ವಾಲ್ಮೀಕಿ ನಿಗಮ ಅಕ್ರಮ ಸಾಬೀತು, ಬಳ್ಳಾರಿ ಕಾಂಗ್ರೆಸ್ ಸಂಸದರ ಆಯ್ಕೆ ರದ್ದಾಗಲಿ: ವಿಜಯೇಂದ್ರ ಆಗ್ರಹ

Date:

ಕೇಂದ್ರದ ಜಾರಿ ನಿರ್ದೇಶನಾಲಯ ಮಧ್ಯಪ್ರವೇಶದಿಂದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿಯಾದ ಹಣದ ಮೂಲ ಪತ್ತೆಯಾಗಿದೆ, ನಿಜವಾದ ಅಪರಾಧಿಗಳ ಮುಖವಾಡ ಬಯಲಾಗಿದೆ. ರಾಜ್ಯ ಸರ್ಕಾರದ ಎಸ್ಐಟಿ ತನಿಖೆ ‘ಬೆಟ್ಟ ಅಗೆದು ಇಲಿ ಹಿಡಿದಂತೆ’ ಕಸರತ್ತು ನಡೆಸಿ ನಿಜವಾದ ಅಪರಾಧಿಗಳನ್ನು ರಕ್ಷಿಸಲು ವ್ಯರ್ಥ ಪ್ರಯತ್ನ ನಡೆಸಿದೆ ಎನ್ನುವುದು ಅದು ಸಲ್ಲಿಸಿರುವ ಆರೋಪ ಪಟ್ಟಿಯೇ ಸಾಕ್ಷಿ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಇತಿಹಾಸದಲ್ಲಿ ಕಂಡು ಕೇಳರಿಯದ ಸರ್ಕಾರಿ ಖಾತೆಗಳಿಗೆ ಕನ್ನ ಹಾಕಿದ ಹಗರಣ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ಮೇಲುಸ್ತುವಾರಿಯಲ್ಲೇ ನಡೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ‘ಬೇಲಿಯೇ ಎದ್ದು ಹೊಲ ಮೇಯ್ದ’ ಉದಾಹರಣೆ ಉಲ್ಲೇಖಿಸಲು ಭವಿಷ್ಯತ್ತಿನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮೊದಲನೆಯ ಸ್ಥಾನದಲ್ಲಿ ನಿಲ್ಲಲಿದೆ, ಸದ್ಯ ಇಡಿ ಪಾರದರ್ಶಕವಾಗಿ ತನಿಖೆ ನಡೆಸಿ ಕಾಂಗ್ರೆಸ್ ಸರ್ಕಾರದ ಸಚಿವರೇ ಭಾಗಿಯಾಗಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ಮಹತ್ವದ ಹೆಜ್ಜೆಯನ್ನು ಇಟ್ಟಿದೆ” ಎಂದಿದ್ದಾರೆ.

“ಲೂಟಿಯಾದ ಹಣ ಯಾರ್ಯಾರಿಗೋ ಹರಿದು ಹಂಚಿ ಹೋಗಿರುವ ಭಾಗದಲ್ಲಿ ಲೋಕಸಭಾ ಚುನಾವಣೆಗೆ ಬಹುದೊಡ್ಡ ಮೊತ್ತ ಬಳಕೆಯಾಗಿರುವುದು ಸ್ಪಷ್ಟವಾಗಿದೆ. ರಾಜ್ಯದ ಲೋಕಸಭಾ ಚುನಾವಣೆಯಲ್ಲಿ 9 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ಯಾವ ಪರಿಯಲ್ಲಿ ಚುನಾವಣೆಯನ್ನು ಜಯಿಸಿದೆ ಎನ್ನುವುದನ್ನು ಬಳ್ಳಾರಿಯ ಲೋಕಸಭೆಯ ಫಲಿತಾಂಶದಲ್ಲಿ ಉತ್ತರ ದೊರಕಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುರ್ಮಾರ್ಗಗಳಿಂದ ಗಳಿಸಿದ ಕಪ್ಪು ಹಣದಿಂದ ಚುನಾವಣೆ ಜಯಿಸುತ್ತಿದ್ದ ಕಾಂಗ್ರೆಸ್ ಇದೀಗ ಸರ್ಕಾರಿ ಖಾತೆಯಿಂದ ಲೂಟಿಯಾದ ಹಣದಿಂದಲೂ ಚುನಾವಣೆ ನಿರ್ವಹಿಸುವಷ್ಟು ಕೀಳುಮಟ್ಟದ ಕ್ರಿಮಿನಲ್ ಮಾರ್ಗ ಅನುಸರಿಸುತ್ತಿದೆ, ಇನ್ನು ‘ಕೈ’ ಪಕ್ಷದ ವರಿಷ್ಠರಿಗೆ ಯಾವ ನೈತಿಕತೆಯೂ ಉಳಿದಿಲ್ಲ, ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಯಾವ ಲಜ್ಜೆಗೇಡಿ ಮಾರ್ಗವನ್ನು ಅನುಸರಿಸಲು ಹಿಂದೇಟು ಹಾಕುವುದಿಲ್ಲ ಎನ್ನುವುದನ್ನು ಸಾಬೀತು ಪಡಿಸುತ್ತದೆ” ಎಂದು ಟೀಕಿಸಿದ್ದಾರೆ.

“ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಲೂಟಿಕೋರತನದ ಹಣವನ್ನು ಚುನಾವಣೆಗೆ ಬಳಸಿಕೊಂಡಿರುವುದು ಲಜ್ಜೆತನದ ಪರಮಾವಧಿಯಾಗಿದೆ. ಇ.ಡಿ ತನಿಖೆ ಇನ್ನಷ್ಟು ವಿಸ್ತರಿಸಿದರೆ ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿದ್ದ ದೊಡ್ಡ ಶಕ್ತಿಗಳ ಮುಖವಾಡವೂ ಬಯಲಾಗುತ್ತದೆ. ಮುಂದಿನ ವಿಚಾರಣೆಯಲ್ಲಿ ಈ ಹಗರಣದ ಪೂರ್ಣ ಸತ್ಯ ಬಯಲಾಗಲಿದೆ” ಎಂದು ಹೇಳಿದ್ದಾರೆ.

“ತನ್ನ ಸರ್ಕಾರದ ಸಚಿವರೊಬ್ಬರು ಈ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾದರೂ ಅದರ ಹೊಣೆಯನ್ನು ಹೊರುವಲ್ಲಿ ಮುಖ್ಯಮಂತ್ರಿಗಳು ಹಾಗೂ ಇಡೀ ಕಾಂಗ್ರೆಸ್‌ ಸರ್ಕಾರ ಏಕೆ ಹಿಂಜರಿಯುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

“ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ ಹಣ ಬಳಕೆಯಾಗಿರುವುದು ಸಾಕ್ಷಿ ಸಮೇತ ಸಾಬೀತಾಗಿದೆ. ಚುನಾವಣಾ ಆಯೋಗವು ಈ ಕೂಡಲೇ ಮಧ್ಯಪ್ರವೇಶಸಿ ಈ ಆಯ್ಕೆಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...