ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ದಶಕಗಳ ನಂತರ ಮಹಿಳಾ ಅಭ್ಯರ್ಥಿ ಕಣಕ್ಕೆ, ಯಾರ ಕೈ ಹಿಡಿಯಲಿದ್ದಾರೆ ಮತದಾರರು?

Date:

ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದ ಈ ಕ್ಷೇತ್ರ ಈ ಬಾರಿ ಹಾಲಿ ಸಂಸದ ಆನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ನೀಡದ ಕಾರಣ, ಎರಡು ಪಕ್ಷಗಳ ನಡುವೆ ಜಿದ್ದಾಜಿದ್ದಿ ಕಣವಾಗಿದೆ.

ಕಾಂಗ್ರೆಸ್‌ನಿಂದ ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಕಣಕ್ಕಿದರೆ, ಇತ್ತ ಬಿಜೆಪಿಯಿಂದ ಶಿರಸಿ ಕ್ಷೇತ್ರದ ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವರ್ಧೆಯಲ್ಲಿದ್ದಾರೆ. ಇಬ್ಬರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಲೋಕಸಭೆಯಲ್ಲಿ ಸ್ವರ್ಧಿಸುವ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಎರಡು ದಶಕಗಳ ನಂತರ ಮಹಿಳಾ ಅಭ್ಯರ್ಥಿ ಕಣಕ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1999ರಲ್ಲಿ ಮಾರ್ಗರೇಟ್ ಆಳ್ವ ಕಾಂಗ್ರೆಸ್‌ ಸಂಸದೆಯಾಗಿ ಆಯ್ಕೆಯಾಗಿದ್ದರು. ತದನಂತರ ಈ ಕ್ಷೇತ್ರದಲ್ಲಿ ಯಾವ ಪಕ್ಷದಲ್ಲೂ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಈ ಬಾರಿ ಅಂಜಲಿ ನಿಂಬಾಳ್ಕರ್ ಅವರು ಸ್ವರ್ಧಿಸುವ ಮೂಲಕ ದಶಕಗಳ ನಂತರ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಸಲಾಗಿದೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಖಾನಾಪುರ, ಕಿತ್ತೂರು, ಹಳಿಯಾಳ, ಕಾರವಾರ ಕ್ಷೇತ್ರದಲ್ಲಿ ಕ್ಷತ್ರಿಯ ಮರಾಠಾ ಸಮುದಾಯದವರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಈ ಸಮುದಾಯದ ಮತಗಳನ್ನು ಅಂಜಲಿ ನಿಂಬಾಳ್ಕರ್ ಸೆಳೆಯಬಲ್ಲವರು. ಜೊತೆಗೆ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಗಳನ್ನು ಒಟ್ಟುಗೂಡಿಸಬಲ್ಲವರು ಎಂಬ ಕಾಂಗ್ರೆಸ್‌ ಇವರನ್ನು ಕಣಕ್ಕಿಸಿದೆ.

ಬೆಳಗಾವಿ ಜಿಲ್ಲೆಯ ಭಾಗವನ್ನೂ ಈ ಕ್ಷೇತ್ರ ಒಳಗೊಂಡ ಕಾರಣ, ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ, ಈ ಕ್ಷೇತ್ರಕ್ಕೆ ಪರಿಚಿತರು. ಲೋಕಸಭೆಗೆ ಹೊಸಮುಖ ಮತ್ತು ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲುವ ಸಾಧ್ಯತೆ ಎಂದು ಡಾ. ಅಂಜಲಿ ಅವರನ್ನು ಕಣಕ್ಕಿಳಿಸಿದೆ.

