ಶಿವಸೇನೆ ಕಾರ್ಪೊರೇಟರ್ ಮೇಲೆ ಗುಂಡಿನ ದಾಳಿ; ಆರೋಪಿಯೂ ಸಾವು

Date:

ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಅಭಿಷೇಕ್ ಘೋಸಲ್ಕರ್ ಅವರು ಫೇಸ್‌ಬುಕ್‌ ಲೈವ್ ನಡೆಸುತ್ತಿದ್ದಾಗಲೇ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅಭಿಷೇಕ್ ಸಾವನ್ನಪ್ಪಿದ್ದಾರೆ. ಆತನನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಕೊಲೆ ಮಾಡಿದ್ದು, ಆತ ಕೂಡ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನ ಬೊರಿವಲಿಯ ಐಸಿ ಕಾಲೋನಿಯಲ್ಲಿರುವ ಮಾರಿಸ್ ನೊರೊನ್ಹಾ ಅವರ ಕಚೇರಿಯಲ್ಲಿ ಘಟನೆ ನಡೆಸಿದೆ. ಘಟನೆ ನಡೆದಾಗ ಅಭಿಷೇಕ್ ಘೋಸಲ್ಕರ್ ಅವರು ಫೇಸ್‌ಬುಕ್‌ನಲ್ಲಿ ಲೈವ್‌ ನಡೆಸುತ್ತಿದ್ದರು. ಆಗಲೇ ಗುಂಡಿನ ದಾಳಿ ನಡೆಸಿದ್ದು, ಅಭಿಷೇಕ್ ಅವರ ಹೊಟ್ಟೆ ಮತ್ತು ಭುಜಕ್ಕೆ ಗುಂಡು ಹೊಕ್ಕಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಘಟನೆ ಮತ್ತು ಇತ್ತೀಚೆಗೆ ಥಾಣೆ ಜಿಲ್ಲೆಯಲ್ಲಿ ಪೊಲೀಸ್‌ ಠಾಣೆಯಲ್ಲಿ ಬಿಜೆಪಿ ಶಾಸಕ ನಡೆಸಿದದ ಗುಂಡಿನ ದಾಳಿ, ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಉದ್ದವ್ ಠಾಕ್ರೆ ಬಣದ ಮಾಜಿ ಶಾಸಕ ವಿನೋದ್ ಘೋಸಲ್ಕರ್ ಅವರ ಪುತ್ರ ಅಭಿಷೇಕ್ ಘೋಸಲ್ಕರ್. ಅವರು ಮುಂಬೈ ಮಹಾನಗರ ಪಾಲಿಕೆಯಲ್ಲಿ ಸದಸ್ಯರಾಗಿದ್ದಾರೆ. ಅಲ್ಲದೆ, ಮುಂಬೈ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರೂ ಆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಮೇಲೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ ಮಾರಿಸ್ ನೊರೊನ್ಹಾ ಎಂಬಾತ, ಕೊನೆಗೆ ತನಗೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಅಭಿಷೇಕ್ ಘೋಸಲ್ಕರ್ ಮತ್ತು ಮೌರಿಸ್ ನೊರೊನ್ಹಾ ನಡುವೆ ವೈಯಕ್ತಿಕ ವೈಷಮ್ಯವಿತ್ತು. ಆದರೆ, ಐಸಿ ಕಾಲೋನಿ ಪ್ರದೇಶದ ಅಭಿವೃದ್ಧಿಗಾಗಿ ಇಬ್ಬರೂ ಜೊತೆಯಾಗಿ ನಿಂತಿದ್ದಾರೆ ಎಂಬುದನ್ನು ತಿಳಿಸಲು ಅಭಿಷೇಕ್ ಫೇಸ್‌ಬುಕ್ ಲೈವ್ ನಡೆಸುತ್ತಿದ್ದರು. ಆದರೆ, ಇದೇ ವೇಳೆ, ಅವರ ಮೇಲೆ ಮಾರಿಸ್ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಗುಂಡಿನ ದಾಳಿಯ ಬಗ್ಗೆ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ತೆರಳಿದೆವು. ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಿದ್ದೆವು. ಆದರೆ, ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ. (ಫೊರೆನ್ಸಿಕ್) ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರಕರಣವನ್ನು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ”ಎಂದು ಡಿಸಿಪಿ ರಾಜ್ ತಿಲಕ್ ರೌಶನ್ ತಿಳಿಸಿದ್ದಾರೆ.

ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಸಂಸದ ಸಂಜಯ್ ರಾವತ್, “ಉಪಮುಖ್ಯಮಂತ್ರಿ, ಗೃಹ ಸಚಿವ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...