ವಿಜಯೇಂದ್ರ ಆಯ್ಕೆ | ಬಿಜೆಪಿಯ ಹಿರಿಯರು ಅಸಮಾಧಾನ, ಸಿಟ್ಟು, ನೋವನ್ನು ನುಂಗಿಕೊಂಡು ಮೌನವಾಗಿದ್ದೇಕೆ?

Date:

ಯುವ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹಲವರು ಅವರ ನೇಮಕವನ್ನು ಸಂಭ್ರಮಿಸುತ್ತಿದ್ದರೆ, ಹಿರಿಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿ, ಈಗ ಮೌನಕ್ಕೆ ಶರಣಾಗಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿರುವ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಏರಿಸಿರುವುದನ್ನು ಹಿರಿಯರು ಮತ್ತು ಪಕ್ಷಕ್ಕಾಗಿ ದುಡಿದ ಹಿಂದಿನ ಪೀಳಿಗೆಯ ಬಿಜೆಪಿ ನಾಯಕರು ‘ರಾಜಕೀಯ ಅಪ್ರಸ್ತುತಿ’ ಎಂದಿದ್ದಾರೆ. 2028ರಲ್ಲಿ ಪಕ್ಷದ ಮುಖ್ಯಮಂತ್ರಿಯಾಗುವ ಅವಕಾಶವನ್ನು ಹಿರಿಯ ನಾಯಕರು ಕಳೆದುಕೊಳ್ಳಬಹುದು ಎಂಬ ಮಾತುಗಳೂ ಇವೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ವಿ.ಸೋಮಣ್ಣ, ಮಾಜಿ ಕೇಂದ್ರ ಸಚಿವ ಬಸನಗೌಡ ಯತ್ನಾಳ್, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಮಂತ್ರಿಗಳಾದ ಆರ್. ಅಶೋಕ್, ಅಶ್ವತ್ಥನಾರಾಯಣ್, ಸುನಿಲ್ ಕುಮಾರ್, ಶ್ರೀರಾಮುಲು ಮತ್ತು ಇನ್ನೂ ಅನೇಕ ನಾಯಕರು ರಾಜ್ಯಾಧ್ಯಕ್ಷರಾಗಬಹುದು ಎಂದು ಹೇಳಲಾಗಿತ್ತು. ಅಲ್ಲದೆ, ಅವರೆಲ್ಲರೂ ವಿಜಯೇಂದ್ರ (47) ಅವರಿಗಿಂತ ವಯಸ್ಸು ಮತ್ತು ರಾಜಕೀಯ ಅನುಭವದಲ್ಲಿ ಹಿರಿಯರು. ಆದರೆ, ಈಗ ಅವರೆಲ್ಲರೂ ಮೊದಲ ಬಾರಿಗೆ ಶಾಸಕನಾಗಿರುವ ವಿಜಯೇಂದ್ರ ಅವರಿಂದ ಸಲಹೆ, ಸೂಚನೆ, ನಿರ್ದೇಶನಗಳನ್ನು ತೆಗೆದುಕೊಳ್ಳಬೇಕಾಗಿದೆ. ಜೊತೆಗೆ, ಪೂರ್ವನಿಯೋಜಿತವಾಗಿ 2028ರ ವಿಧಾನಸಭಾ ಚುನಾವಣೆಯಲ್ಲಿ ಅವರೇ ಮುಖ್ಯಮಂತ್ರಿ ಮುಖವೂ ಆಗಬಹುದು ಎಂಬ ಮಾತುಗಳಿವೆ. ಹಿರಿಯರಿಗೆ ಇದು ಅರಗಿಸಿಕೊಳ್ಳುವುದಕ್ಕೆ ಕಷ್ಟವಾದರೂ, ಅಸಮಾಧಾನವನ್ನು ಹೊರಹಾಕದೆ, ನೋವನ್ನು ನುಂಗಿಕೊಳ್ಳಬೇಕಾದ, ಮೌನಕ್ಕೆ ಶರಣಾಗಬೇಕಾದ ಸನ್ನಿವೇಶವಾಗಿದೆ.