ಮಹಿಳಾ ಮತದಾರರು ಗಣನೀಯ ಸಂಖ್ಯೆಯಲ್ಲಿರುವ ಕಾರಣ, ಗ್ಯಾರಂಟಿ ಯೋಜನೆಯಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಗಳಿಂದ ಮಹಿಳಾ ಸಬಲೀಕರಣದ ಕಡೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಕಾರಣದಿಂದ ಮಹಿಳಾ ಮತದಾರರರು ಕೈ ಹಿಡಿಯುತ್ತಾರೆ ಎಂಬ ಲೆಕ್ಕಚಾರವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮತಗಳು ಪಡೆದು ಐದು ಕ್ಷೇತ್ರಗಳಲ್ಲಿ ಗೆದ್ದಿರುವುದು ಕೂಡಾ ಪ್ಲಸ್ ಪಾಯಿಂಟ್.

ವಿಶ್ವೇಶ್ವರ ಹೆಗಡೆ ಕಾಗೇರಿಗೆ ಒಲಿದ ಟಿಕೆಟ್

ಕಳೆದ ನಾಲ್ಕು ಚುನಾವಣೆಗಳಲ್ಲಿ ಅನಂತಕುಮಾರ್ ಹೆಗಡೆ ಅವರೇ ಬಿಜೆಪಿ ಅಭ್ಯರ್ಥಿ. ಅವರೆ ಗೆದ್ದು ಬರುತ್ತಿದ್ದರು. ಈ ಬಾರಿ ಅನಂತಕುಮಾರ್ ಹೆಗಡೆ ವಿರುದ್ದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಕಾರಣ ಶಿರಸಿ ಕ್ಷೇತ್ರದ ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 1994 ರಿಂದ 2004 ರ ವರೆಗೆ ಮೂರು ಸಲ ಅಂಕೋಲ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಕ್ಷೇತ್ರ ಮರು ವಿಂಗಡಣೆಯಾದ ನಂತರದಿಂದ ಶಿರಸಿ ಕ್ಷೇತ್ರದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾದರು. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭೀಮಣ್ಣ ನಾಯ್ಕ ಅವರ ವಿರುದ್ಧ ಸೋತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಬಿಜೆಪಿಯ ಭದ್ರಕೋಟೆಯಾಗಿರುವ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಉತ್ತಮ ಅಭ್ಯರ್ಥಿ. ಸತತವಾಗಿ ಗೆದ್ದು 6 ಬಾರಿ ವಿಧಾನಸಭೆಗೆ ಆಯ್ಕೆಯಾಗಿ, ಸಚಿವರಾಗಿ ಕ್ಷೇತ್ರದಲ್ಲಿ ಚಿರಪರಿಚಿತವಾಗಿರುವ ಇವರು ಸುಲಭವಾಗಿ ಗೆದ್ದು ಬರುತ್ತಾರೆ ಎಂಬುವ ಲೆಕ್ಕಚಾರ ಬಿಜೆಪಿಯದ್ದು.

ಆದರೆ ಬಿಜೆಪಿ ಟಿಕೆಟ್ ಘೋಷಣೆಯಾದಾಗಿನಿಂದ ಕ್ಷೇತ್ರದಲ್ಲಿ ಹಾಲಿ ಸಂಸದ ಆನಂತಕುಮಾರ್ ಹೆಗಡೆ ಯಾರ ಕೈಗೂ ಸಿಗದೆ ಮೌನವಾಗಿಯೇ ಬಂಡಾಯ ಎದ್ದಂತೆ ಕಾಣುತ್ತಿದೆ. ಸದ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ.

ಒಟ್ಟಾರೆಯಾಗಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿ ಕಣವಾಗಲಿದ್ದು ಬಿಜೆಪಿಯ ಭದ್ರಕೋಟೆ ಉಳಿಸಿಕೊಳ್ಳುತ್ತಾ? ಮತದಾರರು ಕಾಂಗ್ರೆಸ್ ಕೈ ಹಿಡಿಯುತ್ತಾರಾ ಕಾದು ನೋಡಬೇಕಿದೆ.

WhatsApp Image 2025 11 17 at 5.24.20 PM
ಸಂತೋಷ್‌ ಎಚ್‌ ಎಂ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...