ರಾಜಕೀಯ ಮೈತ್ರಿ ಬಗ್ಗೆ ರಾಜ್‌ ಠಾಕ್ರೆ ಜೊತೆ ಉದ್ಧವ್ ಮಾತುಕತೆ

Date:

ಹಿಂದಿ ಹೇರಿಕೆ ವಿರುದ್ಧವಾಗಿ, ಮರಾಠಿ ಭಾಷೆ ಉಳಿವಿಗಾಗಿ ಜೊತೆಯಾದ ಠಾಕ್ರೆ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇದೀಗ ರಾಜಕೀಯ ಮೈತ್ರಿಗೆ ಮುಂದಾಗಿದ್ದಾರೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಂಚಿತವಾಗಿ ಶಿವಸೇನೆ (ಯುಬಿಟಿ) ಮತ್ತು ಎಂಎನ್ಎಸ್ ನಡುವೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಸಾಮ್ನಾಗೆ ನೀಡಿದ ಸಂದರ್ಶನದ ವೇಳೆ ರಾಜಕೀಯ ಮೈತ್ರಿ ಕುರಿತು ರಾಜ್ ಜೊತೆ ಸಂಭಾವ್ಯ ಮಾತುಕತೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಪ್ರಶ್ನಿಸಿದಾಗ, “ಚರ್ಚೆಗಳು ನಡೆಯಲಿವೆ” ಎಂದು ಹೇಳಿದರು. ಠಾಕ್ರೆ ಸಹೋದರರಿಬ್ಬರು ಮರಾಠಿ ವಿಜಯೋತ್ಸವದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಕೆಲವು ದಿನಗಳ ನಂತರ ಈ ಸಂದರ್ಶನ ನಡೆದಿದೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ | 15 ದಿನದಲ್ಲೇ ಉದ್ಧವ್ ಠಾಕ್ರೆ ಮೋದಿ ಸರ್ಕಾರ ಸೇರ್ಪಡೆ: ಅಮರಾವತಿ ಶಾಸಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಧವ್ ಠಾಕ್ರೆ ದಿವಂಗತ ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಮಗನಾಗಿದ್ದು, ರಾಜ್ ಠಾಕ್ರೆ ಸೋದರಳಿಯ. 2005ರಲ್ಲಿ ಮಾಲ್ವನ್ ವಿಧಾನಸಭಾ ಉಪಚುನಾವಣೆ ಪ್ರಚಾರದ ಸಮಯದಲ್ಲಿ ರಾಜ್ ಮತ್ತು ಉದ್ಧವ್ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಳಿಕ ಆಂತರಿಕ ಭಿನ್ನಾಭಿಪ್ರಾಯಗಳ ಕಾರಣ ರಾಜ್ ಠಾಕ್ರೆ ಶಿವಸೇನೆಯನ್ನು ತೊರೆದರು.

2005ರ ನವೆಂಬರ್‌ನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ ತಮ್ಮ ಚಿಕ್ಕಪ್ಪ ಸ್ಥಾಪಿಸಿದ ಶಿವಸೇನೆಗೆ ರಾಜೀನಾಮೆ ನೀಡುವುದಾಗಿ ಭಾವನಾತ್ಮಕವಾಗಿ ಹೇಳಿದ್ದರು. “ನಾನು ಕೇಳಿದ್ದು ಗೌರವ ಮಾತ್ರ. ನನಗೆ ಸಿಕ್ಕಿದ್ದು ಅವಮಾನ ಮಾತ್ರ” ಎಂದು ಠಾಕ್ರೆ ಹೇಳಿದ್ದರು.

ಆದರೆ 2025ರ ಜುಲೈ 5ರಂದು, ಉದ್ಧವ್ ಮತ್ತು ರಾಜ್ ಸುಮಾರು 20 ವರ್ಷಗಳ ನಂತರ ಒಂದೇ ಸಾರ್ವಜನಿಕ ವೇದಿಕೆಯಲ್ಲಿ ಒಟ್ಟಾಗಿ ಸೇರಿದ್ದರು. ಜೊತೆಯಾಗಿ ಮರಾಠಿ ಮತ್ತು ಇಂಗ್ಲಿಷ್ ಶಾಲೆಗಳಲ್ಲಿ 1-5ನೇ ತರಗತಿಗಳಲ್ಲಿ ಹಿಂದಿಯನ್ನು ಪರಿಚಯಿಸುವ ಹೊಸ ಶಿಕ್ಷಣ ನೀತಿಯಡಿಯಲ್ಲಿ ತ್ರಿಭಾಷಾ ಸೂತ್ರವನ್ನು ಇಬ್ಬರೂ ವಿರೋಧಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಆದೇಶವನ್ನು ಹಿಂಪಡೆದ ಬಳಿಕ ಠಾಕ್ರೆ ಸಹೋದರರು ವಿಜಯ ಮೆರವಣಿಗೆ ನಡೆದಿದ್ದಾರೆ. ಎರಡೂ ಕುಟುಂಬಗಳು ಈ ವೇಳೆ ಜೊತೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...