ಉನ್ನಾಂವ್ ಪ್ರಕರಣದ ಅಪರಾಧಿಯ ಶಿಕ್ಷೆ ಅಮಾನತು; ಬಿಜೆಪಿ ಮತ್ತು ಪ್ರಿಯಾಂಕ್‌ ಖರ್ಗೆ ನಡುವೆ ವಾಕ್‌ಸಮರ!

Date:

ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಅಮಾನತುಗೊಳಿಸಿದೆ. ಈ ವಿಚಾರವು ಕರ್ನಾಟಕದಲ್ಲಿ ಬಿಜೆಪಿ ಮತ್ತು ಸಚಿವ ಪ್ರಿಯಾಂಕ್‌ ಖರ್ಗೆ ನಡುವಿನ ಜಟಾಪಟಿಗೆ ಕಾರಣವಾಗಿದೆ. ಅತ್ಯಾಚಾರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತು ಮಾಡಲಾಗಿರುವುದಕ್ಕೆ ಕೇಂದ್ರ ಸರ್ಕಾರವನ್ನು ಪ್ರಿಯಾಂಕ್‌ ಖರ್ಗೆ ಟೀಕಿಸಿದ್ದಾರೆ. ಅವರು ಬಳಸಿದ್ದ ಎಐ ರಚಿತ ಚಿತ್ರವನ್ನು ಖಂಡಿಸಿರುವ ಬಿಜೆಪಿ, ಸಚಿವರು ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದೆ.

ದೆಹಲಿ ಹೈಕೋರ್ಟ್‌ನ ಆದೇಶ ಹೊರಬಿದ್ದ ಬಳಿಕ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದ ಪ್ರಿಯಾಂಕ್‌ ಖರ್ಗೆ, ಚಿತ್ರವೊಂದನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ, ‘ಕಂಗ್ರಾಜುಲೇಷನ್ಸ್‌ ಮೋದಿ, ನಿಮ್ಮ ಬೇಟಿ ಬಚಾವೋ – ಬೇಟಿ ಪಡಾವೋ ಘೋಷಣೆಯು ಹೊಸ ಅರ್ಥ ಪಡೆದುಕೊಂಡಿದೆ’ ಎಂದು ಟೀಕಿಸಿದ್ದರು. ಅವರ ಹಂಚಿಕೊಂಡಿದ್ದ ಎಐ ರಚಿತ ಚಿತ್ರದಲ್ಲಿ, ದೆಹಲಿಯ ತಿಹಾರ್ ಜೈಲಿನ ಎದುರು ಸೆಂಗರ್‌ಗೆ ಕೆಲವು ಬಿಜೆಪಿಗರು ಹಾರ ಹಾಕಿ ಸ್ವಾಗತಿಸುತ್ತಿರುವುದು ಕಂಡುಬಂದಿತ್ತು.

