ಉರಿ – ನಂಜೇಗೌಡ ವಿವಾದ | ಒಕ್ಕಲಿಗರು, ಮುಸ್ಲಿಮರ ನಡುವಿನ ಒಗ್ಗಟ್ಟು ಮುರಿಯುವ ಕುತಂತ್ರ: ಸಿ ಎಂ ಇಬ್ರಾಹಿಂ

Date:

  • ಸಿದ್ದರಾಮಯ್ಯ ಮೈಸೂರು ಭಾಗದಿಂದ ಸ್ಪರ್ಧಿಸುವುದು ಸೂಕ್ತ
  • ರಾಜಕೀಯ ಲಾಭಕ್ಕಾಗಿ ಬಿಜೆಪಿ ನಾಯಕರಿಂದ ಸುಳ್ಳು ಪಾತ್ರಗಳ ಸೃಷ್ಠಿ

“ಉರಿಗೌಡ – ನಂಜೇಗೌಡ ಕಾಲ್ಪನಿಕ ಕಥೆಗಳನ್ನು ಸೃಷ್ಟಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ  ರವಿ ಒಕ್ಕಲಿಗರು ಹಾಗೂ ಮುಸ್ಲಿಮರ ಮಧ್ಯೆ ಎತ್ತಿಕಟ್ಟುವ ಕುತಂತ್ರ ಮಾಡುತ್ತಿದ್ದಾರೆ” ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಉರಿಗೌಡ – ನಂಜೇಗೌಡ ವಿವಾದವು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಅದಿಚುಂಚನಗಿರಿ ಮಠದ ಪಿಠಾಧಿಪತಿ ನಿರ್ಮಲಾನಂದನಾಥ ಸ್ವಾಮಿಜಿ ಉರಿ – ನಂಜೇಗೌಡ ವಿವಾದವನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದರು. ಆದರೂ, ವಿವಾದ ಮುಂದುವರಿಸಿರುವ ಸಿ ಟಿ ರವಿ ಅವರಿಗೆ ಸಿ ಎಂ ಇಬ್ರಾಹಿಂ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಜಯಪುರದಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ”ಮೈಸೂರು ಭಾಗದಲ್ಲಿ ಒಕ್ಕಲಿಗರು ಮತ್ತು ಮುಸ್ಲಿಂರ ನಡುವಿನ ಒಗ್ಗಟ್ಟು ಮುರಿಯಲು ಉರಿ – ನಂಜೇಗೌಡ ಎಂಬ ಸುಳ್ಳು ಪಾತ್ರಗಳನ್ನು ಸೃಷ್ಟಿಸುತ್ತಿದ್ದಾರೆ. ರಾಜಕೀಯ, ಚುನಾವಣಾ ಲಾಭಕ್ಕಾಗಿ ಸಿ ಟಿ ರವಿ ಅವರು ಸಮಾಜದಲ್ಲಿನ ಶಾಂತಿ ಕದಡುವ ಮತ್ತು ಒಗ್ಗಟ್ಟು ಮುರಿಯುವ ಹೇಳಿಕೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಮಯ್ಯ ಅವರ ಸ್ಪರ್ಧೆಯ ಕುರಿತು ಮಾತನಾಡಿದ ಸಿ ಎಂ ಇಬ್ರಾಹಿಂ, “ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಭಾಗದಲ್ಲಿ ಸ್ಪರ್ಧಿಸುವುದು ಸೂಕ್ತ. ಬಾದಾಮಿ, ಕೋಲಾರ ಸೇರಿದಂತೆ ಇತರೆ ಯಾವ ಕ್ಷೇತ್ರಗಳೂ ಅವರಿಗೆ ಸೂಕ್ತವಲ್ಲ” ಎಂದು ಸಲಹೆ ನೀಡಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...