ರಾಮಮಂದಿರ ಉದ್ಘಾಟನೆ ಬಳಿಕ ಗೋಧ್ರಾ ಮಾದರಿಯ ಘಟನೆ ಸಾಧ್ಯತೆ: ಉದ್ಧವ್ ಠಾಕ್ರೆ ಎಚ್ಚರಿಕೆ

Date:

ರಾಮ ಮಂದಿರ ಉದ್ಘಾಟನೆ ಬಳಿಕ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆಯಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ಮುಖ್ಯಸ್ಥ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಮಂದಿರದ ಉದ್ಘಾಟನೆಗಾಗಿ ಉತ್ತರ ಪ್ರದೇಶದ ಅಯೋಧ್ಯೆಗೆ ಬರಲಿರುವ ದೊಡ್ಡ ಸಂಖ್ಯೆಯ ಜನರು ವಾಪಸ್ ಹೋಗುವಾಗ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆ ಇದೆ’ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

“ರಾಮ ಮಂದಿರ ಉದ್ಘಾಟನೆಗೆ ಸರ್ಕಾರವು ಬಸ್ ಗಳು ಹಾಗೂ ಟ್ರಕ್ ಗಳಲ್ಲಿ ಅಸಂಖ್ಯಾತ ಜನರನ್ನು ಕರೆತರುವ ಸಾಧ್ಯತೆ ಇದೆ. ಅವರು ಮರಳುವಾಗ ಗೋಧ್ರಾ ಮಾದರಿಯ ಘಟನೆ ನಡೆಯುವ ಸಾಧ್ಯತೆ ಇದೆ” ಎಂದು ಠಾಕ್ರೆ ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಟೀಕಿಸಿದ ಠಾಕ್ರೆ, ‘ಜನರು ತಮ್ಮ ಆದರ್ಶ ವ್ಯಕ್ತಿಗಳೆಂದು ಪರಿಗಣಿಸಬಹುದಾದ ಸೆಲೆಬ್ರಿಟಿಗಳನ್ನು ಬಿಜೆಪಿ ಹೊಂದಿಲ್ಲ. ಆದ್ದರಿಂದ ಅವರು ಸರ್ದಾರ್ ಪಟೇಲ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಂತಹ ದಿಗ್ಗಜರನ್ನು ತಮ್ಮ ಪಕ್ಷದವರನ್ನಾಗಿಸಿಕೊಂಡಿದ್ದಾರೆ. ಈಗ ನನ್ನ ತಂದೆ ಬಾಳಾ ಠಾಕ್ರೆಯ ಮೇಲೂ ಹಕ್ಕೂ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಬಿಜೆಪಿ ವಿರುದ್ಧ ಗುಡುಗಿದರು.

ಈ ಸುದ್ದಿ ಓದಿದ್ದೀರಾ? ಜಿ 20 ಶೃಂಗಸಭೆ ಮುಗಿದಿದೆ, ಮೋದಿ ಸರ್ಕಾರ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 27, 2002ರಂದು ಕರಸೇವಕರು ಅಯೋಧ್ಯೆಯಿಂದ ಸಾಬರಮತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದಾಗ ಗೋಧ್ರಾ ರೈಲು ನಿಲ್ದಾಣದಲ್ಲಿ ಕರಸೇವಕರು ಸಂಚರಿಸುತ್ತಿದ್ದ ರೈಲು ಬೋಗಿಗೆ ಬೆಂಕಿ ಹಚ್ಚಲಾಗಿದ್ದು, ಇದರಿಂದ ಹಲವು ಕರಸೇವಕರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಗುಜರಾತ್ ರಾಜ್ಯದಾದ್ಯಂತ ಹತ್ಯಾಕಾಂಡ ಆರಂಭವಾಗಿತ್ತು.

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ಜನವರಿ 2024ರಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.

ಈ ನಡುವೆ, ಉದ್ಧವ್ ಠಾಕ್ರೆ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್, “ವೋಟಿಗಾಗಿ ಪ್ರಧಾನಿ ಮೋದಿ ವಿರುದ್ಧ ರಚನೆಯಾಗಿರುವ ಮೈತ್ರಿಕೂಟವು ಯಾವ ಹಂತಕ್ಕಾದರೂ ಹೋಗಲಿದೆ ಎಂದಷ್ಟೆ ನಾನು ಹೇಳಬಲ್ಲೆ. ಅವರಿಗೆ ಕೊಂಚ ವಿವೇಕ ನೀಡು ಎಂದು ನಾನು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ. ಇದು ನಾಚಿಕೆಗೇಡಿನ ಮತ್ತು ಅಸಭ್ಯ ಹೇಳಿಕೆಯಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...