ಕೇರಳ | ‘ಭಾರತ್ ಮಾತಾಕೀ ಜೈ’ ಘೋಷಣೆಗೆ ಸಹಕರಿಸದ ಸಭಿಕರು: ತಾಳ್ಮೆ ಕಳೆದುಕೊಂಡ ಕೇಂದ್ರ ಸಚಿವೆ!

Date:

ಕೇರಳದ ಕೋಝಿಕ್ಕೋಡ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ತಮ್ಮ ಭಾಷಣದ ಕೊನೆಯಲ್ಲಿ ಕೂಗಿದ್ದ ‘ಭಾರತ್ ಮಾತಾಕೀ ಜೈ’ ಘೋಷಣೆಗೆ ಸಭಿಕರು ಸಹಕರಿಸದ ಕಾರಣ ತಾಳ್ಮೆ ಕಳೆದುಕೊಂಡ ಪ್ರಸಂಗ ನಡೆದಿದೆ.

ಇಂದು(ಫೆ.3) ಕೇರಳದ ಕೋಝಿಕ್ಕೋಡ್‌ನಲ್ಲಿ ‘ಅವೇಕ್ ಯೂತ್ ಕಾನ್‌ಕ್ಲೇವ್ 2024’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ತಮ್ಮ ಮಾತಿನ ಕೊನೆಯಲ್ಲಿ ‘ಭಾರತ್ ಮಾತಾಕೀ ಜೈ’ ಎಂದು ಘೋಷಣೆ ಕೂಗಿದರು. ಈ ವೇಳೆ ಎಲ್ಲ ಪ್ರೇಕ್ಷಕರ ಬದಲಿಗೆ ಕೆಲವರಷ್ಟೇ ಸಹಕಾರ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸಭೆಯಲ್ಲಿದ್ದ ಎಲ್ಲರೂ ಘೋಷಣೆಗೆ ಸಹಕಾರ ನೀಡುವಂತೆ ಮತ್ತೊಮ್ಮೆ ಹೇಳಿದರು. ಆ ಬಳಿಕವೂ ಕೆಲವರು ಮಾತ್ರ ಸಹಕರಿಸಿದ್ದರಿಂದ ತಾಳ್ಮೆ ಕಳೆದುಕೊಂಡ ಕೇಂದ್ರ ಸಚಿವೆ,” ಇಲ್ಲಿ ಕೂತಿರುವ ಕೆಲವರು ಕೈ ಕಟ್ಟಿ ಕುಳಿತಿದ್ದಾರೆ. ಭಾರತವು ನನ್ನ ತಾಯಿ ಮಾತ್ರವೇ? ನಿಮಗೆ ತಾಯಿಯಲ್ಲವೇ? ಘೋಷಣೆ ಕೂಗಲು ಏನು ಕಷ್ಟ” ಎಂದು ಪ್ರಶ್ನಿಸಿದರು.

ಆ ಬಳಿಕ ಹಳದಿ ಬಟ್ಟೆ ಧರಿಸಿದ್ದ ಮಹಿಳೆಯೋರ್ವರನ್ನು ಮೀನಾಕ್ಷಿ ಲೇಖಿ ಬೊಟ್ಟು ಮಾಡಿದರು. ಈ ವೇಳೆಯೂ ಪ್ರತಿಕ್ರಿಯೆ ನೀಡದ್ದಕ್ಕೆ ಆಕ್ರೋಶಗೊಂಡ ಸಚಿವೆ, “ಒಂದು ವೇಳೆ ನಿಮಗೆ ಭಾರತ್ ಮಾತಾಕಿ ಘೋಷಣೆ ಕೂಗುವುದಕ್ಕೆ ಕಷ್ಟವಾಗುವುದಾರೆ ಇಲ್ಲಿಂದ ಹೋಗಬಹುದು” ಎಂದು ಸೂಚಿಸಿದರು. ಈ ಎಲ್ಲ ಬೆಳವಣಿಗೆಗಳು ಕಾರ್ಯಕ್ರಮದಲ್ಲಿದ್ದ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿರುವ ಸ್ವಾಯತ್ತ ಸಂಸ್ಥೆಯಾದ ನೆಹರು ಯುವ ಕೇಂದ್ರ, ಖೇಲೋ ಇಂಡಿಯಾ ಮತ್ತು ತಪಸ್ಯ ಸಂಘಟನೆಯು ‘ಅವೇಕ್ ಯೂತ್ ಕಾನ್‌ಕ್ಲೇವ್’ ಸಮಾವೇಶವನ್ನು ಆಯೋಜಿಸಿತ್ತು.

ಕೇಂದ್ರ ಸಚಿವೆಯ ಈ ರೀತಿಯ ನಡೆಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮಲ್ಲಿರುವ ದೇಶಾಭಿಮಾನ ಬಿಜೆಪಿ ಹಾಗೂ ಸಂಘಪರಿವಾರಕ್ಕೆ ತೋರುವ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...