ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ‘ಭಾರತ ಮಾತೆ’ ಎಂದು ಬಣ್ಣಿಸಿರುವ ಕೇಂದ್ರ ಸಚಿವ ಸುರೇಶ್ ಗೋಪಿ, ಹಿರಿಯ ಮಾರ್ಕ್ಸ್ವಾದಿ ಇ ಕೆ ನಯನಾರ್, ಬಿಜೆಪಿ ನಾಯಕ ಕರುಣಾಕರನ್ ತನ್ನ ರಾಜಕೀಯ ಗುರು ಎಂದು ಹೇಳಿಕೊಂಡಿದ್ದಾರೆ.
ಕೇರಳದ ತ್ರಿಶೂರಿನ ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ ‘ಮುರಳಿ ಮಂದಿರಂ’ಗೆ ಭೇಟಿ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುರೇಶ್ ಗೋಪಿ, ದಿವಂಗತ ಕಾಂಗ್ರೆಸ್ ಮುಖ್ಯಮಂತ್ರಿ ಕೆ ಕರುಣಾಕರನ್ ಅವರನ್ನು ಧೈರ್ಯಶಾಲಿ ಆಡಳಿತಗಾರ ಎಂದು ಬಣ್ಣಿಸಿದ್ದಾರೆ.
ಕುತೂಹಲಕರ ಸಂಗತಿ ಎಂದರೆ, ಕೇರಳದ ತ್ರಿಶೂರಿನಲ್ಲಿ ಕರುಣಾಕರನ್ ಅವರ ಪುತ್ರನ ವಿರುದ್ಧವೇ ಬಿಜೆಪಿಯಿಂದ ಸುರೇಶ್ ಗೋಪಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ತ್ರಿಕೋನ ಸ್ಪರ್ಧೆಯಲ್ಲಿ ಕರುಣಾಕರನ್ ಅವರ ಪುತ್ರ ಮತ್ತು ಕಾಂಗ್ರೆಸ್ ಮುಖಂಡ ಕೆ ಮುರಳೀಧರನ್ ಮೂರನೇ ಸ್ಥಾನದಲ್ಲಿದ್ದಾರೆ.
ಇದನ್ನು ಓದಿದ್ದೀರಾ? ಪ್ರಮಾಣವಚನ ಸ್ವೀಕರಿಸಿದ ಗಂಟೆಯಲ್ಲೇ ನನಗೆ ಕೇಂದ್ರ ಮಂತ್ರಿ ಸ್ಥಾನ ಬೇಡವೆಂದ ಸುರೇಶ್ ಗೋಪಿ
ಕರುಣಾಕರನ್ ಸ್ಮಾರಕಕ್ಕೆ ಭೇಟಿಗೆ ಯಾವುದೇ ರಾಜಕೀಯ ಅರ್ಥ ಸೇರಿಸಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದ ಬಿಜೆಪಿ ನಾಯಕ ಸುರೇಶ್ ಗೋಪಿ “ನಾನು ನನ್ನ ಗುರುಗಳಿಗೆ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ” ಎಂದು ಹೇಳಿದ್ದಾರೆ.
ಹಾಗೆಯೇ ನಯನಾರ್ ಮತ್ತು ಅವರ ಪತ್ನಿ ಶಾರದಾ ಟೀಚರ್ನಂತೆ ತಾನು ಕರುಣಾಕರನ್ ಮತ್ತು ಅವರ ಪತ್ನಿ ಕಲ್ಯಾಣಿಕುಟ್ಟಿ ಅಮ್ಮ ಜೊತೆ ನಿಕಟವಾದ ಸಂಬಂಧ ಹೊಂದಿದ್ದೆ ಎಂದು ಹೇಳಿಕೊಂಡಿದ್ದಾರೆ.
ಸುರೇಶ್ ಗೋಪಿ ಜೂನ್ 12ರಂದು ಕಣ್ಣೂರಿನಲ್ಲಿರುವ ನಯನಾರ್ ಅವರ ಮನೆಗೆ ಭೇಟಿ ನೀಡಿದ್ದು ನಯನಾರ್ ಅವರ ಕುಟುಂಬಸ್ಥರೊಂದಿಗೆ ಮಾತನಾಡಿದ್ದರು.
ಇದನ್ನು ಓದಿದ್ದೀರಾ? ಪತ್ರಕರ್ತೆಯೊಂದಿಗೆ ಅಸಭ್ಯ ವರ್ತನೆ: ಬಿಜೆಪಿ ಮಾಜಿ ಸಂಸದ, ನಟ ಸುರೇಶ್ ಗೋಪಿಗೆ ನಿರೀಕ್ಷಣಾ ಜಾಮೀನು
ಮುರಳಿ ಮಂದಿರಂಗೆ ಭೇಟಿ ನೀಡಿದ ಬಳಿಕ ಸುರೇಶ್ ಗೋಪಿ ಅವರು ನಗರದ ಪ್ರಸಿದ್ಧ ಲೂರ್ದ್ ಮಾತಾ ಚರ್ಚ್ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
#WATCH | Kerala: Union Minister Suresh Gopi arrived at Our Lady of Lourdes Metropolitan Cathedral in Thrissur and offered a golden bead here. He sought blessings by presenting a gold crown here, in the wake of his victory in Lok Sabha elections. pic.twitter.com/2fBC7mkWjW
— ANI (@ANI) June 15, 2024
ಸುರೇಶ್ ಗೋಪಿ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಕೇರಳದಲ್ಲಿ ಬಿಜೆಪಿಯ ಖಾತೆ ತೆರೆದಿದ್ದಾರೆ. ತ್ರಿಶೂರ್ ಲೋಕಸಭೆ ಚುನಾವಣೆಗೆ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐನ ಅಭ್ಯರ್ಥಿಗಳ ನಡುವೆ ಭರ್ಜರಿ ಸ್ಪರ್ಧೆ ನಡೆದಿದೆ.