ಆ ಕಾರಣದಿಂದಾಗಿಯೇ ಆ ಹಿರಿಯರೆಲ್ಲರೂ ಮೌನಕ್ಕೆ ಶರಣಾಗಿದ್ದಾರೆ. ಅವರೆಲ್ಲರೂ ತಮ್ಮ ರಾಜಕೀಯ ಭವಿಷ್ಯಕ್ಕೆ ಧಕ್ಕೆ ತರುವಂತಹ ಯಾವುದೇ ಹೇಳಿಕೆಗಳನ್ನು ನೀಡಬಾರದೆಂಬ ಹೈಕಮಾಂಡಿನ ಮೌಖಿಕ ಆದೇಶಕ್ಕೆ  ಮೌನ ತಾಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲಕ್ಕಿಂತ ಮುಖ್ಯವಾಗಿ, ರಾಜ್ಯದಲ್ಲಿ ಯಡಿಯೂರಪ್ಪನವರ ವರ್ಚಸ್ಸನ್ನು ಬದಿಗೊತ್ತಿ, ಕೋಮುವಾದಿ ದಾಳದೊಂದಿಗೆ ಬಿಜೆಪಿಯನ್ನು ಗಟ್ಟಿಗೊಳಿಸಬೇಕೆಂದು ವಂಚುಹಾಕಿದ್ದ ಆರ್‌ಎಸ್‌ಎಸ್‌ಗೆ ವಿಜಯೇಂದ್ರ ಆಯ್ಕೆ ನುಂಗಿ, ಅರಗಿಸಿಕೊಳ್ಳಲಾಗದ ತುತ್ತಾಗಿ ಪರಿಣಮಿಸಿದೆ. ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗಿಸಿ, ಕೋಮುವಾದಿ ಧೋರಣೆ, ಮುಸ್ಲಿಂ ವಿರೋಧಿ ನಡೆಗಳು, ದ್ವೇಷ ಭಾಷಣಗಳ ಮೂಲಕ ಸರ್ಕಾರ ನಡೆಸಲಾಗಿತ್ತು. ಸರ್ಕಾರದ ಚುಕ್ಕಾಣಿ ಕೇಶವ ಕೃಪಾದಲ್ಲಿದೆ ಎಂದು ಹೇಳಲಾಗಿತ್ತು. ಆದರೆ, ಈಗ ಮತ್ತೆ ಯಡಿಯೂರಪ್ಪ ಕುಟಂಬದ ಕೈಗೆ ಬಿಜೆಪಿ ಚುಕ್ಕಾಣಿ ಮರಳಿದೆ. ಇದು ಆರ್‌ಎಸ್‌ಎಸ್‌ಗೆ ಸಹಿಸಲಾಗಿದ್ದರೂ, ಸಂಘ ಮೌನವಾಗಿದೆ.

ಸಂಘಪರಿವಾರದ ಹಿನ್ನೆಲೆಯ ಬ್ರಾಹ್ಮಣ ನಾಯಕರಾದ ಬಿ.ಎಲ್. ಸಂತೋಷ್, ಪ್ರಲ್ಹಾದ್ ಜೋಷಿ, ಸುರೇಶ್ ಕುಮಾರ್, ನಾಗೇಶ್, ರವಿ ಸುಬ್ರಹ್ಮಣ್ಯ, ತೇಜಸ್ವಿ ಸೂರ್ಯರು ಅಗಿಯಲೂ ಆಗದೆ, ಉಗುಳಲೂ ಆಗದೆ ಒದ್ದಾಡುತ್ತಿದ್ದಾರೆ.

