ವಾಲ್ಮೀಕಿ ನಿಗಮ ಅಕ್ರಮ | ರಾಹುಲ್ ಗಾಂಧಿಗೆ ಹಣ ಸಂದಾಯ ಬಯಲಾಗದಿರಲಿ ಎಂದು ಸಿಬಿಐಗೆ ಕೊಡುತ್ತಿಲ್ಲ: ಡಿ ವಿ ಸದಾನಂದಗೌಡ

Date:

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಸ್‍ಐಟಿಗಳು ರಾಜ್ಯ ಸರಕಾರ ನೀಡುವ ಆದೇಶ ಪಾಲಿಸುವ ಏಜೆನ್ಸಿಗಳು. ಸತ್ಯಾಂಶ ಹೊರಕ್ಕೆ ಬರಲು ಸಿಬಿಐ ತನಿಖೆ ಮಾಡಿಸಿ” ಎಂದು ಆಗ್ರಹಿಸಿದರು.

“ಇಷ್ಟು ದೀರ್ಘ ಕಾಲ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರಿಗೆ ನಾಗೇಂದ್ರರನ್ನು ವಜಾ ಮಾಡುವ ಧೈರ್ಯ ಇಲ್ಲ. ಭ್ರಷ್ಟಾಚಾರಕ್ಕೆ ಪುಷ್ಟಿ ಕೊಡುವ ದಾರಿಯಲ್ಲಿ ಮುಂದೆ ಮುಂದೆ ಹೋಗುತ್ತಿದ್ದಾರೆ. ನಾನು ಮುಖ್ಯಮಂತ್ರಿ ಆಗಿದ್ದರೆ ಇಂಥ ಸಚಿವನನ್ನು ಮರುದಿನವೇ ವಜಾ ಮಾಡುತ್ತಿದ್ದೆ. ಚಂದ್ರಶೇಖರರ ಆತ್ಮಹತ್ಯೆ ನಡೆದಿದೆ. ಈ ಹಗರಣ ಭ್ರಷ್ಟಾಚಾರಕ್ಕೆ ಒಂದು ಜ್ವಲಂತ ಸಾಕ್ಷಿ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲವು ಖಾಸಗಿ ವ್ಯಕ್ತಿಗಳಿಗೆ ಹಣ ವರ್ಗಾವಣೆ ಆಗಿದ್ದು, ಸರಕಾರ ಮಾಹಿತಿ ಕೊಡುತ್ತಿಲ್ಲ ಎಂದು ಟೀಕಿಸಿದರು. ನಿಗಮದ ಅಧ್ಯಕ್ಷರು ಸತ್ಯ ಸಂಗತಿ ಯಾಕೆ ಬಿಡುಗಡೆ ಮಾಡಿಲ್ಲ ಎಂದ ಅವರು, ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಹಾಗೂ ಸಿಬಿಐ ತನಿಖೆ ಮಾಡಿಸಲು ಒತ್ತಾಯಿಸಿದರು. ನಾಗೇಂದ್ರರು 2 ದಿನಗಳಿಂದ ಕಾಣೆಯಾಗಿದ್ದಾರೆ; ಇದರ ಕುರಿತು ಸಿಎಂ ಮಾಹಿತಿ ಕೊಡಲಿ” ಎಂದು ಆಗ್ರಹಿಸಿದರು.

“15 ಖಾಸಗಿ ಕಂಪನಿಗಳಿಗೆ ಹಣ ವರ್ಗಾವಣೆ ಆಗಿದೆ. ಇದು ನೇರವಾಗಿ ಕಾಂಗ್ರೆಸ್ಸಿನ ಎಟಿಎಂಗೆ ಹೋಗುವ ಹಣವೆಂದು ಸಾಬೀತು ಪಡಿಸಿದೆ. ಸಚಿವರ ಸೂಚನೆ ಅಡಿಯಲ್ಲೇ ಇದು ನಡೆದಿದೆ ಎಂದು ಹೇಳಿದ್ದರೂ ಸಿದ್ದರಾಮಯ್ಯನವರು ಜಾಣಕುರುಡರಾಗಿ ನಾಗೇಂದ್ರರ ರಾಜೀನಾಮೆ ಪಡೆದಿಲ್ಲ” ಎಂದು ಟೀಕಿಸಿದರು.

ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಎಸ್.ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಮುಖಂಡ ಜಗದೀಶ ಹಿರೇಮನಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...