ರಾಯಚೂರಿನ ವಿಜ್ಞಾನ ಕೇಂದ್ರ ʼಕೆಟಗರಿ-2ʼ ವಿಜ್ಞಾನ ಕೇಂದ್ರವಾಗಿ ಉನ್ನತೀಕರಣ: ಎನ್‌ ಎಸ್‌ ಭೋಸರಾಜು

Date:

ರಾಯಚೂರಿನಲ್ಲಿ 10 ಏಕರೆ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು, 22.25 ಕೋಟಿ ರೂ. ವೆಚ್ಚದಲ್ಲಿ ಕೆಟಗರಿ – 2 ವಿಜ್ಞಾನ ಕೇಂದ್ರವನ್ನಾಗಿ ಉನ್ನತೀಕರಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆಯನ್ನು ಮೂಡಿಸುವ ಉದ್ದೇಶದಿಂದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳೂ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುತ್ತಿದೆ” ಎಂದರು.

“ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಅಧ್ಯಕ್ಷನಾಗಿದ್ದ ಸಂಧರ್ಭದಲ್ಲಿ ಅಗತ್ಯ ಅನುದಾನ ನೀಡುವ ಮೂಲಕ ರಾಯಚೂರಿನಲ್ಲಿ 10 ಏಕರೆ ಪ್ರದೇಶದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಈ ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ದೆಹಲಿಗೆ ತೆರಳಿ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಕೇಂದ್ರ ಸರಕಾರದ ನ್ಯಾಷನಲ್‌ ಕೌನ್ಸಿಲ್‌ ಆಫ್‌ ಸೈನ್ಸ್‌ ಮ್ಯೂಸಿಯಮ್‌ ನ ಸ್ಕೀಮ್‌ ಫಾರ್‌ ಪ್ರಮೋಷನ್‌ ಆಫ್‌ ಕಲ್ಚರ್‌ ಆಫ್‌ ಸೈನ್ಸ್‌ನ ಮಾರ್ಗಸೂಚಿಯ ಅನ್ವಯ ಕೇಂದ್ರ ತಂಡ ರಾಯಚೂರಿಗೆ ಭೇಟಿ ನೀಡಿತು. ಕೇಂದ್ರ ಸರಕಾರಕ್ಕೆ ಈ ತಂಡ ಸಲ್ಲಿಸಿದ ವರದಿಯ ಅನ್ವಯ ಕೆಟಗರಿ – 2 ರ ವಿಜ್ಞಾನ ಕೇಂದ್ರವನ್ನಾಗಿ ಮೇಲ್ದರ್ಜೇಗೇರಿಸುವಂತಹ ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಸಲ್ಲಿಸಲಾಗಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಈ ಕೇಂದ್ರ ಉನ್ನತೀಕರಣಗೊಳ್ಳುವ ಮೂಲಕ ಈ ಬಾಗದ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿಜ್ಞಾನದ ಜಾಗೃತಿಯನ್ನು ಹೆಚ್ಚಳಕ್ಕೆ ಅನುವು ಮಾಡಿಕೊಡಲಿದೆ” ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...