ನ್ಯಾಯಾಧೀಶರಲ್ಲಿ ಅರಿಕೆ: ಹೌದು ಮಹಾಸ್ವಾಮಿ; ಉರ್ದು ಕವಿ ಗೌಹರ್ ರಜಾ಼ ಅವರ ಕವಿತೆ

Date:

2020ರ ದೆಹಲಿ ಕೋಮುಗಲಭೆ ಪ್ರಕರಣದ ಸಂಬಂಧದಲ್ಲಿ, ಏನೇನೋ ಆರೋಪ ಹೊರಿಸಲಾಗಿ, ಐದು ವರ್ಷಗಳಿಂದ ಸೆರೆಮನೆಯಲ್ಲಿರುವ ಶರ್ಜೀಲ್ ಇಮಾಮ್, ಉಮರ್ ಖಾಲಿದ್, ಅತ್ತರ್ ಖಾನ್, ಅಬ್ದುಲ್ ಖಾಲಿದ್ ಸೈಯಫಿ, ಗುಲ್ಫಿಷಾ ಫಾತಿಮಾ, ಮೀರನ್ ಹೈದರ್, ಶಿಫಾ-ಉರ್-ರಹಮಾನ್, ಮೊಹಮ್ಮದ್ ಸಲೀಂ ಖಾನ್, ಶಾದಾಬ್ ಅಹಮದ್ ಮತ್ತು ತಸ್ಲೀಂ ಅಹಮದ್ ಅವರುಗಳಿಗೆ ದೆಹಲಿಯ ಹೈಕೋರ್ಟು ಜಾಮೀನು ನೀಡಲು ಮತ್ತೂ ಒಮ್ಮೆ ನಿರಾಕರಿಸಿದೆ. ಅವರನ್ನೂ, ಅವರಂತೆಯೇ ಭೀಮಾ-ಕೋರೆಗಾಂವ್ ಪ್ರಕರಣದ ಸಂಬಂಧದಲ್ಲಿ, ಏನೇನೋ ಆರೋಪ ಹೊರಿಸಲಾಗಿ ವರ್ಷಗಟ್ಟಲೆ ಕಾಲ ಸೆರೆಮನೆವಾಸ ಕಂಡ ಇಲ್ಲವೆ ಕಾಣುತ್ತಿರುವ ಸುರೇಂದ್ರ ಗಾಡ್ಲಿಂಗ್, ಆನಂದ್ ತೇಲ್ತುಂಬ್ಡೆ, ಶೋಮಾ ಸೇನ್, ಹುತಾತ್ಮ ಫಾದರ್ ಸ್ಟ್ಯಾನ್ ಸ್ವಾಮಿ ಮುಂತಾದ ಇತರ ಧೀಮಂತ-ಧೀಮಂತೆಯರನ್ನೂ, ಹಾಗೂ ಅವರೆಲ್ಲರಂಥ ಇನ್ನೂ ಎಷ್ಟೆಷ್ಟೋ ಜನರನ್ನೂ ನೆನೆಯುತ್ತ, ವಿಜ್ಞಾನಿ ಮತ್ತು ಉರ್ದು ಕವಿ ಗೌಹರ್ ರಜಾ಼ ಅವರು ಬರೆದ ‘ಮೈ ಲಾರ್ಡ್’ ಕವಿತೆಯ ಕನ್ನಡ ಭಾವರೂಪಾಂತರ, ರಘುನಂದನ ಅವರ ‘ನಾನು ಸತ್ತಮೇಲೆ’ ಕವನ ಸಂಕಲನದಿಂದ:

ಹೌದು ಮಹಾಸ್ವಾಮಿ

ಹೌದು ಮಹಾಸ್ವಾಮಿ
ಪಾತಕ ಮಾಡಿದ್ದೇನೆ ನಾನು ಮಹಾಪಾಪಿಷ್ಠನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಯಿಮುಚ್ಚಿಕೊಂಡಿರಬೇಕಾದೀ ಕಾಲದಲ್ಲಿ
ಸೊಲ್ಲೆತ್ತಿಬಿಟ್ಟೆ ತಪ್ಪು ತಪ್ಪಾಯಿತು ಮಹಾ
ಪಾತಕವಾಯ್ತು ತಪ್ಪಿತಸ್ಥನೆಂದೇ ತೀರ್ಮಾನಿಸಿ
ಬೇಕಾದ ಶಾಸ್ತಿಮಾಡಿ ಬೇಕಾsದಂತೆ ಮಾಡಿಬಿಡಿ

