ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ ಹಿರಿಯ ಪತ್ರಕರ್ತನ ಅಪಹರಣ

Date:

ಮಣಿಪುರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿರುವ ರಾಜಕೀಯ ವಲಯದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ. ಈ ಬಗ್ಗೆ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬೆನ್ನಲ್ಲೇ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಮ್ಬೆಮ್ ಎಂಬವರನ್ನು ಅಪಹರಣ ಮಾಡಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಸಿಎಂ ಸ್ಥಾನಕ್ಕೆ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಮಣಿಪುರದಲ್ಲಾದ ರಾಜಕೀಯ ಬೆಳವಣಿಗೆ ಬಗ್ಗೆ ಪತ್ರಕರ್ತ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದರು. ಬಳಿಕ ಮನೆಗೆ ತೆರಳಿದ್ದರು. ಈ ವೇಳೆ ಅಪಹರಣ ನಡೆದಿದೆ ಎಂದು ಲಾಬಾ ಸಹೋದರ, ನಿವೃತ್ತ ಸೇನಾ ಮೇಜರ್ ಯಮ್ಬೆಮ್ ಅಂಗಾಂಬ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರದಲ್ಲಿ ಅಧಿವೇಶನ ಕರೆಯದೆ ಸಂವಿಧಾನದ ನೀತಿಯ ಉಲ್ಲಂಘನೆ; ರಾಜ್ಯಪಾಲರ ವಿರುದ್ದ ಕಾಂಗ್ರೆಸ್‌ ಟೀಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ದೈನಂದಿನ ಮಾಧ್ಯಮ ಸ್ಟೇಟ್ಸ್‌ಮ್ಯಾನ್‌ನಲ್ಲಿ ವಿಶೇಷ ವರದಿಗಾರರಾಗಿ 69 ವರ್ಷದ ಲಾಬಾ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಜಾನೆ ಸುಮಾರು ಶಸ್ತ್ರಸಜ್ಜಿತ 15-20 ಜನರು ಅಪಹರಣ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಯಾವ ಸ್ಥಳದಲ್ಲಿ ಅಪಹರಣ ನಡೆದಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಎರಡು ದಿನಗಳ ಹಿಂದಷ್ಟೇ ಲಾಬಾ ಯಮ್ಬೆಮ್ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಣಿಪುರದಲ್ಲಿ ಶಸ್ತ್ರಾಸ್ತ್ರ ಗುಂಪಿನ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಡಿದ್ದ ಪೋಸ್ಟ್ ಅನ್ನು ಡಿಲೀಟ್ ಮಾಡುವಂತೆ ಆಗ್ರಹಿಸಿದ್ದರು. ಇದಾದ ಬಳಿಕ ಪೊಲೀಸರು ಅಪರಿಚಿತ ದಾಳಿಕೋರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದರು.

ಇದನ್ನು ಓದಿದ್ದೀರಾ? ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು?

“ಅಪಹರಣ ಮಾಡಿದವರು ಲಾಬಾ ಮಣಿಪುರ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ್ದರಿಂದ ಸಿಟ್ಟುಗೊಂಡಿರಬಹುದು. ಆದರೆ ಪತ್ರಕರ್ತರಿಗೆ ಸಮಾಜದಲ್ಲಿ ಏನು ನಡೆಯುತ್ತಿದೆಯೋ ಅದರ ಬಗ್ಗೆ ಮಾತನಾಡುವ ಹಕ್ಕಿದೆ. ಲಾಬಾ ಅವರನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ನಾವು ಮನವಿ ಮಾಡುತ್ತೇವೆ” ಎಂದು ಸಹೋದರ ಹೇಳಿದ್ದಾರೆ.

ಭಾನುವಾರ ಬಿರೇನ್ ಸಿಂಗ್ ಮಣಿಪುರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಮುಂದಿನ ಸಿಎಂ ಅಭ್ಯರ್ಥಿಯ ಹುಡುಕಾಟದಲ್ಲಿ ಬಿಜೆಪಿ ತೊಡಗಿದೆ. ಅದಕ್ಕಾಗಿ ನಿರಂತರವಾಗಿ ಸಭೆ ನಡೆಸುತ್ತಲ್ಲೇ ಇದೆ. ಈ ಬಿಕ್ಕಟ್ಟಿನ ಬಗ್ಗೆ ಲಾಬಾ ಟಿವಿ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...