ಮರಾಠಿಯನ್ನು ದುರ್ಬಲಗೊಳಿಸುವುದನ್ನು ಸಹಿಸಲಾಗದು: ಹಿಂದಿ ಹೇರಿಕೆ ವಿರುದ್ಧ ಸುಪ್ರಿಯಾ ಸುಳೆ ಆಕ್ರೋಶ

Date:

ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಅನ್ನು ಬಲವಂತವಾಗಿ ಅನುಷ್ಠಾನ ಮಾಡಿ ಮರಾಠಿಯನ್ನು ದುರ್ಬಲಗೊಳಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮರಾಠಿ ಮತ್ತು ಇಂಗ್ಲಿಷ್-ಮಾಧ್ಯಮ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಕಡ್ಡಾಯ ಮೂರನೇ ಭಾಷೆಯನ್ನಾಗಿ ಮಾಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ? ಹಿಂದಿ ದಿವಸ | ಭಾಷಾ ಹೇರಿಕೆ ವಿರುದ್ಧ ಇಂದು ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಾರಾಮತಿ ಸಂಸದೆ ಸುಪ್ರಿಯಾ, “ಮಹಾರಾಷ್ಟ್ರದಲ್ಲಿ ಸಿಬಿಎಸ್‌ಇ ಮಂಡಳಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಶಿಕ್ಷಣ ಸಚಿವರ ಹೇಳಿಕೆಯನ್ನು ನಾನು ಮೊದಲು ವಿರೋಧಿಸುತ್ತೇನೆ. ಅಸ್ತಿತ್ವದಲ್ಲಿರುವ ರಾಜ್ಯ ಮಂಡಳಿಯನ್ನು ಸಿಬಿಎಸ್‌ಇಗೆ ಬದಲಾಯಿಸುವ ಅಗತ್ಯವೇನು” ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ, “ಭಾಷಾ ಸಮಸ್ಯೆಯನ್ನು ಚರ್ಚಿಸುವ ಮೊದಲು, ನಾವು ರಾಜ್ಯದ ಮೂಲಭೂತ ಶಿಕ್ಷಣ ಮೂಲಸೌಕರ್ಯದ ಬಗ್ಗೆ ಮಾತನಾಡಬೇಕು” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಪ್ರಥಮ್ ಫೌಂಡೇಶನ್ ಎಂಬ ಸರ್ಕಾರೇತರ ಸಂಸ್ಥೆ ಬಿಡುಗಡೆ ಮಾಡಿದ ವಾರ್ಷಿಕ ಶಿಕ್ಷಣ ಸ್ಥಿತಿ ವರದಿ (ASER)ಯನ್ನೂ ಸಂಸದೆ ಉಲ್ಲೇಖಿಸಿದ್ದಾರೆ. ಗಣಿತ, ವಿಜ್ಞಾನ ಮತ್ತು ಭಾಷೆಗಳನ್ನು ಅಧ್ಯಯನ ಮಾಡುವ ವಿಚಾರದಲ್ಲಿ ವಿದ್ಯಾರ್ಥಿಗಳ ಕಾರ್ಯಕ್ಷಮತೆ ಹೇಗಿದೆ ಎಂಬುದನ್ನು ಮೌಲ್ಯಮಾಪನ ಮಾಡುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಈ ವೇಳೆಯೇ, “ಸರ್ಕಾರ ಎನ್‌ಇಪಿ ಅನ್ನು ಜಾರಿಗೆ ತರಲು ಆತುರಪಡಬಾರದು. ಎನ್‌ಇಪಿ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಶಿಕ್ಷಕರೂ ಈ ಬದಲಾವಣೆಗೆ ಸಿದ್ಧರಾಗಿಲ್ಲ” ಎಂದು ವಿವರಿಸಿದರು.

“ಮಹಾರಾಷ್ಟ್ರದಲ್ಲಿ ಎನ್‌ಇಪಿ ಜಾರಿಯಿಂದಾಗಿ ಮರಾಠಿ ಭಾಷೆಗೆ ಯಾವುದೇ ನಷ್ಟ ಉಂಟಾದರೂ ಅದನ್ನು ಸಹಿಸಲಾಗುವುದಿಲ್ಲ. ಮರಾಠಿ ಆದ್ಯತೆಯಾಗಿರಬೇಕು. ಇತರ ಭಾಷೆಗಳನ್ನು ಪರಿಚಯಿಸುವುದಾದರೆ, ಯಾವ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕೆಂಬುದನ್ನು ಪೋಷಕರಿಗೆ ಬಿಡಬೇಕು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಹಿಂದಿ ಭಾಷಾ ಹೇರಿಕೆ ವಿವಾದದ ನಡುವೆ ಡೈರಿ ಮಿಲ್ಕ್ ಹೊಸ ಜಾಹೀರಾತು ವೈರಲ್

“ಯಾವುದೇ ಭಾಷೆಯನ್ನೂ ಕಡ್ಡಾಯಗೊಳಿಸುವುದು ಸರಿಯಲ್ಲ. ಮರಾಠಿ ರಾಜ್ಯದ ನಿವಾಸಿಗಳ ಮಾತೃಭಾಷೆ. ಮರಾಠಿ ಎಂದಿಗೂ ಮೊದಲ ಭಾಷೆಯಾಗಿಯೇ ಉಳಿಯಬೇಕು” ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ತ್ರಿಭಾಷಾ ಸೂತ್ರವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಇದರ ಮೂಲಕ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬುದು ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ಆರೋಪವಾಗಿದೆ. ಕೇಂದ್ರ ಸರ್ಕಾರವು ಇತರೆ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿರುವುದನ್ನು ಕನ್ನಡ, ತಮಿಳು, ತೆಲುಗು, ಮರಾಠಿ ಭಾಷಿಕರು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...