ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಬಿಜೆಪಿ ಭದ್ರಕೋಟೆಯಲ್ಲಿ ಹೊಸಬರಿಗೆ ಮಣೆ, ಕಾಂಗ್ರೆಸ್‌ನಿಂದ ಮಹಿಳಾ ಅಭ್ಯರ್ಥಿ ಕಣಕ್ಕೆ?

Date:

ಉತ್ತರ ಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಒಂದು. ಗೋವಾ ರಾಜ್ಯ, ಧಾರವಾಡ, ಬೆಳಗಾವಿ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳೊಂದಿಗೆ ತನ್ನ ಗಡಿಗಳನ್ನು ಹಂಚಿಕೊಂಡಿದೆ. ಪಶ್ಚಿಮಕ್ಕೆ ಅರಬ್ಬಿ ಸಮುದ್ರವಿದೆ. ಅತಿಹೆಚ್ಚು ಅರಣ್ಯಪ್ರದೇಶದಿಂದ ಕೂಡಿರುವ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾದ ಕ್ಷೇತ್ರ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರವು ಹಿಂದೆ ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು. 2008ರಲ್ಲಿ ಸಂಸದೀಯ ಕ್ಷೇತ್ರಗಳ ವಿಂಗಡಣೆಯ ನಂತರ, ಈ ಕ್ಷೇತ್ರವನ್ನು ಮರುನಾಮಕರಣ ಮಾಡಲಾಯಿತು. ಕ್ಷೇತ್ರ ವಿಂಗಣೆಯ ನಂತರ ಮೂರು ಚುನಾವಣೆ ನಡೆದಿದ್ದು ಮೂರು ಬಾರಿಯೂ ಬಿಜೆಪಿಯ ಅನಂತಕುಮಾರ್ ಹೆಗಡೆ ಸಂಸದರಾಗಿ ಆಯ್ಕೆಯಾಗಿದ್ದಾರೆ.

ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಈ ಕ್ಷೇತ್ರವು ಹಾಲಿ ಸಂಸದ ಅನಂತಕುಮಾರ್ ಹೆಗಡೆ ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯರಾಗಿಲ್ಲದೆ ಹಿಂದೆ ಸರಿದಿರುವುದರಿಂದ ಬಿಜೆಪಿ ಹೊಸ ಮುಖಕ್ಕೆ ಹುಡುಕಾಟ ನಡೆಸಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ, ಚಕ್ರವರ್ತಿ ಸೂಲಿಬೆಲೆ ಮತ್ತು ಹರಿಪ್ರಕಾಶ್ ಕೋಣೆಮನೆ ಹೆಸರು ಕೇಳಿಬರುತ್ತಿದೆ. ಇತ್ತ ಕಾಂಗ್ರೆಸ್ ಮಹಿಳಾ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಥವಾ ರವೀಂದ್ರ ನಾಯಕ್ ಅವರನ್ನು ಕಣಕಿಳಿಸುವ ಚಿಂತನೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರಕನ್ನಡ ಲೋಕಸಭಾ ಕ್ಷೇತ್ರ ಬೆಳಗಾವಿಯ ಕಿತ್ತೂರು, ಖಾನಾಪುರ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಉತ್ತರಕನ್ನಡದ 6 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರ ಹಾಗೂ ಉತ್ತರಕನ್ನಡದ ಹಳಿಯಾಳ, ಶಿರಸಿ,ಕಿತ್ತೂರು, ಕಾರವಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರುಗಳು ಆಯ್ಕೆ ಆಗಿದ್ದಾರೆ. ಇನ್ನು ಯಲ್ಲಾಪುರ, ಕುಮಟಾ ಹಾಗೂ ಖಾನಾಪುರ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರನ್ನು ಹೊಂದಿದೆ. ಆದರೆ, ಉತ್ತರಕನ್ನಡ ಲೋಕಸಭಾ ಕ್ಷೇತ್ರ ಕಳೆದ ಮೂರು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದೆ.

ಕೆನರಾ – ಉತ್ತರಕನ್ನಡ ಲೋಕಸಭಾ ಕ್ಷೇತ್ರ 17 ಲೋಕಸಭಾ ಚುನಾವಣೆ ಕಂಡಿದೆ. ಇದರಲ್ಲಿ 10 ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದರೆ, ಸ್ವತಂತ್ರ ಅಭ್ಯರ್ಥಿ ಒಂದು ಬಾರಿ ಗೆದ್ದರೆ, ಬಿಜೆಪಿ 6 ಬಾರಿ ಗೆಲುವು ಕಂಡಿದೆ.