ಪಕ್ಷದ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ‘ವಿಜಯೇಂದ್ರ ಅವರಿಗೆ ನೀಡಿರುವುದು ಅಧಿಕಾರವಲ್ಲ, ಜವಾಬ್ದಾರಿ’ ಎಂದಷ್ಟೇ ಹೇಳಿದ್ದಾರೆ. ವಿಜಯೇಂದ್ರ ಅವರ ಆಯ್ಕೆಯ ಫಲಿತಾಂಶ ಲೋಕಸಭೆ ಚುನಾವಣೆ ನಂತರ ತಿಳಿಯಲಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.  ಹಿರಿಯ ಲಿಂಗಾಯತ ಮುಖಂಡ ಬಸವರಾಜ ಬೊಮ್ಮಾಯಿ, ವಿ ಸೋಮಣ್ಣ, ಮೌನ ಮುರಿದಿಲ್ಲ. ಯತ್ನಾಳ್ ಮತ್ತು ನಿರಾಣಿಯಂತಹ ಬಾಯಿಬಡುಕರು ಬಡಿದಾಡಿಕೊಂಡಿದ್ದೂ ನಡೆದಿದೆ. ಇನ್ನು ಕೆಲವರು ಅವರ ಉನ್ನತಿಯ ಬಗ್ಗೆ ತೆರೆಮರೆಯಲ್ಲಿ ಕೋಪ ವ್ಯಕ್ತಪಡಿಸಿದ್ದಾರೆ. ಹಲವರು ಪಕ್ಷವು ತಾನು ಮಾಡಿದ ತಪ್ಪಿಗೆ ಬೆಲೆ ತೆರುತ್ತದೆ ಎನ್ನುತ್ತಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರು ತಮ್ಮ ನಿಷ್ಠಾವಂತ ಬೆಂಬಲಿಗರಲ್ಲಿ ಒಬ್ಬರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬಹುದಿತ್ತು. ಆದರೆ, ಅವರು ತಮ್ಮ ಮಗನನ್ನು ಆಯ್ಕೆ ಮಾಡಿರುವುದು ಕೆಟ್ಟ ನಿದರ್ಶನವಾಗಿದೆ ಎಂದು ಕೆಲವರು ಹೇಳಿದ್ದಾರೆ.

“ಬಲವಂತವಾಗಿ ಅಧಿಕಾರದಿಂದ ಕೆಳಗಿಳಿದ ನಂತರ ಬಿಜೆಪಿ ವಿರುದ್ಧ ಯಡಿಯೂರಪ್ಪನವರ ಕೋಪವು 2023ರಲ್ಲಿ ಪಕ್ಷವು ಹೀನಾಯವಾಗಿ ಸೋಲುವಂತೆ ಮಾಡಿತು. ಈಗ, 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನಾಯಕರ ಸಾಮೂಹಿಕ ಕೋಪವು ಏನು ಮಾಡಬಹುದು. ಕಾದು ನೋಡಬೇಕು” ಎಂದು ವಿಶ್ಲೇಷಕರೊಬ್ಬರು ಹೇಳಿದ್ದಾರೆ.

”ಯಾರಿಗೂ ಕೋಪವಿಲ್ಲ. ಇದೆಲ್ಲವೂ ರಾಜಕೀಯ ಲೆಕ್ಕಾಚಾರವಾಗಿದೆ. ವಿಜಯೇಂದ್ರ ಅವರಿಗಿಂತ ಚಿಕ್ಕ ವಯಸ್ಸಿನಲ್ಲೇ ಅನಂತ್‌ಕುಮಾರ್‌ ಪಕ್ಷದ ಅಧ್ಯಕ್ಷರಾಗಿದ್ದರು. ಅವರು ಬಿಜೆಪಿಯ ಸ್ಥಾನಗಳನ್ನು 40 ರಿಂದ 87ಕ್ಕೆ ಹೆಚ್ಚಿಸಿದ್ದರು. ವಯಸ್ಸು ಮತ್ತು ಹಿರಿತನ ಮುಖ್ಯವಲ್ಲ. ಈಗಿನ ‘ಪವರ್ ಪಾಲಿಟಿಕ್ಸ್’ನಲ್ಲಿ ವಿಜಯೇಂದ್ರ ಉತ್ತಮ ಆಯ್ಕೆ” ಎಂದು ಪಕ್ಷದ ಮುಖ್ಯ ವಕ್ತಾರ ಮಹೇಶ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...