ಪ್ರತಿ ತಿಂಗಳು 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ವಿತರಣೆಗೆ ಕೇಂದ್ರ ಸಚಿವರಲ್ಲಿ ಪ್ರಸ್ತಾಪ: ಕೆ ಎಚ್‌ ಮುನಿಯಪ್ಪ

Date:

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಹೆಚ್ ಮುನಿಯಪ್ಪ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಭೇಟಿ ಮಾಡಿ ಅಕ್ಕಿ ಖರೀದಿ ಕುರಿತು ಚರ್ಚಿಸಿದ್ದಾರೆ.

ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾಹಿತಿ ಹಂಚಿಕೊಂಡ ಸಚಿವರು, “ತಿಂಗಳಿಗೆ ಎಷ್ಟು ಅಕ್ಕಿ ವಿತರಿಸುತ್ತೀರಾ, ವರ್ಷಕ್ಕೆ ಇಷ್ಟು ಅಕ್ಕಿ ಬೇಕಾಗುತ್ತದೆ ಎಂಬುದನ್ನು ಸಚಿವರ ಮುಂದೆ ಪ್ರಸ್ತಾಪಿಸಿದ್ದೇನೆ” ಎಂದರು.

“ಬಿಪಿಎಲ್ ಪಡಿತರ ಚೀಟಿಯಲ್ಲಿ ಎರಡು ಭಾಗ ಇದೆ. ಒಂದು ಕೇಂದ್ರ ಸರ್ಕಾರ ಕೊಡುತ್ತದೆ. ಅದು ನಾಲ್ಕು ಕೋಟಿ ಜನಕ್ಕೆ ಕೊಡುತ್ತದೆ. ನಮ್ಮ ರಾಜ್ಯ ಸರ್ಕಾರ 4 ಕೋಟಿ 50 ಲಕ್ಷ ಬಿಪಿಎಲ್ ಪಡಿತರದಾರರಿಗೆ ಅಕ್ಕಿ ಕೊಡುತ್ತಿದ್ದೇವೆ. ರಾಜ್ಯ ಸರ್ಕಾರ ಕರ್ನಾಟಕದಲ್ಲಿ 13 ಲಕ್ಷ ಬಿಪಿಎಲ್ ಪಡಿತರ ಕಾರ್ಡ್ಗಳನ್ನು ಹೊಂದಿದ್ದು ಅಂದರೆ 40 ರಿಂದ 50 ಲಕ್ಷ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಅಕ್ಕಿಯನ್ನು ಕೊಡುತ್ತಿದೆ. ನಾವು ಕೇಂದ್ರ ಸ್ವಾಮ್ಯದ ಕೇಂದ್ರೀಯ ಭಂಡಾರ ಎನ್.ಸಿ.ಸಿ.ಎಫ್ ಅವರ ಮುಖಾಂತರ ಅಕ್ಕಿಯನ್ನು ಖರೀದಿ ಮಾಡುತ್ತಿದ್ದೇವೆ. ಈಗ ಕೇಂದ್ರ ಸರ್ಕಾರ ಮುಂದೆ ಬಂದಿದ್ದು 28 ರೂಪಾಯಿಗೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (FCI) 34 ರೂ.ಯಂತೆ ಇಂದಿನ ರೇಟ್ ಅಲ್ಲಿ ನೀಡಲಾಗುತ್ತಿದೆ. ಈಗ 28 ರೂಪಾಯಿಗೆ ಅಕ್ಕಿ ಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸರ್ಕಾರವನ್ನು ಮೊದಲು ಕೇಳಿದಾಗ ಕೊಡಲಿಲ್ಲ. ಈಗ ಮುಂದೆ ಬಂದಿರೋದನ್ನು ಸ್ವಾಗತ ಮಾಡುತ್ತೇವೆ” ಎಂದು ತಿಳಿಸಿದರು.

“ನಾವು ರಾಜ್ಯದಲ್ಲಿ ಸರ್ವೇ ಮಾಡಿರುವ ಪ್ರಕಾರ ಗ್ರಾಹಕರು ಐದು ಕೆಜಿ ಅಕ್ಕಿ ಜೊತೆಗೆ ಬೇಳೆ, ಎಣ್ಣೆ ,ಸಕ್ಕರೆ ಮುಂತಾದ ಆಹಾರ ಸಾಮಗ್ರಿಗಳನ್ನು (ಪದಾರ್ಥಗಳನ್ನು) ಕೊಟ್ಟರೆ ಅನುಕೂಲವಾಗುತ್ತದೆ ಎಂದು ರಾಜ್ಯದ 93 ಪರ್ಸೆಂಟ್ ಜನ ಅಭಿಪ್ರಾಯಪಟ್ಟಿದ್ದಾರೆ. ನಾನು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜೊತೆ ಚರ್ಚಿಸಿ ಯಾವ ರೀತಿ ಮಾಡಬೇಕು ಅನ್ನೋದನ್ನು ತೀರ್ಮಾನಿಸಲಾಗುವುದು” ಎಂದರು.

“ರಾಜ್ಯದಲ್ಲಿ 13 ಲಕ್ಷ ಬಿಪಿಲ್ ಕಾರ್ಡ್‌ಗಳಿದ್ದು 45 ರಿಂದ 55 ಲಕ್ಷ ಪಡಿತರದಾರರಿದ್ದಾರೆ. ಅದಕ್ಕೆ ಪ್ರತಿ ತಿಂಗಳಿಗೆ 20 ಸಾವಿರ ಮೆಟ್ರಿಕ್ ಟನ್ ಬೇಕಾಗುತ್ತದೆ ಎಂದು ಸಚಿವರಲ್ಲಿ ಪ್ರಸ್ತಾಪಿಸಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...