ಇದುವರೆಗಿನ ಸಂಸದರು
1952, 1957 ಮತ್ತು 1962 ಜೋಕಿಮ್ ಆಳ್ವಾ, ಕಾಂಗ್ರೆಸ್
1967- ದಿನಕರ ದೇಸಾಯಿ, ಸ್ವತಂತ್ರ
1971-ಬಿ.ವಿ.ನಾಯ್ಕ, ಕಾಂಗ್ರೆಸ್
1977-ಬಲ್ಸು ಪುರ್ಸು ಕದಮ್, ಕಾಂಗ್ರೆಸ್
1980, 1984,1989 ಮತ್ತು 1991 ಜಿ. ದೇವರಾಯ ನಾಯ್ಕ, ಕಾಂಗ್ರೆಸ್
1996, 1998- ಅನಂತಕುಮಾರ ಹೆಗಡೆ, ಬಿಜೆಪಿ
1999-ಮಾರ್ಗರೇಟ್ ಆಳ್ವಾ, ಕಾಂಗ್ರೆಸ್
2004, 2009, 2014 ಮತ್ತು 2019-ಅನಂತಕುಮಾರ ಹೆಗಡೆ, ಬಿಜೆಪಿ

ಸಾರ್ವತ್ರಿಕ ಚುನಾವಣೆ – 2014
ಅನಂತ್ ಕುಮಾರ್ ಹೆಗಡೆ – 5,46,939 – ಬಿಜೆಪಿ
ಪ್ರಶಾಂತ ಆರ್. ದೇಶಪಾಂಡೆ – 4,06,239 – ಕಾಂಗ್ರೆಸ್
ಗೆಲುವಿನ ಅಂತರ – 1,40,700

ಸಾರ್ವತ್ರಿಕ ಚುನಾವಣೆ – 2019
ಅನಂತ್ ಕುಮಾರ್ ಹೆಗಡೆ – 7,86,042 – ಬಿಜೆಪಿ
ಆನಂದ್ ಅಸ್ನೋಟಿಕರ್ – 3,06,393 – ಜೆಡಿ(ಎಸ್)
ಗೆಲುವಿನ ಅಂತರ – 4,79,649

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಳಿಯಾಳ, ಕಾರವಾರ, ಕುಮಟಾ, ಭಟ್ಕಳ, ಶಿರಸಿ, ಯಲ್ಲಾಪುರ, ಕಿತ್ತೂರು, ಖಾನಾಪುರ, ವಿಧಾನಸಭಾ ಕ್ಷೇತ್ರ ಸೇರಿ 8 ವಿಧಾನಸಭಾ ಕ್ಷೇತ್ರಗಳು ಒಳಗೊಂಡಿದೆ.
ಕ್ಷೇತ್ರದಲ್ಲಿ ಒಟ್ಟು ಮತದಾರರು 16,22,857
ಪುರುಷರು – 8,15,599
ಮಹಿಳೆಯರು – 8,07,242 ಮತದಾರರಿದ್ದಾರೆ.

ಜಾತಿವಾರು ಮತದಾರರು
ನಾಮಧಾರಿ- 2 ಲಕ್ಷ, ಬ್ರಾಹ್ಮಣ- 1.6 ಲಕ್ಷ, ಗೌಡ (ಹಾಲಕ್ಕಿ/ಕರೆಒಕ್ಕಲಿಗ)- 1.10 ಲಕ್ಷ , ಮರಾಠ- 2.20 ಲಕ್ಷ, ಅಲ್ಪಸಂಖ್ಯಾತರು (ಮುಸ್ಲಿಂ/ಕ್ರಿಶ್ಚಿಯನ್)- 3 ಲಕ್ಷ, ಮೀನುಗಾರ- 80 ಸಾವಿರ, SC/ST/ಬುಡಕಟ್ಟು- 2 ಲಕ್ಷ, ಲಿಂಗಾಯತ- 1 ಲಕ್ಷ, ಮಡಿವಾಳ- 40 ಸಾವಿರ, ಕೋಮಾರಪಂಥ- 35 ಸಾವಿರ, ದೈವಜ್ಞ ಬ್ರಾಹ್ಮಣ- 40 ಸಾವಿರ, ಭಂಡಾರಿ- 40 ಸಾವಿರ, ಇತರರು- 82,600 ಸಾವಿರ

WhatsApp Image 2025 11 17 at 5.24.20 PM
ಸಂತೋಷ್‌ ಎಚ್‌ ಎಂ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...