‘ಬೇಟಿ ಬಚಾವೋ ಬೇಟಿ ಪಡಾವೋ’ವನ್ನು ತಪ್ಪಾಗಿ ಬರೆದ ಕೇಂದ್ರ ಸಚಿವೆ; ವಿಪಕ್ಷಗಳ ಗೇಲಿ

Date:

ಮೋದಿ ಸರ್ಕಾರದಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್ ಅವರು ‘ಬೇಟಿ ಬಚಾವೋ ಬೇಟಿ ಪಡಾವೋ’ ಘೋಷಣೆಯನ್ನು ದೇವನಾಗರಿ ಲಿಪಿಯಲ್ಲಿ ತಪ್ಪಾಗಿ ಬರೆದಿರುವ ವಿಡಿಯೋ ವೈರಲ್ ಆಗಿದೆ. ಪ್ರತಿಪಕ್ಷ ಕಾಂಗ್ರೆಸ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಜಾರ್ಖಂಡ್‌ನಲ್ಲಿ ‘ಸ್ಕೂಲ್ ಚಲೇ ಹಮ್ ಅಭಿಯಾನ್’ ಅಡಿಯಲ್ಲಿ ಶಾಲೆಗಳ ಹೊಸ ಶೈಕ್ಷಣಿಕ ಸಮಾವೇಶವನ್ನು ರಾಜ್ಯಾದ್ಯಂತ ಪ್ರಾರಂಭಿಸಲಾಗುತ್ತಿದೆ. ಅದರ ಅಂಗವಾಗಿ ಮಂಗಳವಾರ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ಸ್ಥಳೀಯ ಎನ್‌ಜಿಒ ಕಾರ್ಯಕ್ರಮ ಆಯೋಜಿಸಿದ್ದತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆ ಸಾವಿತ್ರಿ ಠಾಕೂರ್, ಮೋದಿ ಸರ್ಕಾರದ ‘ಬೇಟಿ ಬಚಾವೋ ಬೇಟಿ ಪಡಾವೋ’ ಘೋಷಣೆಯನ್ನು ತಪ್ಪಾಗಿ ಬರೆದಿದ್ದು, ಅದರ ವಿಡಿಯೋ ವೈರಲ್ ಆಗಿದೆ.

12ನೇ ತರಗತಿವರೆಗೆ ಶಿಕ್ಷಣ ಪಡೆದಿರುವ ಠಾಕೂರ್ ಜಾರ್ಖಂಡ್‌ನ ಧಾರ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಎರಡನೇ ಬಾರಿಗೆ ಸಂಸದರಾಗಿ, ಈಗ ಸಚಿವರೂ ಆಗಿರುವ ಅವರು ‘ಬೇಟಿ ಬಚಾವೋ ಬೇಟಿ ಪಡಾವೋ’ ಎಂಬುದನ್ನು ‘ಬೇಟಿ ಪಢಾವೋ ಬಚ್ಚಾವ್’ ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಆ ವಿಡಿಯೋವನ್ನು ಹಂಚಿಕೊಂಡು ಅಪಹಾಸ್ಯ ಮಧ್ಯಪ್ರದೇಶ ಕಾಂಗ್ರೆಸ್‌ ಮಾಧ್ಯಮ ಸಲಹೆಗಾರ ಮತ್ತು ಪಕ್ಷದ ಹಿರಿಯ ನಾಯಕ ಕೆ.ಕೆ ಮಿಶ್ರಾ, “ಯಾರ ದುರದೃಷ್ಟವೆಂದು ನಾವು ಪರಿಗಣಿಸಬೇಕು… ದೇಶ, ಪ್ರಜಾಪ್ರಭುತ್ವ, ಸಂವಿಧಾನ ಅಥವಾ ಶಿಕ್ಷಣ ನೀತಿ” ಎಂದು ಪೋಸ್ಟ್‌ ಮಾಡಿದ್ದಾರೆ.

ಜಾರ್ಖಂಡ್‌ ವಿರೋಧ ಪಕ್ಷದ ನಾಯಕ ಉಮಂಗ್ ಸಿಂಘರ್, “ಇದು ಎಂತಹ ನಾಯಕತ್ವ….??? ಪ್ರಧಾನಿಗೆ ತಮ್ಮ ಸರ್ಕಾರದಲ್ಲಿ ರಬ್ಬರ್ ಸ್ಟಾಂಪ್ ಮಂತ್ರಿಗಳು ಮಾತ್ರ ಬೇಕೇ? ಒಬ್ಬ ಸಾರ್ವಜನಿಕ ಪ್ರತಿನಿಧಿ ಹೇಗಿರಬೇಕು ಎಂಬುದಕ್ಕೆ ಯಾವುದೇ ಮಾನದಂಡವಿಲ್ಲ. ಆದರೆ, ಕನಿಷ್ಠ ಅವರು ಅಕ್ಷರಸ್ಥರಾಗಿರಬೇಕು! ಧಾರ್ ಸಂಸದೆ ಮತ್ತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಸಚಿವೆ ಸಾವಿತ್ರಿ ಠಾಕೂರ್ ಅವರಿಗೆ ಎರಡು ಪದಗಳನ್ನು ಬರೆಯಲು ಸಾಧ್ಯವಿಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಅವರು ತಪ್ಪಾಗಿ ಬರೆಯುವುದನ್ನು ನೋಡಿ ಏನನ್ನಿಸಿರಬಹುದು ಎಂದು ಅರ್ಥಮಾಡಿಕೊಳ್ಳಬಹುದು! ಇಂತಹ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಮುನ್ನ ಮತದಾರರು ಯೋಚಿಸಬೇಕಿತ್ತು. ಮೋದಿ ಸರ್ಕಾರಕ್ಕೆ ಪ್ರಶ್ನೆಗಳನ್ನು ಎತ್ತುವ ವಿದ್ಯಾವಂತ ನಾಯಕರು ಬೇಕಾಗಿಲ್ಲ” ಎಂದು ಟೀಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...