ಬಿಜೆಪಿಗೆ ವೇದಾಂತ ನೀಡಿದ ದೇಣಿಗೆ ನಾಲ್ಕು ಪಟ್ಟು ಹೆಚ್ಚಳ: 97 ಕೋಟಿ ರೂ. ನೀಡಿದ ಗಣಿಗಾರಿಕೆ ಸಂಸ್ಥೆ

Date:

ಬಿಲಿಯನೇರ್ ಅನಿಲ್ ಅಗರ್ವಾಲ್ ಅವರ ಗಣಿಗಾರಿಕೆ ಸಂಸ್ಥೆ ವೇದಾಂತ ಲಿಮಿಟೆಡ್, ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ನೀಡಿದ ದೇಣಿಗೆಗಳು ನಾಲ್ಕು ಪಟ್ಟು ಹೆಚ್ಚಾಗಿದೆ. ಮಾರ್ಚ್ 2025ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ವೇದಾಂತ ಬಿಜೆಪಿಗೆ 97 ಕೋಟಿ ರೂ.ಗಳನ್ನು ನೀಡಿದೆ ಎಂದು ಅದರ ಇತ್ತೀಚಿನ ವಾರ್ಷಿಕ ವರದಿ ತಿಳಿಸಿದೆ.

ವೇದಾಂತವು ತನ್ನ ಪೋಷಕ ಸಂಸ್ಥೆಯಾದ ಲಂಡನ್‌ನ ವೇದಾಂತ ರಿಸೋರ್ಸಸ್ ಪಿಎಲ್‌ಸಿಗೆ ‘ವಿವಿಧ ವೆಚ್ಚಗಳು’ ಅಡಿಯಲ್ಲಿ ನೀಡಿದ ರಾಜಕೀಯ ದೇಣಿಗೆಗಳು ಮತ್ತು ನಿರ್ವಹಣೆ ಮತ್ತು ಬ್ರಾಂಡ್ ಶುಲ್ಕದ ವೆಚ್ಚಗಳನ್ನು ತನ್ನ ವಾರ್ಷಿಕ ವರದಿಯಲ್ಲಿ ವಿವರಿಸಿದೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯ ದೇಣಿಗೆಗಳು 2024-25ರಲ್ಲಿ ಒಟ್ಟು 157 ಕೋಟಿ ರೂ.ಗಳಾಗಿದ್ದು, ಹಿಂದಿನ ಹಣಕಾಸು ವರ್ಷದಲ್ಲಿ ಇದು 97 ಕೋಟಿ ರೂ.ಗಳಷ್ಟಿತ್ತು. ಬಿಜೆಪಿಗೆ ನೀಡಿದ ದೇಣಿಗೆ ಗಗನಕ್ಕೇರಿದರೆ, ವಿರೋಧ ಪಕ್ಷ ಕಾಂಗ್ರೆಸ್‌ಗೆ ನೀಡಿದ ದೇಣಿಗೆ ಕೇವಲ ಹತ್ತು ಕೋಟಿ ರೂಪಾಯಿಗಳಿಗೆ ಇಳಿಕೆಯಾಗಿದೆ ಎಂದು ವರದಿಯಾಗಿದೆ.

ಯಾವ ಪಕ್ಷಕ್ಕೆ ಎಷ್ಟು ದೇಣಿಗೆ ನೀಡಿದೆ?

2024ರ ಏಪ್ರಿಲ್‌ನಿಂದ 2025ರ ಮಾರ್ಚ್‌ವರೆಗಿನ ಹಣಕಾಸು ವರ್ಷ 2025ರಲ್ಲಿ ವೇದಾಂತ ದೇಣಿಗೆಯಾಗಿ ಬಿಜೆಪಿಗೆ 97 ಕೋಟಿ ರೂಪಾಯಿ, ಬಿಜು ಜನತಾ ದಳಕ್ಕೆ 25 ಕೋಟಿ ರೂಪಾಯಿ, ಜಾರ್ಖಂಡ್ ಮುಕ್ತಿ ಮೋರ್ಚಾ 20 ಕೋಟಿ ರೂಪಾಯಿ, ಕಾಂಗ್ರೆಸ್‌ಗೆ 10 ಕೋಟಿ ರೂಪಾಯಿ ನೀಡಿದೆ ಎಂದು 2024-25ರ ವಾರ್ಷಿಕ ವರದಿ ಹೇಳುತ್ತದೆ.

2024 ಮಾರ್ಚ್‌ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ಬಿಜೆಪಿಗೆ 26 ಕೋಟಿ ರೂಪಾಯಿ, ಬಿಜು ಜನತಾ ದಳಕ್ಕೆ 15 ಕೋಟಿ ರೂಪಾಯಿ, ಜಾರ್ಖಂಡ್ ಮುಕ್ತಿ ಮೋರ್ಚಾಕ್ಕೆ 5 ಕೋಟಿ ರೂಪಾಯಿ, ಕಾಂಗ್ರೆಸ್‌ಗೆ 49 ಕೋಟಿ ರೂಪಾಯಿ ವೇದಾಂತ ನೀಡಿತ್ತು.

ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ಸಂಸ್ಥೆಗಳಲ್ಲಿ ವೇದಾಂತವು ಒಂದಾಗಿದೆ. 2022-23ರಲ್ಲಿ ಇದು ರಾಜಕೀಯ ಪಕ್ಷಗಳಿಗೆ ಒಟ್ಟು 155 ಕೋಟಿ ರೂ.ಗಳನ್ನು ಮತ್ತು 2021-22ರಲ್ಲಿ 123 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿತ್ತು.

ಇದೀಗ ಚುನಾವಣಾ ಬಾಂಡ್ ಆರಂಭದಿಂದ ರದ್ದಾದವರೆಗಿನ ವೇದಾಂತದ ದೇಣಿಗೆಯನ್ನೂ ಬಹಿರಂಗಪಡಿಸಲಾಗಿದೆ. 2017ರಿಂದ ಪ್ರಾರಂಭವಾದ ಐದು ವರ್ಷಗಳಲ್ಲಿ ರಾಜಕೀಯ ಪಕ್ಷಗಳಿಗೆ ವೇದಾಂತ 457 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...