ವಾಲ್ಮೀಕಿ ನಿಗಮ ಅಕ್ರಮ | ಅಗತ್ಯ ಬಂದರೆ ನಾವೇ ಸಿಬಿಐಗೆ ಪ್ರಕರಣ ಕೊಡುತ್ತೇವೆ: ಸಚಿವ ಪರಮೇಶ್ವರ್‌

Date:

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಳ್ಳಲು ಕಾನೂನು ಇದೆ. ಅದರಂತೆ ಸಿಬಿಐ ಕೇಸ್ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ತಿಳಿಸಿದರು.

ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು” ಎಂದರು.

“ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ಅನ್ನು ಸಿಬಿಐಗೆ ನಾವೇ ಕೊಡುತ್ತೇವೆ. ಮೊದಲು ಅವರು ಪತ್ರ ಬರೆಯಲಿ. ನಾವು ಕ್ಯಾಬಿನೆಟ್​​ನಲ್ಲಿ ನಿರ್ಧಾರ ಮಾಡುತ್ತೇವೆ” ಎಂದು ಪರಮೇಶ್ವರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, “ಬೇರೆ ಬೇರೆ ರೀತಿಯಲ್ಲಿ ಅಂದಾಜು ಮಾಡಿದ್ದೆವು. ಅದು ಏರುಪೇರು ಆಗಿದೆ. 50 ಸಾವಿರದ ಅಂತರದಲ್ಲಿ ಯಾರೆಲ್ಲ ಸೋತಿದ್ದಾರೆಯೋ ಆ ಕ್ಷೇತ್ರಗಳಲ್ಲಿ ಅಲ್ಲಿ ಇನ್ನಷ್ಟು ಎಫರ್ಟ್ ಹಾಕಬೇಕಿತ್ತು. ತುಮಕೂರನಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ನಮ್ಮ ಅಭ್ಯರ್ಥಿ ಸೋತಿದ್ದಾರೆ” ಎಂದು ತಿಳಿಸಿದರು.

“ತುಮಕೂರಿನ ಸೋಲಿನ ಬಗ್ಗೆ ನಾನು ಮತ್ತು ರಾಜಣ್ಣ ನಾಯಕರಿಗೆ ಉತ್ತರ ಕೋಡುತ್ತೇವೆ. ಮೈತ್ರಿ ವರ್ಕೌಟ್ ಆಗಲ್ಲ ಅಂದುಕೊಂಡಿದ್ದೆವು. ತುಮಕೂರಿನಲ್ಲಿ ಇದು ವರ್ಕೌಟ್ ಆಗಿದೆ. ಕೆಲವು ಸಚಿವರಿಗೆ ಹಿನ್ನಡೆ ಆಗಿದೆ. ಅದನ್ನು ಒಪ್ಪಿಕೊಳ್ಳಲೇಬೇಕು” ಎಂದು ಹೇಳಿದರು.

“ಏಕ್ಸಿಟ್ ಪೋಲ್​​ಗಳಲ್ಲಿ ಫಲಿತಾಂಶ ಏಕಮುಖವಾಗಿದೆ ಎಂದು ಮಾಧ್ಯಮಗಳು ಬಿಂಬಿಸಿದ್ದವು. ಆದರೆ, ಫಲಿತಾಂಶ ಬೇರೆ ತರಹ ಬಂದಿದೆ. ಮೋದಿ 400 ಸ್ಥಾನ ಗೆಲ್ಲುತ್ತಾರೆ ಎಂಬ ನೀರಿಕ್ಷೆ ಸುಳ್ಳಾಗಿದೆ. ಇಂಡಿಯಾ ಒಕ್ಕೂಟ ಹೆಚ್ಚು ಸೀಟ್ ಗೆದ್ದಿದೆ. ವಿರೋಧ ಪಕ್ಷ ಗಟ್ಟಿಯಾಗಿ‌ ಉಳಿಯತ್ತೆ ಅಂತ ತೋರಿಸಿದ್ದಾರೆ. ಮೋದಿಗೆ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ. ಬಿಜೆಪಿಗೆ ಬಹುಮತ ಬಂದಿಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...