ಸ್ಪೀಕರ್ ಯು ಟಿ ಖಾದರ್ ಬಗ್ಗೆ ‘ಹಂದಿ’ ಪದ ಬಳಸಿ ನಿಂದನೆ : ಕ್ರಮ ಕೈಗೊಳ್ಳುವುದೇ ಸರ್ಕಾರ?

Date:

  • ‘ಸ್ಪೀಕರ್ ಸ್ಥಾನದಲ್ಲಿ ಇರೋ ಒಂದು ಹಂದಿ’ ಎಂದು ಉಲ್ಲೇಖಿಸಿ ಅವಹೇಳನ
  • ಕಮೆಂಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತದಾ ಸರ್ಕಾರ?

ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪದ ಬಳಸಿ, ಟ್ವಿಟರ್‍‌ನಲ್ಲಿ ಅವಹೇಳನ ಮಾಡಲಾಗಿದೆ.

16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಜು.3ರ ಸೋಮವಾರದಂದು ಚಾಲನೆ ನೀಡಿದ್ದರು. ಎರಡನೇ ದಿನದ ಕಲಾಪದ ವೇಳೆ ಸ್ಪೀಕರ್ ಯು ಟಿ ಖಾದರ್, ದಿನಾಂಕಗಳನ್ನು ಕನ್ನಡದಲ್ಲಿ ಉಚ್ಛಾರಣೆ ಮಾಡುವ ಸಂದರ್ಭದಲ್ಲಿ ಎಡವಿದ್ದರು. ಈ ವಿಡಿಯೋ ತುಣುಕನ್ನು ಬಿಜೆಪಿಯಲ್ಲಿ ಗುರುತಿಸಿಕೊಂಡಿರುವವರೂ ಸೇರಿದಂತೆ ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡು ಟ್ರೋಲ್ ಮಾಡಿದ್ದರು.

ಈ ನಡುವೆ ಇತ್ತೀಚೆಗೆ ಬೆಂಗಳೂರಿನ MG (ಮೋರಿಸ್ ಗ್ಯಾರೇಜ್) ವಾಹನ ಶೋರೋಂನ ಸಿಬ್ಬಂದಿಯೊಬ್ಬರು ಸಂಸ್ಥೆಯ ಕಟ್ಟಡದ ಮೇಲೆ ಕನ್ನಡ ನಾಮಫಲಕ ಹಾಕುವುದಕ್ಕೆ ನಿರಾಕರಿಸಿದ್ದರು. ಆ ಬಳಿಕ ಕನ್ನಡಪರ ಹೋರಾಟಗಾರರು ಎಂಜಿ ಕಾರು ಸಂಸ್ಥೆಗೆ ಮುತ್ತಿಗೆ ಹಾಕಿ, ಪ್ರತಿಭಟಿಸಿದ್ದರಿಂದ ಬಳಿಕ ಕ್ಷಮೆ ಕೋರಿದ್ದರು. ಈ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ವಿ ಕೆ ಕಾರ್ತಿಕ್ ಎಂಬವರು ಟ್ವಿಟರ್‍‌ನಲ್ಲಿ ಹಂಚಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Handi Comment to UT Khader

ಇದಕ್ಕೆ ‘ಹನುಮಾನ್ ಆರ್ಯ ಹಿಂದೂ’ ಎಂಬ ಹೆಸರಿನ ಟ್ವಿಟರ್ ಖಾತೆಯಿಂದ ಕಮೆಂಟ್ ಮಾಡಲಾಗಿದ್ದು, ಸ್ಪೀಕರ್ ಯು ಟಿ ಖಾದರ್ ಅವರನ್ನು ‘ಸ್ಪೀಕರ್ ಸ್ಥಾನದಲ್ಲಿ ಇರೋ ಒಂದು ಹಂದಿ’ ಎಂದು ಉಲ್ಲೇಖಿಸಿ ಅವಹೇಳನ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ಕಲೆ ಹಾಕಲು ಈ ದಿನ.ಕಾಮ್ ಸ್ಪೀಕರ್ ಆಪ್ತ ವಲಯವನ್ನು ಸಂಪರ್ಕಿಸಿದಾಗ, ‘ವಿಧಾನಸಭೆಯ ಸ್ಪೀಕರ್ ಎನ್ನುವುದು ಅತ್ಯಂತ ಗೌರವದ ಸ್ಥಾನ. ಅಲ್ಲಿ ಯಾರೇ ಕೂತಿದ್ದರೂ ಅವರಿಗೆ ಗೌರವ ಕೊಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಈ ಬಗ್ಗೆ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತಂದು ಕ್ರಮ ವಹಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಬಂಧವಿಲ್ಲದ ಫೋಟೋ, ಸುಳ್ಳು ಸುದ್ದಿ ಹರಡುವವರಿಗೆ ಕಡಿವಾಣ ಹಾಕಲು, ಸೈಬರ್ ಕಾನೂನಿನಲ್ಲಿ ಸೂಕ್ತ ಕಾನೂನು ಜಾರಿಗೆ ತರಲಾಗುವುದು ಎಂದು ಇತ್ತೀಚೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ ನೀಡಿದ್ದರು.

ಈಗ ಸ್ಪೀಕರ್ ಯು ಟಿ ಖಾದರ್ ಅವರನ್ನೇ ‘ಹಂದಿ’ಗೆ ಹೋಲಿಸಿ, ಕಮೆಂಟ್ ಮಾಡಲಾಗಿದೆ. ಸೈಬರ್ ಸೆಲ್ ಪೊಲೀಸರು ಅಥವಾ ವಿಧಾನಸೌಧದ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಸರ್ಕಾರ ಈ ಬಗ್ಗೆ ಏನು ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...