ಕೇಂದ್ರ ಬಜೆಟ್‌-2024 | ಮಹಿಳೆಯರಿಗೆ ನೆರವಾಗುವ ನಾರಿಶಕ್ತಿ ಬಜೆಟ್ ಇದಾಗಿದೆ: ಎಚ್‌ ಡಿ ಕುಮಾರಸ್ವಾಮಿ

Date:

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಬಣ್ಣಿಸಿದರು.

ಸತತ 7ನೇ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಅಭಿನಂದಿಸಿ, ‌ಕೇಂದ್ರ ಬಜೆಟ್ ಬಗ್ಗೆ ಎಕ್ಸ್‌ ತಾಣದಲ್ಲಿ ಅಭಿಪ್ರಾಯ ಹಂಚಿಕೊಂಡ ಅವರು, “9 ಆದ್ಯತಾ ವಲಯಗಳನ್ನು ಗುರುತಿಸಲಾಗಿದೆ. ಆ ಪೈಕಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ ಅನುದಾನ ನೀಡಿ 4 ಕೋಟಿ ಉದ್ಯೋಗ ಸೃಷ್ಟಿಸುವ ಗುರಿ ಮಾನವ ಸಂಪನ್ಮೂಲ ಸದ್ಬಳಕೆಗೆ ಆದ್ಯತೆ ಕೊಡಲಾಗಿದೆ. ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಣ್ಣ, ಮಧ್ಯಮ ಗಾತ್ರದ ಕೈಗಾರಿಗಳಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉಪಕ್ರಮ ಈ ಬಜೆಟ್‌ನಲ್ಲಿದೆ” ಎಂದಿದ್ದಾರೆ.

“ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್. ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ. ಉತ್ಪಾದನೆಗೂ ಗಮನ ಕೊಡಲಾಗಿದೆ. ಬೆಂಗಳೂರು – ಚೆನ್ನೈ, ಹೈದರಾಬಾದ್ -ಬೆಂಗಳೂರು, ಬೆಂಗಳೂರು ಸೇರಿ ಒಟ್ಟು 12 ಕೈಗಾರಿಕಾ ಕಾರಿಡಾರ್ ಗಳನ್ನು ಘೋಷಣೆ ಮಾಡುವುದು ಉದ್ಯೋಗ, ಆರ್ಥಿಕ ವೃದ್ಧಿಗೆ ಬೃಹತ್ ಕೊಡುಗೆ ನೀಡಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಚ್ಚುತ್ತಿರುವ ಆಹಾರ ಬೇಡಿಕೆಯ ಪೂರೈಕೆ ಹಾಗೂ ಕೃಷಿಗೆ ಮತ್ತಷ್ಟು ಚೈತನ್ಯ ತುಂಬಲು ಕೃಷಿ ಸಂಶೋಧನೆ & ಅಭಿವೃದ್ಧಿಗೆ ಬಿಜೆಟ್ ಆದ್ಯತೆ ಕೊಟ್ಟಿದೆ. ಕೃಷಿ ಬೆಳೆಯ ಡಿಜಿಟಲ್ ಸಮೀಕ್ಷೆ ಮಾಡುವ ಯೋಜನೆಯನ್ನು ದೇಶದ 400 ಜಿಲ್ಲೆಗಳಿಗೆ ವಿಸ್ತರಿಸುವುದು ಸ್ವಾಗತಾರ್ಹ. ಮೇಲಾಗಿ ಸಹಜ ಕೃಷಿಗೆ ವಿತ್ತ ಸಚಿವರು ಪ್ರಾಮುಖ್ಯತೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

“ಸಂಶೋಧನೆ, ಆವಿಷ್ಕಾರಕ್ಕೆ ಬಜೆಟ್ ಅತಿಹೆಚ್ಚು ಒತ್ತು ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಸ್ಪರ ಸಹಯೋಗದಿಂದ ಕೈಗಾರಿಕಾಭಿವೃದ್ಧಿಗೆ ಆದ್ಯತೆ ನೀಡುವುದು ಅಭಿವೃದ್ಧಿಗೆ ದೂರಗಾಮಿ ಕೊಡುಗೆ ನೀಡುವ ಉಪಕ್ರಮವಾಗಿದೆ. ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ. ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...