ದಲಿತರ ಮೇಲಿನ ದೌರ್ಜನ್ಯ; ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶ ನಂಬರ್ ಒನ್: ಅಖಿಲೇಶ್ ಯಾದವ್

Date:

ಬಿಜೆಪಿ ಸರ್ಕಾರದ ಅಡಿಯಲ್ಲಿ ದಲಿತರ ಮೇಲಿನ ದೌರ್ಜನ್ಯದ ವಿಚಾರದಲ್ಲಿ ಉತ್ತರ ಪ್ರದೇಶ ದೇಶದಲ್ಲಿಯೇ ನಂಬರ್ ಒನ್ ರಾಜ್ಯವಾಗಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, “ಬಿಜೆಪಿಯಲ್ಲಿರುವ ದಲಿತ ನಾಯಕರಿಗೆ ನಿಜವಾದ ಅಧಿಕಾರವನ್ನು ಎಂದಿಗೂ ನೀಡುವುದಿಲ್ಲ. ಕೆಲವೇ ಆಯ್ದ ಮಂದಿಗೆ ಮಾತ್ರ ಅಧಿಕಾರ ನೀಡಲಾಗುತ್ತದೆ” ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ದಲಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಮೂತ್ರ ವಿಸರ್ಜಿಸಿ ವಿಕೃತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಸರ್ಕಾರದ ಅಡಿಯಲ್ಲಿ ದಲಿತರ ಮೇಲಿನ ದೌರ್ಜನ್ಯದಲ್ಲಿ ಯುಪಿ ನಂಬರ್ ಒನ್ ಆಗಿದೆ” ಎಂದು ಹೇಳಿರುವ ಅಖಿಲೇಶ್, ರಾಜ್ಯದಲ್ಲಿ ದಲಿತ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಹೇಳುವ ಸುದ್ದಿ ವರದಿಯ ವಿಡಿಯೋ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ.

“ದಲಿತರ ಮೇಲೆ ಅದರಲ್ಲೂ ವಿಶೇಷವಾಗಿ ದಲಿತ ಮಹಿಳೆಯರ ಮೇಲೆ ಅಧಿಕವಾಗಿ ಅಪರಾಧಗಳು ಬಿಜೆಪಿ ಆಡಳಿತದ ರಾಜ್ಯಗಳಾದ ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಒಡಿಶಾ ಮತ್ತು ಮಹಾರಾಷ್ಟ್ರದಲ್ಲಿ ಯಾಕೆ ನಡೆಯುತ್ತವೆ ಎಂಬುದು ಪ್ರಶ್ನೆಯಾಗಿದೆ” ಎಂದು ಹೇಳಿದರು.

“ಬಿಜೆಪಿ ಮೂಲಭೂತವಾಗಿ ಸರ್ವಾಧಿಕಾರಿಗಳ ಪಕ್ಷ. ಅದರ ಸದಸ್ಯರ ಮನಸ್ಥಿತಿ ಆಳವಾಗಿ ಊಳಿಗಮಾನ್ಯ ಮನಸ್ಥಿತಿ. ಇವರ ಆಡಳಿತದಡಿಯಲ್ಲಿ ಬಡವರು, ಬಡತನದ ಅಂಚಿನಲ್ಲಿರುವವರು, ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಬುಡಕಟ್ಟು ಜನಾಂಗದವರಿಗೆ ಅವಮಾನ ಮತ್ತು ದಬ್ಬಾಳಿಕೆ ಮಾತ್ರ ಇರುತ್ತದೆ” ಎಂದು ಯಾದವ್ ಟೀಕಿಸಿದ್ದಾರೆ.

“ಬಿಜೆಪಿ ನಾಯಕರು ಸ್ವಾತಂತ್ರ್ಯಪೂರ್ವದ ಮನಸ್ಥಿತಿ ಹೊಂದಿದ್ದಾರೆ. ಸಂವಿಧಾನವನ್ನು ವಿರೋಧಿಸುತ್ತಾರೆ” ಎಂದು ಆರೋಪಿಸಿರುವ ಅಖಿಲೇಶ್, “ಬಿಜೆಪಿ ಮತ್ತು ಅವರ ಸರ್ಕಾರ ಎರಡರಲ್ಲೂ, ಆಯ್ದ ಕೆಲವರು ಮಾತ್ರ ನಿಜವಾದ ಅಧಿಕಾರವನ್ನು ಹೊಂದಿದ್ದಾರೆ. ಇತರರನ್ನು ಬ್ಯಾನರ್ ಮತ್ತು ಧ್ವಜಗಳನ್ನು ಹೊತ್ತೊಯ್ಯುವಂತಹ ಕೀಳು ಕೆಲಸಗಳಿಗೆ ಇಳಿಸಲಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಿಗೆ ಬಿಜೆಪಿಯಲ್ಲಿ ಸಾಂಕೇತಿಕ ಸ್ಥಾನಗಳನ್ನು ನೀಡಬಹುದು. ಆದರೆ ಅವರಿಗೆ ನಿಜವಾದ ಅಧಿಕಾರವನ್ನು ಎಂದಿಗೂ ಬಿಜೆಪಿ ನೀಡುವುದಿಲ್ಲ” ಎಂದು ಯಾದವ್ ಹೇಳಿದ್ದಾರೆ.

“ಚುನಾವಣೆಗಳನ್ನು ದಲಿತರ, ಹಿಂದುಳಿದವರ ಹೆಸರಿನಲ್ಲಿ ಎದುರಿಸಲಾಗುತ್ತದೆ. ಆದರೆ ಅವರಿಗೆ ಮುಖ್ಯಮಂತ್ರಿ ಕುರ್ಚಿ ಅಥವಾ ನಿಜವಾದ ನಾಯಕತ್ವವನ್ನು ನೀಡಲಾಗುವುದಿಲ್ಲ” ಎಂದು ಹೇಳಿರುವ ಎಸ್‌ಪಿ ನಾಯಕ ದಲಿತರು ಬಿಜೆಪಿಯನ್ನು ತಿರಸ್ಕರಿಸುವಂತೆ ಕರೆ ನೀಡಿದರು. “ಇಂದು ದಲಿತರು ನಮಗೆ ಬಿಜೆಪಿ ಬೇಡ ಎಂದು ಹೇಳಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...