ಉರಿ-ನಂಜೇಗೌಡ ವಿವಾದ | ನಿರ್ಮಲಾನಂದನಾಥ ಸ್ವಾಮಿಗೆ ಸೆಡ್ಡು ಹೊಡೆದ ಸಿ ಟಿ ರವಿ

Date:

  • ನಿರ್ಮಲಾನಂದ ಶ್ರೀಗಳಿಗೆ ಮನವರಿಕೆ ಮಾಡಿಕೊಡುತ್ತೇವೆ
  • ದಾಖಲೆಗಳನ್ನು ತೆಗೆದುಕೊಂಡು ಮಠಕ್ಕೆ ಹೋಗುತ್ತೇವೆ

ಉರಿಗೌಡ – ನಂಜೇಗೌಡ ವಿಚಾರದಲ್ಲಿ ಬಿಜೆಪಿ ನಾಯಕರು ಸುಮ್ಮನಿರುವಂತೆ ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮಿ ಎಚ್ಚರಿಕೆ ನೀಡಿದ್ದರು. ಅದಾದ ಬಳಿಕ ಬಿಜೆಪಿ ನಾಯಕರು ಒಂದು ಮಟ್ಟಿಗೆ ತಣ್ಣಗಾಗಿದ್ದರು. ಆದರೆ, ಇದೀಗ ನಿರ್ಮಲಾನಂದನಾಥ ಸ್ವಾಮಿಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸೆಡ್ಡು ಹೊಡೆದಿದ್ದಾರೆ.

ಇತಿಹಾಸದ ಪೂರ್ಣ ದಾಖಲೆಗಳು ಲಭ್ಯವಿಲ್ಲದ ವಿಚಾರಗಳ ಮೇಲೆ ನಾವು ಮಾತನಾಡುವುದು ಅಥವಾ ಆ ವಿಚಾರವನ್ನು ಬೆಳೆಸುವಂತಹ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದು ನಿರ್ಮಲಾನಂದನಾಥ ಸ್ವಾಮಿ ಹೇಳಿದ್ದರು. ಆದರೆ, ಉರಿ-ನಂಜೇಗೌಡ ವಿವಾದ ಸದ್ಯಕ್ಕೆ ನಿಲ್ಲುವ ಯಾವ ಮುನ್ಸೂಚನೆಯೂ ಕಾಣಿಸುತ್ತಿಲ್ಲ.

ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಮಾತನಾಡಿದ ಸಿ ಟಿ ರವಿ, “ಉರಿಗೌಡ-ನಂಜೇಗೌಡ ಕಾಲ್ಪನಿಕ ಕಥೆಗಳಲ್ಲ. ಅವರ ಬಗ್ಗೆ ಜವರೇಗೌಡರು ಸುವರ್ಣ ಮಂಡ್ಯ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಿರ್ಮಲಾನಂದನಾಥ ಶ್ರೀಗಳಿಗೆ ವಾಸ್ತವವನ್ನು ಮನವರಿಕೆ ಮಾಡಿಕೊಡುತ್ತೇವೆ” ಎಂದು ಹೇಳುವ ಮೂಲಕ ಆದಿಚುಂಚನಗಿರಿ ಪೀಠಾಧ್ಯಕ್ಷರಿಗೆ ಬುದ್ಧಿ ಹೇಳುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರ ಬಳಿಗೆ ದಾಖಲೆಗಳನ್ನು ತೆಗೆದುಕೊಂಡು ಹೋಗುತ್ತೇವೆ. ಉರಿಗೌಡ, ನಂಜೇಗೌಡ ಬಗ್ಗೆ ದಾಖಲೆ ಸಂಗ್ರಹಿಸುವ ಕೆಲಸ ಮಾಡುತ್ತೇವೆ. ಉರಿಗೌಡ, ನಂಜೇಗೌಡ ಹೆಸರು ನಿನ್ನೆ ಮೊನ್ನೆಯಿಂದ ಪ್ರಾಮುಖ್ಯತೆಗೆ ಬಂದಿರುವುದಲ್ಲ” ಎಂದು ಸೆಡ್ಡು ಹೊಡೆದಿದ್ದಾರೆ.

“ಉರಿಗೌಡ-ನಂಜೇಗೌಡ ಅವರ ಬಗ್ಗೆ ಪುಸ್ತಕಗಳಲ್ಲಿ ಉಲ್ಲೇಖಗಳಿವೆ. ಅವರ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಎಲ್ಲರೂ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಟಿಪ್ಪು ಸುಲ್ತಾನನನ್ನು ನಮ್ಮ ಇತಿಹಾಸದಲ್ಲಿ ವೈಭವೀಕರಿಸಲಾಗಿದೆ. ಉರಿಗೌಡ-ನಂಜೇಗೌಡರ ವಿಚಾರದಲ್ಲಿ ಅಗೌರವ ತೋರಿಸಿರುವ ಎಚ್‌ ಡಿ ಕುಮಾರಸ್ವಾಮಿ ಅವರು ನಿರ್ಮಲಾನಂದ ಶ್ರೀಗಳ ಬಳಿ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಟಿಪ್ಪು ಸುಲ್ತಾನ್ ಹತ್ಯೆಯ ಕುರಿತು ಸಂಶೋಧನೆಯ ಮೂಲಕ ಸತ್ಯ ಹೊರಬೀಳಬೇಕು. ಸ್ವಾಮೀಜಿ ನನ್ನ ಜೊತೆ ಮಾತನಾಡಿದ್ದಾರೆ. ಗುರುಗಳ ಮಾತಿಗೆ ನಾವು ಗೌರವ ಕೊಡುತ್ತೇವೆ. ಟಿಪ್ಪು ಮತಾಂಧ ಅನ್ನುವುದು ನಿಜ. ಅವನನ್ನು ವೈಭವಿಕರಿಸಲಾಗಿದೆ. ಇತಿಹಾಸದಲ್ಲಿ ತಿಳಿಸಬೇಕಾದ್ದನ್ನು ತಿಳಿಸಿಲ್ಲ” ಎಂದು ಹೇಳಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...