ಈ ಚಿತ್ರವನ್ನು ಬಳಸಿದ್ದಕ್ಕಾಗಿ ಪ್ರಿಯಾಂಕ್‌ ಖರ್ಗೆ ವಿರುದ್ಧ ಕರ್ನಾಟಕ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. “ಸ್ವಯಂ ಘೋಷಿತ ‘ಫ್ಯಾಕ್ಟ್‌ ಚೆಕರ್’ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ದಾಳಿ ನಡೆಸುವ ಉದ್ದೇಶದಿಂದ ಸಾರ್ವಜನಿಕರನ್ನು ತಪ್ಪು ದಾರಿಗೆಳೆಯಲು ಎಐ ಚಿತ್ರವನ್ನು ಹಂಚಿಕೊಂಡಿದ್ದಾರೆ. ಭಾರತದ ಹೆಣ್ಣುಮಕ್ಕಳ ಸಬಲೀಕರಣದ ಪ್ರಮುಖ ಯೋಜನೆ ‘ಬೇಟಿ ಬಚಾವೋ, ಬೇಟಿ ಪಡಾವೋ’ದ ಅರ್ಥವನ್ನು ಸುಳ್ಳುಗಳ ಮೂಲಕ ವ್ಯಂಗ್ಯವಾಡಿದ್ದಾರೆ” ಎಂಧು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತು ಮಾಡುವುದು ಸರ್ಕಾರದ ನಿರ್ಧಾರವಲ್ಲ. ಅದು ನ್ಯಾಯಾಲಯದ ಆದೇಶವಾಗಿದೆ. ಆ ಆದೇಶವನ್ನು ಸಿಬಿಐ ಪ್ರಶ್ನಿಸಲಿದೆ. ಅಲ್ಲದೆ, ಸೆಂಗರ್‌ ಮತ್ತೊಂದು ಪ್ರಕರಣದಲ್ಲಿ ಇನ್ನೂ ಜೈಲಿನಲ್ಲಿಯೇ ಇದ್ದಾರೆ. ಪ್ರಿಯಾಂಕ್ ಖರ್ಗೆ ಹಂಚಿಕೊಂಡಿರುವ ಪೋಸ್ಟ್ ಅವರದೇ ಸರ್ಕಾರ ಜಾರಿಗೆ ತಂದಿರುವ ದ್ವೇಷ ಭಾಷಣ ವಿರೋಧಿ ಮಸೂದೆಯ ಉಲ್ಲಂಘನೆಯಾಗಿದೆ” ಎಂದು ಬಿಜೆಪಿ ಹೇಳಿದೆ.

ಈ ಬೆನ್ನಲ್ಲೇ ಮತ್ತೊಂದು ಪ್ರಿಯಾಂಕ್‌ ಖರ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅದರಲ್ಲಿ, ಗುಜರಾತ್‌ನ ಬಿಲ್ಕೀಸ್‌ ಬಾನೊ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಹೂವಿನ ಹಾರ ಹಾಕಿ ಸನ್ಮಾನಿಸಿದ ಸಂದರ್ಭದ ಚಿತ್ರವನ್ನು ಬಳಿಸಿರುವ ಪ್ರಿಯಾಂಕ್‌ ಖರ್ಗೆ, “ನಾನು ಹಿಂದಿನ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದ ಚಿತ್ರವು ಎಐನಿಂದ ರಚನೆ ಮಾಡಿರಬಹುದು. ಅದು ಕಣ್ತಪ್ಪಿ ಪೋಸ್ಟ್ ಆಗಿರಬಹುದು. ಆದರೆ ನಿಮ್ಮ (ಬಿಜೆಪಿ) ಖ್ಯಾತಿಯು (ಬಿಲ್ಕೀಸ್‌ ಬಾನೊ ಪ್ರಕರಣದ ಚಿತ್ರ) ನಿಮ್ಮ ಮುಂದೆಯೇ ಇದೆ” ಎಂದು ಹೇಳಿದ್ದಾರೆ.

“ಬಿಜೆಪಿ ಅಪರಾಧಿಗಳನ್ನು ಗೌರವಿಸುವುದು ಮತ್ತು ರಕ್ಷಿಸುವುದನ್ನು ಮುಂದುವರಿಸಿದೆ. ಕರ್ನಾಟಕದಲ್ಲಿ ಪೋಕ್ಸೋ ಆರೋಪಿಗಳ ವಿರುದ್ಧ ಯಾಕೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ? ಈ ನಾಯಕನನ್ನು ಇನ್ನೂ ನಿಮ್ಮ ಪಕ್ಷದ ‘ಮಾರ್ಗದರ್ಶಕ’ ಹಾಗೂ ‘ಮಾರ್ಗದರ್ಶಿ ಬೆಳಕು’ ಎಂಬುದಾಗಿಯೇ ಬಿಂಬಿಸಲಾಗುತ್ತಿದೆ ಅಲ್ಲವೇ?” ಎಂದು ಯಡಿಯೂರಪ್ಪನವರ ಹೆಸರನ್ನು ಉಲ್ಲೇಖಿಸಿದೆ ಅವರ ಬಗ್ಗೆ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...