದೆ, ಜನರ ಬದುಕು ಬದಲಾಗಲಿದೆ. ಇದು ನಮ್ಮ‌ ಜಿಲ್ಲೆ, ನಮ್ಮ ಸ್ವಾಭಿಮಾನ. ಬೆಂಗಳೂರಿಗೆ ನಾವು ಹೋಗುವುದು ತಪ್ಪಿ ನಮ್ಮನ್ನೇ ಬಳಸಿಕೊಳ್ಳುವ ಕಾಲ ಮುಂದಕ್ಕೆ ಬರಬೇಕು. ಸುರೇಶ್ ಅವರು ಸ್ಪರ್ಧಿಸುವ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಂದು ಏಕೆ ಕರೆಯಲಾಗುತ್ತದೆ. ನಮ್ಮ ಹೆಸರನ್ನು ಬಿಟ್ಟು ಕೊಡುವುದಿಲ್ಲ” ಎಂದು ಹೇಳಿದರು.

“ಗ್ರೇಟರ್ ಬೆಂಗಳೂರು ಎಂದು ಮಾಡಲು ಹೊರಟಿದ್ದೇವೆ. ಇದನ್ನು ಕೈ ಬಿಡಿ ಎಂದು ದೇವೆಗೌಡರು, ಸಂಸದ ಮಂಜುನಾಥ್ ಅವರು ಪತ್ರ ಬರೆದಿದ್ದರು. ಈ ಹಿಂದೆ ಇದಕ್ಕೆ ಸಹಿ ಹಾಕಿದವರು ಕುಮಾರಸ್ವಾಮಿ‌. ಆದರೆ ಅವರಿಗೆ ಇದನ್ನು ಮುಂದುವರೆಸಲು ಆಗುವುದಿಲ್ಲ. ಈಗ ನಾನೇಕೆ ಅದನ್ನು ಡಿನೋಟಿಫಿಕೇಷನ್ ಮಾಡಲಿ. ಕೇಸನ್ನು ಹಾಕಿಸಿಕೊಳ್ಳಲು ನಾನು ತಯಾರಿಲ್ಲ. ರೈತರಿಗೆ ನಾಲ್ಕು ಪಟ್ಟು ಪರಿಹಾರ ದೊರೆಯುವಂತೆ ಮಾಡುತ್ತೇನೆ. ಯೋಗೇಶ್ವರ್, ಇಕ್ಬಾಲ್ ಅವರೆಲ್ಲಾ ಸೇರಿ ನಿಮ್ಮ ಬದುಕನ್ನು ಭದ್ರ ಮಾಡುತ್ತೇವೆ” ಎಂದರು.

“ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಏಕೆ ಒಂದೇ ಒಂದು ಜಿಲ್ಲಾಸ್ಪತ್ರೆ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ತನಕ ವಿಶ್ವವಿದ್ಯಾಲಯ ಕಟ್ಟಡವಿರಲಿಲ್ಲ” ಎಂದರು.

“ನಾವೊಬ್ಬರೇ ಕಚೇರಿ ಕಟ್ಟಬಹುದು.‌ ಆದರೆ ಎಲ್ಲರೂ ಕೈ ಜೋಡಿಸಬೇಕು. ಆಗ ಮಾತ್ರ ಇದು ನನ್ನದು, ನನ್ನ ಪಕ್ಷ‌ ಎನ್ನುವ ಅಭಿಮಾನವಿರುತ್ತದೆ. ದಾನಿಗಳ ಹೆಸರು ಶಾಶ್ವತವಾಗಿ ಉಳಿಯಬೇಕು ಎಂದು ದಾನಿಗಳ ಹೆಸರಿರುವ ಫಲಕಗಳನ್ನು ಅಳವಡಿಸಲಾಗುವುದು. ಒಂದು ವರ್ಷದೊಳಗೆ ಜಿಲ್ಲಾ ಕಾಂಗ್ರೆಸ್ ಕಟ್ಟಡ ನಿರ್ಮಾಣವಾಗುವಂತೆ ನೋಡಿಕೊಳ್ಳಲಾಗುವುದು. ಕಟ್ಟಡಕ್ಕೆ ದೇಣಿಗೆ ನೀಡುವವರು ಚೆಕ್ ಮುಖಾಂತರ ನೀಡಬೇಕು ಎಂದು ಮನವಿ. 5 ರಿಂದ 2 ಲಕ್ಷದ ಒಳಗೆ ಹಣ ನೀಡಿದರು ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ರಾಮನಗರ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡಿರುವ ಚಂದ್ರ ಸಾಗರ್ ಮತ್ತು ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...