ಪರಮಾತ್ಮನ ನೆರಳು ನೀವು ಮಹಾಸ್ವಾಮಿ
ಇರುವುದೇ ನ್ಯಾಯ ನೀತಿ ಧರ್ಮದ ಬಟ
ವಾಡೆಗೆಂದು ಆಗಲಿ ಆಗಲಿ ಮಹಾಸ್ವಾಮಿ
ಸಾಗಲಿ ಇಂದಿಗೆ ನಿಮ್ಮದೇs ನಡೆಯಲಿ

ನಿಮಗಾವ ಅಡ್ಡಿ ಮಹಾಸ್ವಾಮಿ ತಿರುಪಿ ತಿರುಚಿ
ನ್ಯಾಯ ನೀತಿ ಧರ್ಮ ಬೇಕಾದಂತೆ ಕೆತ್ತಿಬಿಡಿ
ಒಪ್ಪು ಒಪ್ಪಿಗೆಯೆ ಹಗೆ ತೀರಿಸಿಕೊಳ್ಳುವುದೇ ನ್ಯಾಯವೆನ್ನಿ
ಸೊಲ್ಲೆತ್ತಿದವರ ತುಟಿ ಹೊಲಿಯಲು ಇದೇ ದಬ್ಬಳವೆನ್ನಿ

ಇನ್ನೀಗ ಇದೇ ನ್ಯಾಯ ನೀತಿ ಧರ್ಮ ಎಂದು ಕುಡು
ಗೋಲಿನಿಂದ ಒಂದಾದಮೇಲೊಂದು ಬೆರಳ್ ಕೊಚ್ಚಿ
ಬಿಸುಟುಹಾಕಿ ಬೆರಳುಮಾಡದಂತೆ ಯಾರೂ
ಯಾವತ್ತೂ ಆಳುವ ದಣಿಗಳತ್ತ ಇನ್ನು ತೋರದಂತೆ

ನಿಮಗಾವ ಅಡ್ಡಿ ಮಹಾಸ್ವಾಮಿ ಕಾನೂನು ರೂಲುದೊಣ್ಣೆ
ಎತ್ತೆತ್ತಿ ಬಾರಿಸಿ ಕೂಲಿಮಠದಯ್ಯ ಬಡಿಯುತ್ತ ಇದ್ದಂತೆ
ತಲೆಹೋಕ ಹೈಕಳೆತ್ತಿದ್ದ ತಲೆಯ ಹೌದ್ಹೌದು ಮನ್ನಿಸ
ಬಾರದ ಪಾತಕಿ ನಾನು ಹಾಲಲ್ಲದ್ದಿ ಮಾಸ್ವಾಮಿ ಆಸಿಡ್ಡಲದ್ದಿ

ನಿಮ್ಮ ಪರ್ಮಿಟ್ಟಿದ್ದರೆ ಬುದ್ದೀ ಮತ್ತೊಂದು ಮಾತು
ಇತಿಹಾಸವೆ ಕಲಿಸಿದ್ದು: ಮಾಗಿ ಬೋಳಿನ ಮಧ್ಯದಲ್ಲಿ
ಹೂ ಅರಳಲು ಶುರುವಾದರೆ ತಡೆಯಲಾಗದು ಯಾರೂ
ಕಾರ್ಮೋಡ ಎದ್ದರೆ ತೊಯ್ದುಹೋಗುವುದು ಮರಳುಗಾಡೂ

ಎಲೆಯುದುರಿದ ಮರದಲ್ಲಿ ಕೋಗಿಲೆs ಹಾಡು ಶುರುವಾದರೆ
ಕೂಗೇ ಕೂಗತ sದ ಗಿರಣಿ ಕರೆಯೊ ಹಾಂಗ ಕಣಿವೆಕಣಿವೆ ಆಗ
ಓಗೊಟ್ಟುಗೊಟ್ಟು ಗುಡ್ಡಗುಡ್ಡ ನುಗ್ಗಾಗಿಹೋಗಿ ಯಾರು
ಏನು ಮಾಡಿದರೂ ನಿಲ್ಲದು ಮೀಯಿಸಿಬಿಡುತ್ತದೆ ಎಲ್ಲವನ್ನೂ

ಹೌದು ಮಹಾಸ್ವಾಮಿ
ಪಾತಕ ಮಾಡಿದ್ದೇನೆ ನಾನು ಮಹಾಪಾಪಿಷ್ಠನೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...